24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ ಮಾಚಾರು ಗುಂಡಿಕಂಡ ಮಣಿಕ್ಕೆ ಎಂಬಲ್ಲಿ ಬಾಬು ಎಂಬವರ ಮನೆಗೆ ಬಡಿದ ಸಿಡಿಲು: ಮನೆಯ ಮೀಟರ್ ಬೋರ್ಡ್, ಗೋಡೆ ಸಹಿತ, ಶೀಟ್ ಗೆ ಹಾನಿ

ಬೆಳ್ತಂಗಡಿ: ಬುಧವಾರ ಸಂಜೆ 5 ಗಂಟೆ ಸುಮಾರಿಗೆ ಮತ್ತೆ ಗುಡುಗು, ಸಿಡಿಲು ಸಹಿತ ಬಾರಿ ಮಳೆಯಾಗಿದೆ. ಉಜಿರೆ ಗ್ರಾಮದ ಮಾಚಾರು ಗುಂಡಿಕಂಡ ಮಣಿಕ್ಕೆ ಎಂಬಲ್ಲಿ ಬಾಬು ಮುಗೇರ ಎಂಬವರ ಮನೆಗೆ ಸಿಡಿಲು ಬಡಿದು ಮೀಟರ್ ಬೋರ್ಡ್, ಗೋಡೆ ಸಹಿತ, ಶೀಟ್ ಪುಡುಪುಡಿಯಾಗಿದೆ.
ಸ್ಥಳಕ್ಕೆ ಗ್ರಾಮ ಲೆಕ್ಕಾಧಿಕಾರಿ ಪ್ರದೀಪ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ ನೊಚ್ಚ, ಗ್ರಾ.ಪಂ. ಸದಸ್ಯ ಗುರುಪ್ರಸಾದ್ ‘ಟಿ ನೀಡಿ ವರದಿ ಪಡೆದಿದ್ದಾರೆ.


ಕೊಯ್ಯೂರು ಗ್ರಾಮದ ಮೈಂದಕೊಡಿ ಲೋಕಯ್ಯ ಗೌಡರ ಮನೆಯ ಬಳಿ ತೆಂಗಿನ ಮರಕ್ಕೆ ಸಿಡಿಲು ಬಿದ್ದು ಬೆಂಕಿ ಹತ್ತಿಕೊಂಡ ಘಟನೆ ನಡೆಯಿತು. ಮನೆಮಂದಿ ಇರುವ ವೇಳೆಗೆ ಸಿಡಿಲು ಬಡಿದಿದ್ದು, ಮನೆಮಂದಿ ಬೆಚ್ಚಿನಿದ್ದಿದ್ದರು. ಬಳಿಕ ಗಮನಿಸಿದಾಗ ತೆಂಗಿನ ಮರದಲ್ಲಿ ಬೆಂಕಿ ಕೆಲ ಹೊತ್ತು ಉರಿದಿದೆ.


ಬೆಳ್ತಂಗಡಿ, ನಡ, ಮಂಜೊಟ್ಟಿ, ಗುರುವಾಯನಕೆರೆ ಸಹಿತ ಗೇರುಕಟ್ಟೆ, ಕಳಿಯ ಇತರೆಡೆ ಮಳೆಯಾಗಿದ್ದು, ಗುರುವಾಯನಕೆರೆ ಕೆಲವೆಡೆ ಆಲಿಕಲ್ಲು ಮಳೆಯಾಗಿದೆ. ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದು ಚರಂಡಿ ಕಾರ್ಯ ಅಪೂರ್ಣಗೊಂಡ ಪರಿಣಾಮ ಚರ್ಚ್ ರಸ್ತೆಯಲ್ಲಿ ಮಳೆ ನೀರು ರಸ್ತೆಯಲ್ಲಿ ನಿಂತು ಪಕ್ಕಡ ಅಂಗಡಿ ಮುಂಗಟ್ಟುಗಳ ಸುತ್ತ ನೀರು ನಿಂತಿತ್ತು. ವಾಹನ ಸವಾರರು ಪರದಾಡುವಂತಾಯಿತು.

.

Related posts

ಬೆಳ್ತಂಗಡಿ ಪವರ್ ಆನ್ ಸಂಸ್ಥೆಗೆ ದಶಕದ ಸಂಭ್ರಮ: ಲಕ್ಕೀ ಸ್ಕೀಂ ಬಂಪರ್ ಡ್ರಾ

Suddi Udaya

ಕಳಿಯ ಗ್ರಾ.ಪಂ. ಮಟ್ಟದ ವೈಷ್ಣವಿ ಸಂಜೀವಿನಿ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಕುವೆಟ್ಟು: ಶ್ರೀ ರಾಮನವಮಿ ಉತ್ಸವ-ಧಾರ್ಮಿಕ ಸಭೆ

Suddi Udaya

ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ನೇತೃತ್ವದಲ್ಲಿ “ಕೊಳಂಬೆ” ಕಿರುಚಿತ್ರ ನಿರ್ಮಾಣ: ವಿಕೆ ಸ್ಟುಡಿಯೋಸ್ ಕನ್ನಡ ಕಿರುಚಿತ್ರೋತ್ಸವ 2025, ‘ಕೊಳಂಬೆ’ ಬೆಸ್ಟ್ ಕಿರುಚಿತ್ರ ಡಬಲ್ ಪ್ರಶಸ್ತಿ,ಅನೀಶ್ ಅಮೀನ್ ಗೆ ಅತ್ಯುತ್ತಮ ನಿರ್ದೇಶಕ ಪ್ರಶಸ್ತಿ

Suddi Udaya

ಬಿಜೆಪಿ ಬೆಳ್ತಂಗಡಿ ಯುವ ಮೋರ್ಚಾದಿಂದ ದೋಸೆ ಹಬ್ಬ, 75 ಸಾವಿರಕ್ಕೂ ಹೆಚ್ಚು ದೋಸೆ ಸವಿದ ಸಾರ್ವಜನಿಕರು: ವಿಶಿಷ್ಟ ಪರಿಕಲ್ಪನೆಯೊಂದಿಗೆ ದೋಸೆ ಹಬ್ಬವನ್ನು ಮಾಡಿದ ಶಾಸಕ ಹರೀಶ್ ಪೂಂಜ ರಾಜ್ಯಕ್ಕೆ ಮಾದರಿ: ಸಂಸದ ನಳಿನ್ ಕುಮಾರ್ ಕಟೀಲ್

Suddi Udaya

ಬೆಳ್ತಂಗಡಿ ಛೇಂಬರ್ ಆಫ್ ಕಾಮರ್ಸ್ ಇದರ ಮಾಸಿಕ ಸಭೆ

Suddi Udaya
error: Content is protected !!