ಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ ಮಾಚಾರು ಗುಂಡಿಕಂಡ ಮಣಿಕ್ಕೆ ಎಂಬಲ್ಲಿ ಬಾಬು ಎಂಬವರ ಮನೆಗೆ ಬಡಿದ ಸಿಡಿಲು: ಮನೆಯ ಮೀಟರ್ ಬೋರ್ಡ್, ಗೋಡೆ ಸಹಿತ, ಶೀಟ್ ಗೆ ಹಾನಿ

ಬೆಳ್ತಂಗಡಿ: ಬುಧವಾರ ಸಂಜೆ 5 ಗಂಟೆ ಸುಮಾರಿಗೆ ಮತ್ತೆ ಗುಡುಗು, ಸಿಡಿಲು ಸಹಿತ ಬಾರಿ ಮಳೆಯಾಗಿದೆ. ಉಜಿರೆ ಗ್ರಾಮದ ಮಾಚಾರು ಗುಂಡಿಕಂಡ ಮಣಿಕ್ಕೆ ಎಂಬಲ್ಲಿ ಬಾಬು ಮುಗೇರ ಎಂಬವರ ಮನೆಗೆ ಸಿಡಿಲು ಬಡಿದು ಮೀಟರ್ ಬೋರ್ಡ್, ಗೋಡೆ ಸಹಿತ, ಶೀಟ್ ಪುಡುಪುಡಿಯಾಗಿದೆ.
ಸ್ಥಳಕ್ಕೆ ಗ್ರಾಮ ಲೆಕ್ಕಾಧಿಕಾರಿ ಪ್ರದೀಪ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ ನೊಚ್ಚ, ಗ್ರಾ.ಪಂ. ಸದಸ್ಯ ಗುರುಪ್ರಸಾದ್ ‘ಟಿ ನೀಡಿ ವರದಿ ಪಡೆದಿದ್ದಾರೆ.


ಕೊಯ್ಯೂರು ಗ್ರಾಮದ ಮೈಂದಕೊಡಿ ಲೋಕಯ್ಯ ಗೌಡರ ಮನೆಯ ಬಳಿ ತೆಂಗಿನ ಮರಕ್ಕೆ ಸಿಡಿಲು ಬಿದ್ದು ಬೆಂಕಿ ಹತ್ತಿಕೊಂಡ ಘಟನೆ ನಡೆಯಿತು. ಮನೆಮಂದಿ ಇರುವ ವೇಳೆಗೆ ಸಿಡಿಲು ಬಡಿದಿದ್ದು, ಮನೆಮಂದಿ ಬೆಚ್ಚಿನಿದ್ದಿದ್ದರು. ಬಳಿಕ ಗಮನಿಸಿದಾಗ ತೆಂಗಿನ ಮರದಲ್ಲಿ ಬೆಂಕಿ ಕೆಲ ಹೊತ್ತು ಉರಿದಿದೆ.


ಬೆಳ್ತಂಗಡಿ, ನಡ, ಮಂಜೊಟ್ಟಿ, ಗುರುವಾಯನಕೆರೆ ಸಹಿತ ಗೇರುಕಟ್ಟೆ, ಕಳಿಯ ಇತರೆಡೆ ಮಳೆಯಾಗಿದ್ದು, ಗುರುವಾಯನಕೆರೆ ಕೆಲವೆಡೆ ಆಲಿಕಲ್ಲು ಮಳೆಯಾಗಿದೆ. ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದು ಚರಂಡಿ ಕಾರ್ಯ ಅಪೂರ್ಣಗೊಂಡ ಪರಿಣಾಮ ಚರ್ಚ್ ರಸ್ತೆಯಲ್ಲಿ ಮಳೆ ನೀರು ರಸ್ತೆಯಲ್ಲಿ ನಿಂತು ಪಕ್ಕಡ ಅಂಗಡಿ ಮುಂಗಟ್ಟುಗಳ ಸುತ್ತ ನೀರು ನಿಂತಿತ್ತು. ವಾಹನ ಸವಾರರು ಪರದಾಡುವಂತಾಯಿತು.

.

Related posts

ಬೆಳ್ತಂಗಡಿ: ವಲಯ ಮಟ್ಟದ ಅಂತರಾಷ್ಟ್ರೀಯ ಮಹಿಳಾ ಸಮಾವೇಶ

Suddi Udaya

ಕೊಯ್ಯೂರು: ಹರ್ಪಳ ಹಾಗೂ ಅಡ್ಯಾಲು ನಲ್ಲಿ ಕಾಲುಸಂಕಗಳ ನಿರ್ಮಾಣಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

Suddi Udaya

ಕುಕ್ಕಾವು ವೀರಪ್ಪ ಪೂಜಾರಿ ಅಸೌಖ್ಯದಿಂದ ನಿಧನ

Suddi Udaya

ಶ್ರೀ ಕಾಳಿಕಾಂಬ ಯಕ್ಷ ಕಲಾ ಟ್ರಸ್ಟ್ ವತಿಯಿಂದ ತಾಳಮದ್ದಳೆ ಮತ್ತು ಕಲಾವಿದರಿಗೆ ನುಡಿ ನಮನ

Suddi Udaya

ಇತ್ತೀಚೆಗೆ ಸುಟ್ಟು ಕರಕಲಾದ ಸ್ವಸ್ತಿಕ್ ಆಟೋ ಶೋರೂಮ್ ಗೆ ಬೆಳ್ತಂಗಡಿ ಛೇಂಬರ್ ಆಫ್ ಕಾಮರ್ಸ್ ವತಿಯಿಂದ ಸಹಾಯಧನ

Suddi Udaya

ಸುಲ್ಕೇರಿಮೊಗ್ರು ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ, ಯುವ ಬಿಲ್ಲವ ವೇದಿಕೆ, ಮಹಿಳಾ ಬಿಲ್ಲವ ವೇದಿಕೆ ವತಿಯಿಂದ ಸ್ವಚ್ಛತಾ ಕಾರ್ಯ

Suddi Udaya
error: Content is protected !!