ಮೇ 26: ಕಾಯರ್ತಡ್ಕ ನಂದಗೋಕುಲ ಗೋಶಾಲೆಯಲ್ಲಿ ಸಾಮೂಹಿಕ ಗೋಪೂಜೆ, ಗೋನಂದಾರತಿ, ದೀಪೋತ್ಸವ

Suddi Udaya

ಕಳೆಂಜ: ಕಳೆಂಜದಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ವಾಮಿ ವಿವೇಕಾನಂದ ಸೇವಾಶ್ರಮ ಟ್ರಸ್ಟ್ ಇದರ ಆಶ್ರಯದಲ್ಲಿ ಕಾರ್ಯನಿರ್ವಹಿಸುತ್ತಿರುವ ನಂದಗೋಕುಲ ಗೋಶಾಲೆಯಲ್ಲಿ ಮೇ 26ರಂದು ದೀಪೋತ್ಸವ ಕಾರ್ಯಕ್ರಮ ನಡೆಯಲಿದೆ.

ಬರೋಡಾ ಉದ್ಯಮಿ ಶಶಿಧರ್ ಶೆಟ್ಟಿ ಗೌರವಾಧ್ಯಕ್ಷತೆಯಲ್ಲಿ ಗೋಶಾಲೆಯಲ್ಲಿ ಸಾಮೂಹಿಕ ಗೋಪೂಜೆ, ಗೋನಂದಾರತಿ, ದೀಪೋತ್ಸವ ನಡೆಯಲಿದೆ.

ಗೌರವ ಮಾರ್ಗದರ್ಶಿಗಳಾದ ಶಾಸಕ ಹರೀಶ್ ಪೂಂಜ, ವಿಧಾನಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್, ಅಧ್ಯಕ್ಷ ನಾರಾಯಣ ಗೌಡ ಪಂಚಶ್ರೀ,ಪ್ರಧಾನ ಸಂಚಾಲಕ ಶಶಿರಾಜ್ ಶೆಟ್ಟಿ ಗುರುವಾಯನಕೆರೆ,ಸ್ವಾಮಿ ವಿವೇಕಾನಂದ ಸೇವಾಶ್ರಮ ಟ್ರಸ್ಟ್ ಅಧ್ಯಕ್ಷ ಡಾ‌ಎಂ.ಎಂ ದಯಾಕರ್, ಕಾರ್ಯದರ್ಶಿ ಸುಬ್ರಹ್ಮಣ್ಯ ಕುಮಾರ್ ಅಗರ್ತ ಹಾಗೂ ಟ್ರಸ್ಟಿಗಳು, ಪದಾಧಿಕಾರಿಗಳು ಕಾರ್ಯಕ್ರಮದ ಯಶಸ್ವಿಗೆ ಸಹಕರಿಸುತ್ತಿದ್ದಾರೆ.

ಮೇ 19ರಂದು ವಿಶೇಷ ಗೋಗ್ರಾಸ ಹೊರೆಕಾಣಿಕೆ ಬೆಳ್ತಂಗಡಿ ತಾಲೂಕಿನ ಎಲ್ಲಾ ಗ್ರಾಮಗಳಿಂದ ಗೋಗ್ರಾಸ ಸಂಗ್ರಹ ಗೋಗ್ರಾಸ ಹೊರೆಕಾಣಿಕೆ ಅರ್ಪಣೆ ಕಾರ್ಯಕ್ರಮ ನಡೆಯಲಿದೆ. ಹೊರೆಕಾಣಿಕೆಯ ಬೃಹತ್ ಶೋಭಾಯಾತ್ರೆ ಬೆಳ್ತಂಗಡಿ ಎ.ಪಿ.ಎಂ.ಸಿ ಮೈದಾನದಿಂದ ಮಧ್ಯಾಹ್ನ 2 ಗಂಟೆಗೆ ಆರಂಭವಾಗಲಿದೆ.

Leave a Comment

error: Content is protected !!