25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸುಲ್ಕೇರಿ: ಕೇಡೇಲು ಪರಿಸರಕ್ಕೆ ಮಾಜಿ ಸಚಿವ ಸುರೇಶ್ ಕುಮಾರ್ ಭೇಟಿ

ಸುಲ್ಕೇರಿ: ಸುಲ್ಕೇರಿ ಗ್ರಾಮದ ತೀರಾ ಹಿಂದುಳಿದ ಪ್ರದೇಶವಾದ ಕೇಡೇಲು ಪರಿಸರಕ್ಕೆ ಮಾಜಿ ಸಚಿವ ಸುರೇಶ್ ಕುಮಾರ್ ಮೇ 14 ರಂದು ಖಾಸಗಿ ಭೇಟಿ ನೀಡಿದರು.


ಸೆಲ್ಕೋ ಸಂಸ್ಥೆಯ ಗುರುಪ್ರಸಾದ್ ಶೆಟ್ಟಿ, ಉದಯ, ಗಿರಿಜಾ, ಸುರೇಶ್, ಗಿರೀಶ್ ಗೌಡ, ಕೆಂಪರಾಜು, ನವೀನ್ ನೆರಿಯ ಇವರ ಜತೆ ಭೇಟಿ ನೀಡಿ ಅಲ್ಲಿನ ಸ್ಥಿತಿಗತಿಗಳ ಕುರಿತು ಪರಿಶೀಲನೆ ನಡೆಸಿ ಕೆಲವು ಮನೆಗಳಿಗೆ ಭೇಟಿ ನೀಡಿದರು.


ಕೇಡೇಲು ಪರಿಸರದಲ್ಲಿ ಏಳು ಮನೆಗಳಿದ್ದು ಇಲ್ಲಿಗೆ ಸರಿಯಾದ ರಸ್ತೆ ಹಾಗು ವಿದ್ಯುತ್ ವ್ಯವಸ್ಥೆ ಕೂಡ ಇರುವುದಿಲ್ಲ.ಇಲ್ಲಿನ ಜನಜೀವನ ಕುರಿತು ವೀಕ್ಷಿಸಿ, ಮಾತನಾಡಿ “ನಮ್ಮ ನಿರ್ಧಾರಗಳು ಕಟ್ಟ ಕಡೆಯ ವ್ಯಕ್ತಿಗಳ ಜೀವನಕ್ಕೆ ಬೆಳಕಾಗಬೇಕು. ಅಂತಹ ವ್ಯವಸ್ಥೆಯನ್ನು ಇಲ್ಲಿ ಸೆಲ್ಕೋ ಸಂಸ್ಥೆ ನಿರ್ವಹಿಸಿರುವುದು ಶ್ಲಾಘನೀಯ. ಆಯ್ಕೆ ಮಾಡಿಕೊಳ್ಳುವ ಕಾರ್ಯಗಳಿಂದ ಜನರಿಗೆ ಉಪಯೋಗವಾದರೆ ಮಾಡಿದ ಕೆಲಸದಲ್ಲಿ ತೃಪ್ತಿ ಸಿಗುತ್ತದೆ” ಎಂದರು.

Related posts

ಡಾ. ಪ್ರಸನ್ನಕುಮಾರ ಐತಾಳರಿಗೆ “ಎ. ಶಾಮ ರಾವ್ ಸ್ಮಾರಕ ಉತ್ತಮ ಶಿಕ್ಷಕ” ಪ್ರಶಸ್ತಿ

Suddi Udaya

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya

ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ದಿಯಾ ಎಂ ಕೋಟ್ಯಾನ್ ಉನ್ನತ ಶ್ರೇಣಿಯಲ್ಲಿ ತೇರ್ಗಡೆ

Suddi Udaya

ಬೆಳ್ತಂಗಡಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನಿಂದ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಲು ‘ದಿ ಕೇರಳ ಸ್ಟೋರಿ’ ಚಲನಚಿತ್ರ ಉಚಿತ ಪ್ರದರ್ಶನ

Suddi Udaya

ಬೆಂಗಳೂರಿನಲ್ಲಿ ಅದ್ದೂರಿಯಾಗಿ ನಡೆದ ಕಂಬಳ: ದಿಡುಪೆ ಪರಂಬೇರಿನ ನಾರಾಯಣ ಮಲೆಕುಡಿಯರ ಕೋಣಗಳು, ನೇಗಿಲು ಹಿರಿಯ ವಿಭಾಗದಲ್ಲಿ ಪ್ರಥಮ, ಒಂದು ಲಕ್ಷ ನಗದು, 16 ಗ್ರಾಂ ಚಿನ್ನ ಮತ್ತು ಟ್ರೋಫಿ

Suddi Udaya

ಮುಂಡಾಜೆ: ತುಂಡಾಗಿ ಬಿದ್ದ ಎಚ್‌ ಟಿ ವಿದ್ಯುತ್ ತಂತಿ: ತಪ್ಪಿದ ಭಾರಿ ಅನಾಹುತ

Suddi Udaya
error: Content is protected !!