July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸುಲ್ಕೇರಿ: ಕೇಡೇಲು ಪರಿಸರಕ್ಕೆ ಮಾಜಿ ಸಚಿವ ಸುರೇಶ್ ಕುಮಾರ್ ಭೇಟಿ

ಸುಲ್ಕೇರಿ: ಸುಲ್ಕೇರಿ ಗ್ರಾಮದ ತೀರಾ ಹಿಂದುಳಿದ ಪ್ರದೇಶವಾದ ಕೇಡೇಲು ಪರಿಸರಕ್ಕೆ ಮಾಜಿ ಸಚಿವ ಸುರೇಶ್ ಕುಮಾರ್ ಮೇ 14 ರಂದು ಖಾಸಗಿ ಭೇಟಿ ನೀಡಿದರು.


ಸೆಲ್ಕೋ ಸಂಸ್ಥೆಯ ಗುರುಪ್ರಸಾದ್ ಶೆಟ್ಟಿ, ಉದಯ, ಗಿರಿಜಾ, ಸುರೇಶ್, ಗಿರೀಶ್ ಗೌಡ, ಕೆಂಪರಾಜು, ನವೀನ್ ನೆರಿಯ ಇವರ ಜತೆ ಭೇಟಿ ನೀಡಿ ಅಲ್ಲಿನ ಸ್ಥಿತಿಗತಿಗಳ ಕುರಿತು ಪರಿಶೀಲನೆ ನಡೆಸಿ ಕೆಲವು ಮನೆಗಳಿಗೆ ಭೇಟಿ ನೀಡಿದರು.


ಕೇಡೇಲು ಪರಿಸರದಲ್ಲಿ ಏಳು ಮನೆಗಳಿದ್ದು ಇಲ್ಲಿಗೆ ಸರಿಯಾದ ರಸ್ತೆ ಹಾಗು ವಿದ್ಯುತ್ ವ್ಯವಸ್ಥೆ ಕೂಡ ಇರುವುದಿಲ್ಲ.ಇಲ್ಲಿನ ಜನಜೀವನ ಕುರಿತು ವೀಕ್ಷಿಸಿ, ಮಾತನಾಡಿ “ನಮ್ಮ ನಿರ್ಧಾರಗಳು ಕಟ್ಟ ಕಡೆಯ ವ್ಯಕ್ತಿಗಳ ಜೀವನಕ್ಕೆ ಬೆಳಕಾಗಬೇಕು. ಅಂತಹ ವ್ಯವಸ್ಥೆಯನ್ನು ಇಲ್ಲಿ ಸೆಲ್ಕೋ ಸಂಸ್ಥೆ ನಿರ್ವಹಿಸಿರುವುದು ಶ್ಲಾಘನೀಯ. ಆಯ್ಕೆ ಮಾಡಿಕೊಳ್ಳುವ ಕಾರ್ಯಗಳಿಂದ ಜನರಿಗೆ ಉಪಯೋಗವಾದರೆ ಮಾಡಿದ ಕೆಲಸದಲ್ಲಿ ತೃಪ್ತಿ ಸಿಗುತ್ತದೆ” ಎಂದರು.

Related posts

ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಯೂನಿಯನ್ ಬೆಳ್ತಂಗಡಿ ವತಿಯಿಂದ ತರಬೇತಿ ಕಾರ್ಯಕ್ರಮ

Suddi Udaya

ನಿಡ್ಲೆ ಗ್ರಾಮದ ಕೆದಿಹಿತ್ಲು ಕೆ. ಕಾರ್ತಿಕ್ ರಿಗೆ ಪಿಹೆಚ್‌ಡಿ ಪದವಿ

Suddi Udaya

ಬೆಳ್ತಂಗಡಿಯಲ್ಲಿ ವಿಜಯ ಸಂಕಲ್ಪ ಯಾತ್ರೆ

Suddi Udaya

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಾರ್ಮಾಡಿ ಹಸನಬ್ಬ ಹಾಗೂ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪುರಸ್ಕೃತ ರವಿಚಂದ್ರ ಸಾಲಿಯಾನ್ ರವರಿಗೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸನ್ಮಾನ ಕಾರ್ಯಕ್ರಮ

Suddi Udaya

ಗುರುವಾಯನಕೆರೆ: ಎಸ್.ಎಸ್.ಎಫ್. ಬೆಳ್ತಂಗಡಿ ಡಿವಿಷನ್ ನಾಯಕರ ಸೆಕ್ಟರ್ ಭೇಟಿ

Suddi Udaya

ತಾಲೂಕು ವಿಕಲಚೇತನರ ಪುನರ್ವಸತಿ ಕಾರ್ಯಕರ್ತರ ಪ್ರಗತಿ ಪರಿಶೀಲನಾ ಸಭೆ

Suddi Udaya
error: Content is protected !!