ಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ ಮಾಚಾರು ಗುಂಡಿಕಂಡ ಮಣಿಕ್ಕೆ ಎಂಬಲ್ಲಿ ಬಾಬು ಎಂಬವರ ಮನೆಗೆ ಬಡಿದ ಸಿಡಿಲು: ಮನೆಯ ಮೀಟರ್ ಬೋರ್ಡ್, ಗೋಡೆ ಸಹಿತ, ಶೀಟ್ ಗೆ ಹಾನಿ

ಬೆಳ್ತಂಗಡಿ: ಬುಧವಾರ ಸಂಜೆ 5 ಗಂಟೆ ಸುಮಾರಿಗೆ ಮತ್ತೆ ಗುಡುಗು, ಸಿಡಿಲು ಸಹಿತ ಬಾರಿ ಮಳೆಯಾಗಿದೆ. ಉಜಿರೆ ಗ್ರಾಮದ ಮಾಚಾರು ಗುಂಡಿಕಂಡ ಮಣಿಕ್ಕೆ ಎಂಬಲ್ಲಿ ಬಾಬು ಮುಗೇರ ಎಂಬವರ ಮನೆಗೆ ಸಿಡಿಲು ಬಡಿದು ಮೀಟರ್ ಬೋರ್ಡ್, ಗೋಡೆ ಸಹಿತ, ಶೀಟ್ ಪುಡುಪುಡಿಯಾಗಿದೆ.
ಸ್ಥಳಕ್ಕೆ ಗ್ರಾಮ ಲೆಕ್ಕಾಧಿಕಾರಿ ಪ್ರದೀಪ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ ನೊಚ್ಚ, ಗ್ರಾ.ಪಂ. ಸದಸ್ಯ ಗುರುಪ್ರಸಾದ್ ‘ಟಿ ನೀಡಿ ವರದಿ ಪಡೆದಿದ್ದಾರೆ.


ಕೊಯ್ಯೂರು ಗ್ರಾಮದ ಮೈಂದಕೊಡಿ ಲೋಕಯ್ಯ ಗೌಡರ ಮನೆಯ ಬಳಿ ತೆಂಗಿನ ಮರಕ್ಕೆ ಸಿಡಿಲು ಬಿದ್ದು ಬೆಂಕಿ ಹತ್ತಿಕೊಂಡ ಘಟನೆ ನಡೆಯಿತು. ಮನೆಮಂದಿ ಇರುವ ವೇಳೆಗೆ ಸಿಡಿಲು ಬಡಿದಿದ್ದು, ಮನೆಮಂದಿ ಬೆಚ್ಚಿನಿದ್ದಿದ್ದರು. ಬಳಿಕ ಗಮನಿಸಿದಾಗ ತೆಂಗಿನ ಮರದಲ್ಲಿ ಬೆಂಕಿ ಕೆಲ ಹೊತ್ತು ಉರಿದಿದೆ.


ಬೆಳ್ತಂಗಡಿ, ನಡ, ಮಂಜೊಟ್ಟಿ, ಗುರುವಾಯನಕೆರೆ ಸಹಿತ ಗೇರುಕಟ್ಟೆ, ಕಳಿಯ ಇತರೆಡೆ ಮಳೆಯಾಗಿದ್ದು, ಗುರುವಾಯನಕೆರೆ ಕೆಲವೆಡೆ ಆಲಿಕಲ್ಲು ಮಳೆಯಾಗಿದೆ. ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದು ಚರಂಡಿ ಕಾರ್ಯ ಅಪೂರ್ಣಗೊಂಡ ಪರಿಣಾಮ ಚರ್ಚ್ ರಸ್ತೆಯಲ್ಲಿ ಮಳೆ ನೀರು ರಸ್ತೆಯಲ್ಲಿ ನಿಂತು ಪಕ್ಕಡ ಅಂಗಡಿ ಮುಂಗಟ್ಟುಗಳ ಸುತ್ತ ನೀರು ನಿಂತಿತ್ತು. ವಾಹನ ಸವಾರರು ಪರದಾಡುವಂತಾಯಿತು.

.

Related posts

ಚಾರ್ಮಾಡಿ ಗ್ರಾಮ ಪಂಚಾಯತ್‌ನಲ್ಲಿ ಮಕ್ಕಳ ಗ್ರಾಮ ಸಭೆ

Suddi Udaya

ಬೆಳ್ತಂಗಡಿ ಯುವವಾಹಿನಿ ಮಹಿಳಾ ಸಂಚಲನಾ ಸಮಿತಿಯಿಂದ “ಮನಸು “ಅಂತರಾಳದ ಅವಲೋಕನ

Suddi Udaya

ಡಾ.ಸುಬ್ರಹ್ಮಣ್ಯ ಭಟ್ಟರ ಮೊದಲ ಪತ್ತೇದಾರಿ ಕಾದಂಬರಿ ” ವಿಷ ವರ್ತುಲ” ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಂದ ಬಿಡುಗಡೆ

Suddi Udaya

ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕನಕದಾಸ ಜಯಂತಿ ಆಚರಣೆ

Suddi Udaya

ಬೆಳ್ತಂಗಡಿ : ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ : ಬೆಳ್ತಂಗಡಿ ಪೊಲೀಸರಿಂದ ಆರೋಪಿ ಬಂಧನ

Suddi Udaya

ವಾಯ್ಸ್ ಆಫ್ ಮಲ್ನಾಡ್ ಏರ್ಪಡಿಸಿದ್ದ ಗಾಯನ ಸ್ಪರ್ಧೆಯಲ್ಲಿ ಫೈನಲ್ ಹಂತ ತಲುಪಿದ ಬಂದಾರುವಿನ ಕುಸುಮ ಎಂ ಎಸ್

Suddi Udaya
error: Content is protected !!