22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ಹಾಗೂ ಕ್ರಾಸ್ ಸಂಸ್ಥೆ ಬೆಂಗಳೂರು ನೇತೃತ್ವದಲ್ಲಿ 2 ದಿನದ ತರಬೇತಿ ಕಾರ್ಯಾಗಾರ

ಬೆಳ್ತಂಗಡಿ : ಮಿಸೇರಿಯೋರ್ ಪ್ರಾಯೋಜಕತ್ವದಲ್ಲಿ ಕ್ರಾಸ್ ಸಂಸ್ಥೆ ಬೆಂಗಳೂರು ಹಾಗೂ ಡಿ.ಕೆ.ಆರ್.ಡಿ.ಎಸ್ (ರಿ)ಬೆಳ್ತಂಗಡಿ ಇದರ ನೇತೃತ್ವದಲ್ಲಿ , ಸಿ.ಒ.ಡಿ.ಪಿ ಮಂಗಳೂರು, ಕಿಡ್ಸ್ ಪುತ್ತೂರು ಹಾಗೂ ಸಂಪದ ಉಡುಪಿ ಸಹಕಾರದಿಂದ ಕ್ಲಸ್ಟರ್ ಮಟ್ಟದ ಹವಾಮಾನ ಬದಲಾವಣೆ ಕುರಿತು ತರಬೇತಿ ಕಾರ್ಯಕ್ರಮವನ್ನು ಮೇ 15 ರಂದು ಆಯೋಜಿಸಿಲಾಗಿತ್ತು.

ಹವಾಮಾನ ಬದಲಾವಣೆಯು ಇತ್ತೀಚೆಗೆ ನಮ್ಮನ್ನು ಕಾಡುತ್ತಿರುವ ಅತೀ ದೊಡ್ಡ ಸಮಸ್ಯೆ, ಇದರ ಬಗ್ಗೆ ಅರಿವು ಪಡೆಯುವುದು ಅತ್ಯಗತ್ಯ ಎಂದು ಉದ್ಘಾಟನೆಯನ್ನು ನೆರವೇರಿಸಿದ ಕ್ರಾಸ್ ಸಂಸ್ಥೆ ಬೆಂಗಳೂರು ಇದರ ರಾಜ್ಯ ಸಂಯೋಜಕಿ ಶ್ರೀಮತಿ ಲೈನಾ ಲಸ್ರಾದೊ ರವರು ತಿಳಿಸಿದರು. ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ನಿರ್ದೇಶಕರಾದ ವಂದನೀಯ ಫಾ. ಬಿನೋಯಿ ಎ.ಜೆ ರವರು ಪ್ರಾಸ್ತಾವಿಕವಾಗಿ ಮಾತನಾಡಿದರು.

ಮಾನಿನಿ ಮಹಿಳಾ ರಾಜ್ಯ ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಮಂಜುಳಾ ರವರು ಶುಭ ಹಾರೈಸಿದರು. ಸಂಪನ್ಮೂಲ ವ್ಯಕ್ತಿಗಳಾಗಿ ವನ ಚಾರಿಟೇಬಲ್ ಟ್ರಸ್ಟ್ ಮಂಗಳೂರು ಇದರ ಪರಿಸರ ಸಂರಕ್ಷಣೆ ಅಧಿಕಾರಿ ಶ್ರೀ ಭುವನ್ ಹಾಗೂ ಸದಸ್ಯರಾದ ಶ್ರೀ ಗಣೇಶ್ ರವರು ಹವಾಮಾನ ಬದಲಾವಣೆ ಮತ್ತು ತ್ಯಾಜ್ಯ ನಿರ್ವಹಣೆ ಬಗ್ಗೆ ತರಬೇತಿ ನೀಡಿದರು. ಸಿ.ಒ.ಡಿ.ಪಿ, ಕಿಡ್ಸ್ ಮತ್ತು ಸಂಪದ ಸಂಸ್ಥೆಯ ಒಕ್ಕೂಟ ಪ್ರತಿನಿಧಿಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸಿ.ಒ.ಡಿ.ಪಿ ಸಂಸ್ಥೆಯ ಸಿಬ್ಬಂದಿಗಳು ಪ್ರಾರ್ಥನೆ ಗೀತೆ ಹಾಡಿದರು. ಡಿ.ಕೆ.ಆರ್.ಡಿ.ಎಸ್ ಕಾರ್ಯಕರ್ತೆ ಶ್ರೀಮತಿ ಸುಶೀಲಾ ಎಲ್ಲರನ್ನು ಸ್ವಾಗತಿಸಿದರು. ಶ್ರೀ ಮಾರ್ಕ್ ಡಿ ಸೋಜ ರವರು ಡೈಸಿ ವಂದಿಸಿದರು. ಸಂಯೋಜಕಿ ಶ್ರೀಮತಿ ಸಿಸಿಲ್ಯಾ ತಾವ್ರೊ ಕಾರ್ಯಕ್ರಮ ನಿರೂಪಿಸಿದರು. ಒಟ್ಟು 42 ಮಂದಿ ಭಾಗವಹಿಸಿದರು.

Related posts

ಆ. 3- 17: ಗುರುವಾಯನಕೆರೆ ಶಿವಂ ಟೆಕ್ಸ್‌ಟೈಲ್ಸ್‌ನಲ್ಲಿ ಆಷಾಡ ಡಿಸ್ಕೌಂಟ್ ಸೇಲ್: ಅಮೋಘ 10% ರಿಂದ 40% ವರೆಗೆ ಗ್ರಾಹಕರಿಗೆ ರಿಯಾಯಿತಿ

Suddi Udaya

ಪೆರೋಡಿತ್ತಾಯಕಟ್ಟೆ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಪರಿಸರ ದಿನಾಚರಣೆ

Suddi Udaya

ಒಕ್ಕಲಿಗ ಗೌಡರ ಕ್ರಿಕೆಟ್ ಪ್ರೀಮಿಯರ್ ಲೀಗ್: ರಂಜನ್ ಗೌಡ ಮಾಲಿಕತ್ವದ ಕೆಂಪೇಗೌಡ ಬ್ರಿಗೇಡಿಯರ್ಸ್ ಪ್ರಥಮ

Suddi Udaya

ಬೆಳ್ತಂಗಡಿ: ತಾಲೂಕು ಮಹಿಳಾ ವೇದಿಕೆ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ

Suddi Udaya

ಮನೆಯಂಗಳದಲ್ಲಿ ನಿಂತಿದ್ದ ಕನ್ಯಾಡಿ ಅಂಡಿರ್‌ಮಾರ್ ನಿವಾಸಿ ಮಂಜಪ್ಪ ನಾಯ್ಕರ ಮೇಲೆ ಚಿರತೆ ದಾಳಿ: ಕಾಲಿಗೆ ಕಚ್ಚಿ ಗಂಭೀರ ಗಾಯ- ಬೆಳ್ತಂಗಡಿ ಆಸ್ಪತ್ರೆಗೆ ದಾಖಲು

Suddi Udaya

ಮಾ.24ಗುರುವಾಯನಕೆರೆ ಮತ್ತು ವೇಣೂರು ವಿದ್ಯುತ್ ಉಪ ಕೇಂದ್ರದಿಂದ ಹೊರಡುವ ಎಲ್ಲಾ ಫೀಡರ್ ಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya
error: Content is protected !!