23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸುಲ್ಕೇರಿ: ಕೇಡೇಲು ಪರಿಸರಕ್ಕೆ ಮಾಜಿ ಸಚಿವ ಸುರೇಶ್ ಕುಮಾರ್ ಭೇಟಿ

ಸುಲ್ಕೇರಿ: ಸುಲ್ಕೇರಿ ಗ್ರಾಮದ ತೀರಾ ಹಿಂದುಳಿದ ಪ್ರದೇಶವಾದ ಕೇಡೇಲು ಪರಿಸರಕ್ಕೆ ಮಾಜಿ ಸಚಿವ ಸುರೇಶ್ ಕುಮಾರ್ ಮೇ 14 ರಂದು ಖಾಸಗಿ ಭೇಟಿ ನೀಡಿದರು.


ಸೆಲ್ಕೋ ಸಂಸ್ಥೆಯ ಗುರುಪ್ರಸಾದ್ ಶೆಟ್ಟಿ, ಉದಯ, ಗಿರಿಜಾ, ಸುರೇಶ್, ಗಿರೀಶ್ ಗೌಡ, ಕೆಂಪರಾಜು, ನವೀನ್ ನೆರಿಯ ಇವರ ಜತೆ ಭೇಟಿ ನೀಡಿ ಅಲ್ಲಿನ ಸ್ಥಿತಿಗತಿಗಳ ಕುರಿತು ಪರಿಶೀಲನೆ ನಡೆಸಿ ಕೆಲವು ಮನೆಗಳಿಗೆ ಭೇಟಿ ನೀಡಿದರು.


ಕೇಡೇಲು ಪರಿಸರದಲ್ಲಿ ಏಳು ಮನೆಗಳಿದ್ದು ಇಲ್ಲಿಗೆ ಸರಿಯಾದ ರಸ್ತೆ ಹಾಗು ವಿದ್ಯುತ್ ವ್ಯವಸ್ಥೆ ಕೂಡ ಇರುವುದಿಲ್ಲ.ಇಲ್ಲಿನ ಜನಜೀವನ ಕುರಿತು ವೀಕ್ಷಿಸಿ, ಮಾತನಾಡಿ “ನಮ್ಮ ನಿರ್ಧಾರಗಳು ಕಟ್ಟ ಕಡೆಯ ವ್ಯಕ್ತಿಗಳ ಜೀವನಕ್ಕೆ ಬೆಳಕಾಗಬೇಕು. ಅಂತಹ ವ್ಯವಸ್ಥೆಯನ್ನು ಇಲ್ಲಿ ಸೆಲ್ಕೋ ಸಂಸ್ಥೆ ನಿರ್ವಹಿಸಿರುವುದು ಶ್ಲಾಘನೀಯ. ಆಯ್ಕೆ ಮಾಡಿಕೊಳ್ಳುವ ಕಾರ್ಯಗಳಿಂದ ಜನರಿಗೆ ಉಪಯೋಗವಾದರೆ ಮಾಡಿದ ಕೆಲಸದಲ್ಲಿ ತೃಪ್ತಿ ಸಿಗುತ್ತದೆ” ಎಂದರು.

Related posts

ಧರ್ಮಸ್ಥಳ ಪ್ರಕರಣ: ಯೂಟ್ಯೂಬರ್ ಸಂತೋಷ್ ಕಡಬ ಬೆಂಗಳೂರು ಪೊಲೀಸ್ ವಶಕ್ಕೆ

Suddi Udaya

ಮಂಜೊಟ್ಟಿ ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಮುಂಡಾಜೆ ಕುಂಟಾಲಪಲ್ಕೆ ಅಂಗನವಾಡಿಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಗುರುವಾಯನಕೆರೆಯಲ್ಲಿ ವ್ಯಕ್ತಿಯೋರ್ವ ಅನುಮಾನಸ್ಪದ ಸಾವು!!?

Suddi Udaya

ಬಂದಾರು: ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಸೇವಾ ಟ್ರಸ್ಟ್ ಮತ್ತು ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ ಪೆಲತ್ತಿಮಾರು ಆಶ್ರಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವ, ಭಜನೆ ಹಾಗೂ ವಿವಿಧ ಆಟೋಟ ಸ್ಪರ್ಧೆ

Suddi Udaya

ವೇಣೂರು ಸೊಸೈಟಿಯ ಮಾಜಿ ನಿರ್ದೇಶಕ ರಾಜೇಂದ್ರ ರಾವ್ ನಿಧನ

Suddi Udaya
error: Content is protected !!