25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿಸಮಸ್ಯೆ

ಮರೋಡಿ 25 ಕೆವಿ ಸಾಮರ್ಥ್ಯದ ಪರಿವರ್ತಕ ಧರಾಶಾಯಿ: ಗಾಳಿ ಮಳೆ ಮೆಸ್ಕಾಂಗೆ 5 ಲಕ್ಷ ರೂ. ನಷ್ಟ

ಬೆಳ್ತಂಗಡಿ: ಬುಧವಾರ ಸಂಜೆ ಬೆಳ್ತಂಗಡಿ, ಅಳದಂಗಡಿ, ನಾರಾವಿ, ಕುದ್ಯಾಡಿ, ಮರೋಡಿ ಮೊದಲಾದ ಕಡೆಗಳಲ್ಲಿ ಮಳೆಯೊಂದಿಗೆ ಗಾಳಿಯು ಬೀಸಿದ ಪರಿಣಾಮ ವಿದ್ಯುತ್ ಕಂಬಗಳು ಹಾಗೂ ಪರಿವರ್ತಕ ನೆಲಕ್ಕುರುಳಿ ಮೆಸ್ಕಾಂಗೆ ರೂ.5 ಲಕ್ಷ ನಷ್ಟ ಉಂಟಾಗಿದೆ.

ಬೆಳ್ತಂಗಡಿ ಮೆಸ್ಕಾಂ ಉಪ ವಿಭಾಗದ ನಾರಾವಿ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ 4 ಎಚ್‌ ಟಿ, 7 ಎಲ್ ಟಿ ಕಂಬಗಳು ಮುರಿದುಬಿದ್ದು ಪರಿಸರದಲ್ಲಿ ವಿದ್ಯುತ್ ಪೂರೈಕೆ ಅಸ್ತವ್ಯಸ್ತವಾಯಿತು. ನಾರಾವಿಯ ಮರೋಡಿ ರಸ್ತೆಯಲ್ಲಿ 25 ಕೆವಿ ಸಾಮರ್ಥ್ಯದ ಪರಿವರ್ತಕ ಧರಾಶಾಯಿಯಾಯಿತು. ಪರಿವರ್ತಕ ಅಳವಡಿಸಿದ್ದ ಕಂಬಗಳು ಮುರಿದುಬಿದ್ದವು. ವಿದ್ಯುತ್ ವ್ಯತ್ಯಯ ಉಂಟಾದ ಕಡೆಗಳಲ್ಲಿ ಮೆಸ್ಕಾಂ ಮರು ಸಂಪರ್ಕ ನಿರ್ಮಿಸಿಕೊಡುವ ಕಾಮಗಾರಿ ನಡೆಸಿದೆ..

ರಸ್ತೆಗೆ ಬಿದ್ದ ಮರ-
ಬೆಳ್ತಂಗಡಿ ಸಂತೆಕಟ್ಟೆಯ ಕುತ್ಯಾರು ರಸ್ತೆಯಲ್ಲಿ ಬುಧವಾರ ರಾತ್ರಿ ವಿದ್ಯುತ್ ಲೈನ್ ಮೇಲೆ ಮರ ಬಿದ್ದಿದೆ. ಅದೃಷ್ಟವಶಾತ್ ಮರ ಬೀಳುವ ವೇಳೆ ಜನ, ವಾಹನ ಸಂಚಾರ ಇಲ್ಲದ ಕಾರಣ ಯಾವುದೇ ಅಪಾಯ ಉಂಟಾಗಿಲ್ಲ. ಮೆಸ್ಕಾಂ ಸಿಬ್ಬಂದಿ ಮರ ತೆರೆವುಗೊಳಿಸಿ ವಿದ್ಯುತ್ ಪೂರೈಕೆಗೆ ಸಹಕರಿಸಿದರು.

Related posts

ಮರೋಡಿ: ಗ್ರಾ.ಪಂ ಮಾಜಿ ಸದಸ್ಯ ರವಿರಾಜ್ ಬಳ್ಳಾಲ್ ಕಾಂಗ್ರೇಸ್ ಸೇರ್ಪಡೆ

Suddi Udaya

ಯಕ್ಷ ಭಾರತಿ ಕನ್ಯಾಡಿ ವತಿಯಿಂದ ಮುಖವರ್ಣಿಕೆಯ ಶಿಬಿರ

Suddi Udaya

ಬೆಳ್ತಂಗಡಿ ರಾಜಕೇಸರಿ ಸೇವಾ ಟ್ರಸ್ಟ್ ವತಿಯಿಂದ ರಕ್ಷಾಬಂಧನ

Suddi Udaya

ಅಯೋಧ್ಯೆಯಲ್ಲಿ ಶ್ರೀ ರಾಮಚಂದ್ರನ ಪ್ರತಿಷ್ಠಾಪನೆಗೆ ಮೂಹೂರ್ತ ನಿಗದಿ: ಜ.21ರಿಂದ 3 ದಿನ ಕಾರ್ಯಕ್ರಮ: ಪ್ರಧಾನಿ ನರೇಂದ್ರ ಮೋದಿ ಸಹಿತ ಅನೇಕ ನಾಯಕರು ಭಾಗಿ

Suddi Udaya

ಬಡಗಕಾರಂದೂರು: ಬಾವಲಿಗುಂಡಿ ಕಿಂಡಿ ಅಣೆಕಟ್ಟು ಬಳಿ ರೂ.3 ಕೋಟಿ ವೆಚ್ಚದ ಕಾಲುವೆ ನಿರ್ಮಾಣಕ್ಕೆ ಭೂಮಿ ಪೂಜೆ

Suddi Udaya

ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ : ನಡ ಸ. ಪ. ಪೂ ಕಾಲೇಜಿನ ವಿದ್ಯಾರ್ಥಿನಿ ಕು. ಸವಿತಾ ದ್ವಿತೀಯ ಸ್ಥಾನ

Suddi Udaya
error: Content is protected !!