35.1 C
ಪುತ್ತೂರು, ಬೆಳ್ತಂಗಡಿ
April 11, 2025
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿಸಮಸ್ಯೆ

ಮರೋಡಿ 25 ಕೆವಿ ಸಾಮರ್ಥ್ಯದ ಪರಿವರ್ತಕ ಧರಾಶಾಯಿ: ಗಾಳಿ ಮಳೆ ಮೆಸ್ಕಾಂಗೆ 5 ಲಕ್ಷ ರೂ. ನಷ್ಟ

ಬೆಳ್ತಂಗಡಿ: ಬುಧವಾರ ಸಂಜೆ ಬೆಳ್ತಂಗಡಿ, ಅಳದಂಗಡಿ, ನಾರಾವಿ, ಕುದ್ಯಾಡಿ, ಮರೋಡಿ ಮೊದಲಾದ ಕಡೆಗಳಲ್ಲಿ ಮಳೆಯೊಂದಿಗೆ ಗಾಳಿಯು ಬೀಸಿದ ಪರಿಣಾಮ ವಿದ್ಯುತ್ ಕಂಬಗಳು ಹಾಗೂ ಪರಿವರ್ತಕ ನೆಲಕ್ಕುರುಳಿ ಮೆಸ್ಕಾಂಗೆ ರೂ.5 ಲಕ್ಷ ನಷ್ಟ ಉಂಟಾಗಿದೆ.

ಬೆಳ್ತಂಗಡಿ ಮೆಸ್ಕಾಂ ಉಪ ವಿಭಾಗದ ನಾರಾವಿ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ 4 ಎಚ್‌ ಟಿ, 7 ಎಲ್ ಟಿ ಕಂಬಗಳು ಮುರಿದುಬಿದ್ದು ಪರಿಸರದಲ್ಲಿ ವಿದ್ಯುತ್ ಪೂರೈಕೆ ಅಸ್ತವ್ಯಸ್ತವಾಯಿತು. ನಾರಾವಿಯ ಮರೋಡಿ ರಸ್ತೆಯಲ್ಲಿ 25 ಕೆವಿ ಸಾಮರ್ಥ್ಯದ ಪರಿವರ್ತಕ ಧರಾಶಾಯಿಯಾಯಿತು. ಪರಿವರ್ತಕ ಅಳವಡಿಸಿದ್ದ ಕಂಬಗಳು ಮುರಿದುಬಿದ್ದವು. ವಿದ್ಯುತ್ ವ್ಯತ್ಯಯ ಉಂಟಾದ ಕಡೆಗಳಲ್ಲಿ ಮೆಸ್ಕಾಂ ಮರು ಸಂಪರ್ಕ ನಿರ್ಮಿಸಿಕೊಡುವ ಕಾಮಗಾರಿ ನಡೆಸಿದೆ..

ರಸ್ತೆಗೆ ಬಿದ್ದ ಮರ-
ಬೆಳ್ತಂಗಡಿ ಸಂತೆಕಟ್ಟೆಯ ಕುತ್ಯಾರು ರಸ್ತೆಯಲ್ಲಿ ಬುಧವಾರ ರಾತ್ರಿ ವಿದ್ಯುತ್ ಲೈನ್ ಮೇಲೆ ಮರ ಬಿದ್ದಿದೆ. ಅದೃಷ್ಟವಶಾತ್ ಮರ ಬೀಳುವ ವೇಳೆ ಜನ, ವಾಹನ ಸಂಚಾರ ಇಲ್ಲದ ಕಾರಣ ಯಾವುದೇ ಅಪಾಯ ಉಂಟಾಗಿಲ್ಲ. ಮೆಸ್ಕಾಂ ಸಿಬ್ಬಂದಿ ಮರ ತೆರೆವುಗೊಳಿಸಿ ವಿದ್ಯುತ್ ಪೂರೈಕೆಗೆ ಸಹಕರಿಸಿದರು.

Related posts

ಸಾವ್ಯ ನೂಜಿಲೋಡಿ ಎಂಬಲ್ಲಿ ನದಿಯ ಪಕ್ಕದಲ್ಲಿ ದನದ ಕರುವಿನ ಅವಶೇಷ ಪತ್ತೆ: ಕೇರಳ ಮೂಲದ ವ್ಯಕ್ತಿಯ ಮೇಲೆ ಶಂಕೆ ವ್ಯಕ್ತಪಡಿಸಿ ಪೊಲೀಸರಿಗೆ ದೂರು

Suddi Udaya

ಲಯನ್ಸ್ ಕ್ಲಬ್ ಸುವರ್ಣ ಮಹೋತ್ಸವ; ಉಮೇಶ್ ಶೆಟ್ಟಿ ಉಜಿರೆ ಬಳಗದ ಸದಸ್ಯರ ಪದಗ್ರಹಣ

Suddi Udaya

ಕಳಿಯ ಗ್ರಾ.ಪಂ. ಅಧ್ಯಕ್ಷೆ ಸುಭಾಷಿಣಿ ಕೆ.ಗೌಡ ಹಾಗೂ ಉಪಾಧ್ಯಕ್ಷೆ ಕುಸುಮ ಎನ್.ಬಂಗೇರ ರವರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ರೆಖ್ಯ : ಮರದ ಕೊಂಬೆ ಮುರಿದು ಬಿದ್ದು ಮನೆಯ ಛಾವಣಿಗೆ ಹಾನಿ: ಶಿರಾಡಿ ಗ್ರಾಮ ವಿಕಾಸ ತಂಡ ಹಾಗೂ ಕೊಕ್ಕಡ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರಿಂದ ದುರಸ್ತಿ ಕಾರ್ಯ

Suddi Udaya

ಮೊಗ್ರು ಪರಿಸರದಲ್ಲಿ ಮಹಾಸಂಪರ್ಕ ಅಭಿಯಾನ ಮತ್ತು ಮತಯಾಚನೆ

Suddi Udaya

ಕೋವಿಡ್ ನಲ್ಲಿ ಹೆತ್ತವರನ್ನು ಕಳೆದುಕೊಂಡವರ ಮಕ್ಕಳಿಗೆ ಶಿಕ್ಷಣಕ್ಕಾಗಿ ಶುಲ್ಕ ವಿತರಣೆ

Suddi Udaya
error: Content is protected !!