March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು ಐಟಿಐ : ಟೊಯೋಟೊ ನೇಮಕಾತಿ ಶಿಬಿರ

ವೇಣೂರು: ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಐಟಿಐಯಲ್ಲಿ ಪ್ರಖ್ಯಾತ ಟೊಯೋಟಾ ಸಂಸ್ಥೆಯವರು ಎರಡು ದಿನಗಳ ನೇಮಕಾತಿ ಶಿಬಿರವನ್ನು ನಡೆಸಿದ್ದು, ವೇಣೂರು ಐಟಿಐ ಮತ್ತು ಆಸುಪಾಸಿನ ಕೆಲವು ಐಟಿಐಗಳ ವಿದ್ಯಾರ್ಥಿಗಳ ಸಹಿತ ಒಟ್ಟು 273 ಅಭ್ಯರ್ಥಿಗಳನ್ನು ಆಯ್ಕೆ ಮಾಡಿರುತ್ತಾರೆ.

ಬರಹ ಪರೀಕ್ಷೆ, ಮೌಖಿಕ ಸಂದರ್ಶನ, ದೈಹಿಕ ಆರೋಗ್ಯ ಪರೀಕ್ಷೆ ಮುಂತಾದ ಮೂರು ಹಂತಗಳಲ್ಲಿ ಆಯ್ಕೆ ನಡೆಸಲಾಯಿತು. ಟೊಯೋಟಾ ಸಂಸ್ಥೆಯ ಮಾನವ ಸಂಪನ್ಮೂಲ ಅಧಿಕಾರಿಗಳಾದ ದಯಾನಂದ ಆರ್., ರೋಷನ್, ರುದ್ರ ಅವರಲ್ಲದೇ ತಾಂತ್ರಿಕ ಪರಿಣಿತರನ್ನೊಳಗೊಂಡ ಇನ್ನಿತರ ಅಧಿಕಾರಿಗಳು ಆಯ್ಕೆ ಶಿಬಿರವನ್ನು ನಡೆಸಿದರು.

ದಯಾನಂದ್ ಆರ್. ರವರು ವಿದ್ಯಾರ್ಥಿಗಳನ್ನು ಕುರಿತು ಮಾತನಾಡಿ ಆಧುನಿಕ ಜಗತ್ತಿನಲ್ಲಿ ತಾಂತ್ರಿಕ ಕೌಶಲ್ಯಕ್ಕೆ ವಿಪರೀತ ಬೇಡಿಕೆಗಳಿದ್ದು, ತಾಂತ್ರಿಕ ಕೌಶಲ್ಯವನ್ನು ಹೊಂದಿರುವ ಯಾವುದೇ ವ್ಯಕ್ತಿಗೆ ಉತ್ತಮ ಭವಿಷ್ಯವಿದೆ. ಕಂಪನಿಗಳಲ್ಲಿ ಇದೀಗ ಮಹಿಳೆಯರನ್ನು ನೇಮಕಾತಿ ಮಾಡುತ್ತಿದ್ದು, ಐಟಿಐ ಕಲಿತ ಮಹಿಳೆಯರಿಗೆ ಕೂಡಲೇ ಬಹುರಾಷ್ಟ್ರೀಯ ಕಂಪನಿಗಳಲ್ಲಿ ನೌಕರಿ ಸಿಗುವುದು ನಿಶ್ಚಿತ ಎಂದು ತಿಳಿಸಿದರು. ಸಂಸ್ಥೆಯ ಪ್ರಾಚಾರ್ಯರಾದ ವಿಶ್ವೇಶ್ವರ ಪ್ರಸಾದ್ ಅತಿಥಿಗಳನ್ನು ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ವೇಣೂರಿನ ಎಸ್.ಡಿ.ಎಂ. ಐಟಿಐ ಮಾತ್ರವಲ್ಲದೆ ಆಸುಪಾಸಿನ ಏಳು ಐಟಿಐ ಸಂಸ್ಥೆಗಳಿಂದ ನೇಮಕಾತಿ ಶಿಬಿರದಲ್ಲಿ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Related posts

ಲಯನ್ಸ್ ಕ್ಲಬ್ ಬೆಳ್ತಂಗಡಿ ವತಿಯಿಂದ ಮೂಡಾಯಿಬೆಟ್ಟು ಶಾಲಾ ಮಕ್ಕಳಿಗೆ ನೋಟ್ ಪುಸ್ತಕ ವಿತರಣೆ

Suddi Udaya

ಫೆ.15: ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಹೊರಾಂಗಣಕ್ಕೆ ನಾರಾವಿ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿಯಿಂದ ರೂ.9 ಲಕ್ಷ ವೆಚ್ಚದಲ್ಲಿ ಹಾಸುಕಲ್ಲು ಸಮರ್ಪಣೆ

Suddi Udaya

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಉಜಿರೆ ಶ್ರೀ ಧ.ಮಂ ಪ.ಪೂ ಕಾಲೇಜು ಸಂಸ್ಕೃತ ಸಂಘದ ಅಧ್ಯಕ್ಷನಾಗಿ ಆದಿತ್ಯ ರಮೇಶ್ ಹೆಗಡೆ ಆಯ್ಕೆ

Suddi Udaya

ಕನ್ಯಾಡಿ II: ವಿ. ಆರ್. ಶಾರದಾ ನಿಧನ

Suddi Udaya

ವಾಯುಭಾರ ಕುಸಿತ: ತಾಲೂಕಿನದ್ಯಾಂತ ವ್ಯಾಪಕ ಮಳೆ-ರೆಡ್ ಅಲರ್ಟ್; ಮುಂಡಾಜೆಯಲ್ಲಿ103 ಮಿ.ಮೀ.ಮಳೆ

Suddi Udaya
error: Content is protected !!