30 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿಸಮಸ್ಯೆ

ಮರೋಡಿ 25 ಕೆವಿ ಸಾಮರ್ಥ್ಯದ ಪರಿವರ್ತಕ ಧರಾಶಾಯಿ: ಗಾಳಿ ಮಳೆ ಮೆಸ್ಕಾಂಗೆ 5 ಲಕ್ಷ ರೂ. ನಷ್ಟ

ಬೆಳ್ತಂಗಡಿ: ಬುಧವಾರ ಸಂಜೆ ಬೆಳ್ತಂಗಡಿ, ಅಳದಂಗಡಿ, ನಾರಾವಿ, ಕುದ್ಯಾಡಿ, ಮರೋಡಿ ಮೊದಲಾದ ಕಡೆಗಳಲ್ಲಿ ಮಳೆಯೊಂದಿಗೆ ಗಾಳಿಯು ಬೀಸಿದ ಪರಿಣಾಮ ವಿದ್ಯುತ್ ಕಂಬಗಳು ಹಾಗೂ ಪರಿವರ್ತಕ ನೆಲಕ್ಕುರುಳಿ ಮೆಸ್ಕಾಂಗೆ ರೂ.5 ಲಕ್ಷ ನಷ್ಟ ಉಂಟಾಗಿದೆ.

ಬೆಳ್ತಂಗಡಿ ಮೆಸ್ಕಾಂ ಉಪ ವಿಭಾಗದ ನಾರಾವಿ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ 4 ಎಚ್‌ ಟಿ, 7 ಎಲ್ ಟಿ ಕಂಬಗಳು ಮುರಿದುಬಿದ್ದು ಪರಿಸರದಲ್ಲಿ ವಿದ್ಯುತ್ ಪೂರೈಕೆ ಅಸ್ತವ್ಯಸ್ತವಾಯಿತು. ನಾರಾವಿಯ ಮರೋಡಿ ರಸ್ತೆಯಲ್ಲಿ 25 ಕೆವಿ ಸಾಮರ್ಥ್ಯದ ಪರಿವರ್ತಕ ಧರಾಶಾಯಿಯಾಯಿತು. ಪರಿವರ್ತಕ ಅಳವಡಿಸಿದ್ದ ಕಂಬಗಳು ಮುರಿದುಬಿದ್ದವು. ವಿದ್ಯುತ್ ವ್ಯತ್ಯಯ ಉಂಟಾದ ಕಡೆಗಳಲ್ಲಿ ಮೆಸ್ಕಾಂ ಮರು ಸಂಪರ್ಕ ನಿರ್ಮಿಸಿಕೊಡುವ ಕಾಮಗಾರಿ ನಡೆಸಿದೆ..

ರಸ್ತೆಗೆ ಬಿದ್ದ ಮರ-
ಬೆಳ್ತಂಗಡಿ ಸಂತೆಕಟ್ಟೆಯ ಕುತ್ಯಾರು ರಸ್ತೆಯಲ್ಲಿ ಬುಧವಾರ ರಾತ್ರಿ ವಿದ್ಯುತ್ ಲೈನ್ ಮೇಲೆ ಮರ ಬಿದ್ದಿದೆ. ಅದೃಷ್ಟವಶಾತ್ ಮರ ಬೀಳುವ ವೇಳೆ ಜನ, ವಾಹನ ಸಂಚಾರ ಇಲ್ಲದ ಕಾರಣ ಯಾವುದೇ ಅಪಾಯ ಉಂಟಾಗಿಲ್ಲ. ಮೆಸ್ಕಾಂ ಸಿಬ್ಬಂದಿ ಮರ ತೆರೆವುಗೊಳಿಸಿ ವಿದ್ಯುತ್ ಪೂರೈಕೆಗೆ ಸಹಕರಿಸಿದರು.

Related posts

ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರ ಆಪ್ತ ಕಾರ್ಯದರ್ಶಿಯಾಗಿ ಮಂಜುನಾಥ ಎಂ. ಮರುನೇಮಕ

Suddi Udaya

ಬರೆಂಗಾಯ ಸ.ಉ. ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಲಿಕಾ ಹಬ್ಬ

Suddi Udaya

ಉಜಿರೆ: ಅಪರಿಚಿತ ವ್ಯಕ್ತಿಯ ಶವ ಪತ್ತೆ: ವಾರೀಸುದಾರರ ಪತ್ತೆಗೆ ಮನವಿ

Suddi Udaya

ಕಣಿಯೂರು ಗ್ರಾಮ ಪಂಚಾಯತ್ ಮುಂದೆ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಮೆನ್ಸ್ ಪಾರ್ಲರ್‌ ಸಲೂನ್‌ ಉದ್ಯಮಿ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಪುಂಜಾಲಕಟ್ಟೆ ಕಟ್ಟೆಮನೆ ಉದಯಕುಮಾರ್ ವಿಧಿವಶ

Suddi Udaya
error: Content is protected !!