22.2 C
ಪುತ್ತೂರು, ಬೆಳ್ತಂಗಡಿ
May 22, 2025
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿಸಮಸ್ಯೆ

ಮರೋಡಿ 25 ಕೆವಿ ಸಾಮರ್ಥ್ಯದ ಪರಿವರ್ತಕ ಧರಾಶಾಯಿ: ಗಾಳಿ ಮಳೆ ಮೆಸ್ಕಾಂಗೆ 5 ಲಕ್ಷ ರೂ. ನಷ್ಟ

ಬೆಳ್ತಂಗಡಿ: ಬುಧವಾರ ಸಂಜೆ ಬೆಳ್ತಂಗಡಿ, ಅಳದಂಗಡಿ, ನಾರಾವಿ, ಕುದ್ಯಾಡಿ, ಮರೋಡಿ ಮೊದಲಾದ ಕಡೆಗಳಲ್ಲಿ ಮಳೆಯೊಂದಿಗೆ ಗಾಳಿಯು ಬೀಸಿದ ಪರಿಣಾಮ ವಿದ್ಯುತ್ ಕಂಬಗಳು ಹಾಗೂ ಪರಿವರ್ತಕ ನೆಲಕ್ಕುರುಳಿ ಮೆಸ್ಕಾಂಗೆ ರೂ.5 ಲಕ್ಷ ನಷ್ಟ ಉಂಟಾಗಿದೆ.

ಬೆಳ್ತಂಗಡಿ ಮೆಸ್ಕಾಂ ಉಪ ವಿಭಾಗದ ನಾರಾವಿ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ 4 ಎಚ್‌ ಟಿ, 7 ಎಲ್ ಟಿ ಕಂಬಗಳು ಮುರಿದುಬಿದ್ದು ಪರಿಸರದಲ್ಲಿ ವಿದ್ಯುತ್ ಪೂರೈಕೆ ಅಸ್ತವ್ಯಸ್ತವಾಯಿತು. ನಾರಾವಿಯ ಮರೋಡಿ ರಸ್ತೆಯಲ್ಲಿ 25 ಕೆವಿ ಸಾಮರ್ಥ್ಯದ ಪರಿವರ್ತಕ ಧರಾಶಾಯಿಯಾಯಿತು. ಪರಿವರ್ತಕ ಅಳವಡಿಸಿದ್ದ ಕಂಬಗಳು ಮುರಿದುಬಿದ್ದವು. ವಿದ್ಯುತ್ ವ್ಯತ್ಯಯ ಉಂಟಾದ ಕಡೆಗಳಲ್ಲಿ ಮೆಸ್ಕಾಂ ಮರು ಸಂಪರ್ಕ ನಿರ್ಮಿಸಿಕೊಡುವ ಕಾಮಗಾರಿ ನಡೆಸಿದೆ..

ರಸ್ತೆಗೆ ಬಿದ್ದ ಮರ-
ಬೆಳ್ತಂಗಡಿ ಸಂತೆಕಟ್ಟೆಯ ಕುತ್ಯಾರು ರಸ್ತೆಯಲ್ಲಿ ಬುಧವಾರ ರಾತ್ರಿ ವಿದ್ಯುತ್ ಲೈನ್ ಮೇಲೆ ಮರ ಬಿದ್ದಿದೆ. ಅದೃಷ್ಟವಶಾತ್ ಮರ ಬೀಳುವ ವೇಳೆ ಜನ, ವಾಹನ ಸಂಚಾರ ಇಲ್ಲದ ಕಾರಣ ಯಾವುದೇ ಅಪಾಯ ಉಂಟಾಗಿಲ್ಲ. ಮೆಸ್ಕಾಂ ಸಿಬ್ಬಂದಿ ಮರ ತೆರೆವುಗೊಳಿಸಿ ವಿದ್ಯುತ್ ಪೂರೈಕೆಗೆ ಸಹಕರಿಸಿದರು.

Related posts

ಧರ್ಮಸ್ಥಳ: ಅಶೋಕನಗರ ನಿವಾಸಿ ನಾಟಿ ವೈದ್ಯೆ, ಶತಾಯುಷಿ ಶ್ರೀಮತಿ ನೊಕ್ಕೆ ನಿಧನ

Suddi Udaya

ಆಟೋ ಚಾಲಕರ ಹಾಗೂ ಸಾರಿಗೆ ನೌಕರರ ಭವಿಷ್ಯದ ಭದ್ರತೆಗಾಗಿ ಯೋಜನೆಗಳನ್ನು ರೂಪಿಸುವಂತೆ ಬಿಎಂಎಸ್ ನ ವೆಹಿಕಲ್ ಯೂನಿಯನ್ ಸಂಘಗಳಿಂದ ಸಾರಿಗೆ ಸಚಿವ ರಾಮಲಿಂಗ ರೆಡ್ಡಿಯವರಿಗೆ ಮನವಿ

Suddi Udaya

ಉಜಿರೆ ಎಸ್.ಡಿ.ಎಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ನಾವೂರು: ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವಲಂಬಿತರಿಗೆ ಆರೋಗ್ಯ ತಪಾಸಣಾ ಶಿಬಿರ

Suddi Udaya

ಕಳೆಂಜ ಜನನಿ ಸಂಜೀವಿನಿ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya

ಧರ್ಮಸ್ಥಳ: ಪುನಶ್ಚೇತನಾ ಕಾರ್ಯಾಗಾರದ ಸಮಾರೋಪ ಸಮಾರಂಭ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಂದ ಮಾರ್ಗದರ್ಶನ

Suddi Udaya
error: Content is protected !!