July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿಸಮಸ್ಯೆ

ಮರೋಡಿ 25 ಕೆವಿ ಸಾಮರ್ಥ್ಯದ ಪರಿವರ್ತಕ ಧರಾಶಾಯಿ: ಗಾಳಿ ಮಳೆ ಮೆಸ್ಕಾಂಗೆ 5 ಲಕ್ಷ ರೂ. ನಷ್ಟ

ಬೆಳ್ತಂಗಡಿ: ಬುಧವಾರ ಸಂಜೆ ಬೆಳ್ತಂಗಡಿ, ಅಳದಂಗಡಿ, ನಾರಾವಿ, ಕುದ್ಯಾಡಿ, ಮರೋಡಿ ಮೊದಲಾದ ಕಡೆಗಳಲ್ಲಿ ಮಳೆಯೊಂದಿಗೆ ಗಾಳಿಯು ಬೀಸಿದ ಪರಿಣಾಮ ವಿದ್ಯುತ್ ಕಂಬಗಳು ಹಾಗೂ ಪರಿವರ್ತಕ ನೆಲಕ್ಕುರುಳಿ ಮೆಸ್ಕಾಂಗೆ ರೂ.5 ಲಕ್ಷ ನಷ್ಟ ಉಂಟಾಗಿದೆ.

ಬೆಳ್ತಂಗಡಿ ಮೆಸ್ಕಾಂ ಉಪ ವಿಭಾಗದ ನಾರಾವಿ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ 4 ಎಚ್‌ ಟಿ, 7 ಎಲ್ ಟಿ ಕಂಬಗಳು ಮುರಿದುಬಿದ್ದು ಪರಿಸರದಲ್ಲಿ ವಿದ್ಯುತ್ ಪೂರೈಕೆ ಅಸ್ತವ್ಯಸ್ತವಾಯಿತು. ನಾರಾವಿಯ ಮರೋಡಿ ರಸ್ತೆಯಲ್ಲಿ 25 ಕೆವಿ ಸಾಮರ್ಥ್ಯದ ಪರಿವರ್ತಕ ಧರಾಶಾಯಿಯಾಯಿತು. ಪರಿವರ್ತಕ ಅಳವಡಿಸಿದ್ದ ಕಂಬಗಳು ಮುರಿದುಬಿದ್ದವು. ವಿದ್ಯುತ್ ವ್ಯತ್ಯಯ ಉಂಟಾದ ಕಡೆಗಳಲ್ಲಿ ಮೆಸ್ಕಾಂ ಮರು ಸಂಪರ್ಕ ನಿರ್ಮಿಸಿಕೊಡುವ ಕಾಮಗಾರಿ ನಡೆಸಿದೆ..

ರಸ್ತೆಗೆ ಬಿದ್ದ ಮರ-
ಬೆಳ್ತಂಗಡಿ ಸಂತೆಕಟ್ಟೆಯ ಕುತ್ಯಾರು ರಸ್ತೆಯಲ್ಲಿ ಬುಧವಾರ ರಾತ್ರಿ ವಿದ್ಯುತ್ ಲೈನ್ ಮೇಲೆ ಮರ ಬಿದ್ದಿದೆ. ಅದೃಷ್ಟವಶಾತ್ ಮರ ಬೀಳುವ ವೇಳೆ ಜನ, ವಾಹನ ಸಂಚಾರ ಇಲ್ಲದ ಕಾರಣ ಯಾವುದೇ ಅಪಾಯ ಉಂಟಾಗಿಲ್ಲ. ಮೆಸ್ಕಾಂ ಸಿಬ್ಬಂದಿ ಮರ ತೆರೆವುಗೊಳಿಸಿ ವಿದ್ಯುತ್ ಪೂರೈಕೆಗೆ ಸಹಕರಿಸಿದರು.

Related posts

ಬಂದಾರು: ಪೆರ್ಲ-ಬೈಪಾಡಿ ನಿವಾಸಿ ಶತಾಯುಷಿ ಲಕ್ಷ್ಮೀ ನಿಧನ

Suddi Udaya

ಬೆಳ್ತಂಗಡಿ-ಪುತ್ತೂರು ಮುಳಿಯದಲ್ಲಿ ನವರತ್ನ ಉತ್ಸವದ ಸಂಭ್ರಮ: ಒಂಬತ್ತು ವಿಭಿನ್ನ ರತ್ನದ ಕಲ್ಲುಗಳ ಹಾಗೂ ನವರತ್ನ ಆಭರಣಗಳ ಪ್ರದರ್ಶನ

Suddi Udaya

ತಾಲೂಕು ಮಟ್ಟದ ಫುಟ್ ಬಾಲ್ : ಬೆಳ್ತಂಗಡಿ ಎಸ್ ಡಿ ಎಂ ಆಂ.ಮಾ. ಶಾಲೆಯ ಪ್ರೌಢಶಾಲಾ ತಂಡ ದ್ವಿತೀಯ ಸ್ಥಾನ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಶಾಲಾ ಮಕ್ಕಳಿಗೆ ಪುಸ್ತಕ ವಿತರಣೆ

Suddi Udaya

ಸೌಜನ್ಯ ಸಾವಿನ ಪ್ರಕರಣದ ತನಿಖೆ ನಡೆಸುವಂತೆ ಎಸ್‌.ಐ.ಟಿ ಅಧಿಕಾರಿಗಳಿಗೆ ದೂರು ನೀಡಿದ ಸೌಜನ್ಯ ತಾಯಿ ಕುಸುಮಾವತಿ

Suddi Udaya

ಬೆಳ್ತಂಗಡಿ: ಶ್ರೀ ಧ.ಮಂ.ಆಂ.ಮಾ. ಶಾಲೆಯ ವಿದ್ಯಾರ್ಥಿಗಳಿಗೆ ಕುಷ್ಟರೋಗದ ನಿರ್ಮೂಲನೆ , ಕುಷ್ಟ ರೋಗವನ್ನು ಪತ್ತೆ ಹಚ್ಚುವ ಜಾಗೃತಿಯ ಬಗ್ಗೆ ಮಾಹಿತಿ ಕಾರ್ಯಾಗಾರ

Suddi Udaya
error: Content is protected !!