25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿಸಮಸ್ಯೆ

ಮರೋಡಿ 25 ಕೆವಿ ಸಾಮರ್ಥ್ಯದ ಪರಿವರ್ತಕ ಧರಾಶಾಯಿ: ಗಾಳಿ ಮಳೆ ಮೆಸ್ಕಾಂಗೆ 5 ಲಕ್ಷ ರೂ. ನಷ್ಟ

ಬೆಳ್ತಂಗಡಿ: ಬುಧವಾರ ಸಂಜೆ ಬೆಳ್ತಂಗಡಿ, ಅಳದಂಗಡಿ, ನಾರಾವಿ, ಕುದ್ಯಾಡಿ, ಮರೋಡಿ ಮೊದಲಾದ ಕಡೆಗಳಲ್ಲಿ ಮಳೆಯೊಂದಿಗೆ ಗಾಳಿಯು ಬೀಸಿದ ಪರಿಣಾಮ ವಿದ್ಯುತ್ ಕಂಬಗಳು ಹಾಗೂ ಪರಿವರ್ತಕ ನೆಲಕ್ಕುರುಳಿ ಮೆಸ್ಕಾಂಗೆ ರೂ.5 ಲಕ್ಷ ನಷ್ಟ ಉಂಟಾಗಿದೆ.

ಬೆಳ್ತಂಗಡಿ ಮೆಸ್ಕಾಂ ಉಪ ವಿಭಾಗದ ನಾರಾವಿ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ 4 ಎಚ್‌ ಟಿ, 7 ಎಲ್ ಟಿ ಕಂಬಗಳು ಮುರಿದುಬಿದ್ದು ಪರಿಸರದಲ್ಲಿ ವಿದ್ಯುತ್ ಪೂರೈಕೆ ಅಸ್ತವ್ಯಸ್ತವಾಯಿತು. ನಾರಾವಿಯ ಮರೋಡಿ ರಸ್ತೆಯಲ್ಲಿ 25 ಕೆವಿ ಸಾಮರ್ಥ್ಯದ ಪರಿವರ್ತಕ ಧರಾಶಾಯಿಯಾಯಿತು. ಪರಿವರ್ತಕ ಅಳವಡಿಸಿದ್ದ ಕಂಬಗಳು ಮುರಿದುಬಿದ್ದವು. ವಿದ್ಯುತ್ ವ್ಯತ್ಯಯ ಉಂಟಾದ ಕಡೆಗಳಲ್ಲಿ ಮೆಸ್ಕಾಂ ಮರು ಸಂಪರ್ಕ ನಿರ್ಮಿಸಿಕೊಡುವ ಕಾಮಗಾರಿ ನಡೆಸಿದೆ..

ರಸ್ತೆಗೆ ಬಿದ್ದ ಮರ-
ಬೆಳ್ತಂಗಡಿ ಸಂತೆಕಟ್ಟೆಯ ಕುತ್ಯಾರು ರಸ್ತೆಯಲ್ಲಿ ಬುಧವಾರ ರಾತ್ರಿ ವಿದ್ಯುತ್ ಲೈನ್ ಮೇಲೆ ಮರ ಬಿದ್ದಿದೆ. ಅದೃಷ್ಟವಶಾತ್ ಮರ ಬೀಳುವ ವೇಳೆ ಜನ, ವಾಹನ ಸಂಚಾರ ಇಲ್ಲದ ಕಾರಣ ಯಾವುದೇ ಅಪಾಯ ಉಂಟಾಗಿಲ್ಲ. ಮೆಸ್ಕಾಂ ಸಿಬ್ಬಂದಿ ಮರ ತೆರೆವುಗೊಳಿಸಿ ವಿದ್ಯುತ್ ಪೂರೈಕೆಗೆ ಸಹಕರಿಸಿದರು.

Related posts

ವೇಣೂರು ಪರಿಸರದಲ್ಲಿ ಚಿರತೆ ಪ್ರತ್ಯಕ್ಷ: ವೇಣೂರು ಅರಣ್ಯ ಇಲಾಖೆಯಿಂದ ಬೋನು ಅಳವಡಿಕೆ

Suddi Udaya

ಅಲೆಕ್ಕಿ-ಮುಗೇರಡ್ಕ ಮೊಗ್ರು ಶ್ರೀರಾಮ ಮಂದಿರದ ನೂತನ ಕಟ್ಟಡದ ಶಿಲಾನ್ಯಾಸ

Suddi Udaya

ಚಾರ್ಮಾಡಿ ಘಾಟಿನಲ್ಲಿ ಭಾರಿ ಬೆಂಕಿ ಅವಘಡ

Suddi Udaya

ಅಳದಂಗಡಿ ಪ್ರಾ.ಕೃ.ಪ.ಸ. ಸಂಘದ ಸಿಬ್ಬಂದಿ ಪ್ರಿಯಾ ಡಿಸೋಜಾರಿಗೆ ಬಿಳ್ಕೋಡುಗೆ ಸಮಾರಂಭ

Suddi Udaya

ಬೆಳ್ತಂಗಡಿ ಮಹಿಳಾ ವೃಂದದಿಂದ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಬಕ್ರೀದ್ ಹಬ್ಬ ಆಚರಣೆ

Suddi Udaya
error: Content is protected !!