37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು ಐಟಿಐ : ಟೊಯೋಟೊ ನೇಮಕಾತಿ ಶಿಬಿರ

ವೇಣೂರು: ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಐಟಿಐಯಲ್ಲಿ ಪ್ರಖ್ಯಾತ ಟೊಯೋಟಾ ಸಂಸ್ಥೆಯವರು ಎರಡು ದಿನಗಳ ನೇಮಕಾತಿ ಶಿಬಿರವನ್ನು ನಡೆಸಿದ್ದು, ವೇಣೂರು ಐಟಿಐ ಮತ್ತು ಆಸುಪಾಸಿನ ಕೆಲವು ಐಟಿಐಗಳ ವಿದ್ಯಾರ್ಥಿಗಳ ಸಹಿತ ಒಟ್ಟು 273 ಅಭ್ಯರ್ಥಿಗಳನ್ನು ಆಯ್ಕೆ ಮಾಡಿರುತ್ತಾರೆ.

ಬರಹ ಪರೀಕ್ಷೆ, ಮೌಖಿಕ ಸಂದರ್ಶನ, ದೈಹಿಕ ಆರೋಗ್ಯ ಪರೀಕ್ಷೆ ಮುಂತಾದ ಮೂರು ಹಂತಗಳಲ್ಲಿ ಆಯ್ಕೆ ನಡೆಸಲಾಯಿತು. ಟೊಯೋಟಾ ಸಂಸ್ಥೆಯ ಮಾನವ ಸಂಪನ್ಮೂಲ ಅಧಿಕಾರಿಗಳಾದ ದಯಾನಂದ ಆರ್., ರೋಷನ್, ರುದ್ರ ಅವರಲ್ಲದೇ ತಾಂತ್ರಿಕ ಪರಿಣಿತರನ್ನೊಳಗೊಂಡ ಇನ್ನಿತರ ಅಧಿಕಾರಿಗಳು ಆಯ್ಕೆ ಶಿಬಿರವನ್ನು ನಡೆಸಿದರು.

ದಯಾನಂದ್ ಆರ್. ರವರು ವಿದ್ಯಾರ್ಥಿಗಳನ್ನು ಕುರಿತು ಮಾತನಾಡಿ ಆಧುನಿಕ ಜಗತ್ತಿನಲ್ಲಿ ತಾಂತ್ರಿಕ ಕೌಶಲ್ಯಕ್ಕೆ ವಿಪರೀತ ಬೇಡಿಕೆಗಳಿದ್ದು, ತಾಂತ್ರಿಕ ಕೌಶಲ್ಯವನ್ನು ಹೊಂದಿರುವ ಯಾವುದೇ ವ್ಯಕ್ತಿಗೆ ಉತ್ತಮ ಭವಿಷ್ಯವಿದೆ. ಕಂಪನಿಗಳಲ್ಲಿ ಇದೀಗ ಮಹಿಳೆಯರನ್ನು ನೇಮಕಾತಿ ಮಾಡುತ್ತಿದ್ದು, ಐಟಿಐ ಕಲಿತ ಮಹಿಳೆಯರಿಗೆ ಕೂಡಲೇ ಬಹುರಾಷ್ಟ್ರೀಯ ಕಂಪನಿಗಳಲ್ಲಿ ನೌಕರಿ ಸಿಗುವುದು ನಿಶ್ಚಿತ ಎಂದು ತಿಳಿಸಿದರು. ಸಂಸ್ಥೆಯ ಪ್ರಾಚಾರ್ಯರಾದ ವಿಶ್ವೇಶ್ವರ ಪ್ರಸಾದ್ ಅತಿಥಿಗಳನ್ನು ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ವೇಣೂರಿನ ಎಸ್.ಡಿ.ಎಂ. ಐಟಿಐ ಮಾತ್ರವಲ್ಲದೆ ಆಸುಪಾಸಿನ ಏಳು ಐಟಿಐ ಸಂಸ್ಥೆಗಳಿಂದ ನೇಮಕಾತಿ ಶಿಬಿರದಲ್ಲಿ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Related posts

ಮಡಂತ್ಯಾರು ಗ್ರಾ.ಪಂ ಪಾರೆಂಕಿ 1 ನೇ ಕ್ಷೇತ್ರದ ಉಪಚುನಾವಣೆಗೆ ರಾಜ್ಯ ಚುನಾವಣಾ ಆಯೋಗ ತಡೆ

Suddi Udaya

ಚಾರ್ಮಾಡಿ: ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಹೋಮಕುಂಡದ ಭೂಮಿ ಪೂಜೆ

Suddi Udaya

ಕುತ್ಲೂರು: ಮಳೆಗೆ ಕುಸಿದ ಸೇತುವೆ ಪರೀಶಿಲನೆ ನಡೆಸಿದ ಜಿಲ್ಲಾಧಿಕಾರಿ

Suddi Udaya

ಬೆಳ್ತಂಗಡಿ : ಸ.ಪ್ರ.ದ. ಕಾಲೇಜಿನಲ್ಲಿ ಸಹಕಾರಿ ಕ್ಷೇತ್ರದಲ್ಲಿರುವ ಉದ್ಯೋಗವಕಾಶಗಳ ಬಗ್ಗೆ ಕಾರ್ಯಾಗಾರ

Suddi Udaya

ಅಯೋಧ್ಯೆ ನಗರದ ಶ್ರೀ ರಾಮ ಪ್ರತಿಷ್ಠಾ ಕಾರ್ಯಕ್ರಮದ ಅಂಗವಾಗಿ ಜ.22ರಂದು ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ”ಶ್ರೀ ರಾಮನಾಮ ತಾರಕ ಮಂತ್ರ ಹೋಮ”

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರೂ. 25 ಸಾವಿರ ಸಹಾಯಧನ ವಿತರಣೆ

Suddi Udaya
error: Content is protected !!