22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು ಐಟಿಐ : ಟೊಯೋಟೊ ನೇಮಕಾತಿ ಶಿಬಿರ

ವೇಣೂರು: ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಐಟಿಐಯಲ್ಲಿ ಪ್ರಖ್ಯಾತ ಟೊಯೋಟಾ ಸಂಸ್ಥೆಯವರು ಎರಡು ದಿನಗಳ ನೇಮಕಾತಿ ಶಿಬಿರವನ್ನು ನಡೆಸಿದ್ದು, ವೇಣೂರು ಐಟಿಐ ಮತ್ತು ಆಸುಪಾಸಿನ ಕೆಲವು ಐಟಿಐಗಳ ವಿದ್ಯಾರ್ಥಿಗಳ ಸಹಿತ ಒಟ್ಟು 273 ಅಭ್ಯರ್ಥಿಗಳನ್ನು ಆಯ್ಕೆ ಮಾಡಿರುತ್ತಾರೆ.

ಬರಹ ಪರೀಕ್ಷೆ, ಮೌಖಿಕ ಸಂದರ್ಶನ, ದೈಹಿಕ ಆರೋಗ್ಯ ಪರೀಕ್ಷೆ ಮುಂತಾದ ಮೂರು ಹಂತಗಳಲ್ಲಿ ಆಯ್ಕೆ ನಡೆಸಲಾಯಿತು. ಟೊಯೋಟಾ ಸಂಸ್ಥೆಯ ಮಾನವ ಸಂಪನ್ಮೂಲ ಅಧಿಕಾರಿಗಳಾದ ದಯಾನಂದ ಆರ್., ರೋಷನ್, ರುದ್ರ ಅವರಲ್ಲದೇ ತಾಂತ್ರಿಕ ಪರಿಣಿತರನ್ನೊಳಗೊಂಡ ಇನ್ನಿತರ ಅಧಿಕಾರಿಗಳು ಆಯ್ಕೆ ಶಿಬಿರವನ್ನು ನಡೆಸಿದರು.

ದಯಾನಂದ್ ಆರ್. ರವರು ವಿದ್ಯಾರ್ಥಿಗಳನ್ನು ಕುರಿತು ಮಾತನಾಡಿ ಆಧುನಿಕ ಜಗತ್ತಿನಲ್ಲಿ ತಾಂತ್ರಿಕ ಕೌಶಲ್ಯಕ್ಕೆ ವಿಪರೀತ ಬೇಡಿಕೆಗಳಿದ್ದು, ತಾಂತ್ರಿಕ ಕೌಶಲ್ಯವನ್ನು ಹೊಂದಿರುವ ಯಾವುದೇ ವ್ಯಕ್ತಿಗೆ ಉತ್ತಮ ಭವಿಷ್ಯವಿದೆ. ಕಂಪನಿಗಳಲ್ಲಿ ಇದೀಗ ಮಹಿಳೆಯರನ್ನು ನೇಮಕಾತಿ ಮಾಡುತ್ತಿದ್ದು, ಐಟಿಐ ಕಲಿತ ಮಹಿಳೆಯರಿಗೆ ಕೂಡಲೇ ಬಹುರಾಷ್ಟ್ರೀಯ ಕಂಪನಿಗಳಲ್ಲಿ ನೌಕರಿ ಸಿಗುವುದು ನಿಶ್ಚಿತ ಎಂದು ತಿಳಿಸಿದರು. ಸಂಸ್ಥೆಯ ಪ್ರಾಚಾರ್ಯರಾದ ವಿಶ್ವೇಶ್ವರ ಪ್ರಸಾದ್ ಅತಿಥಿಗಳನ್ನು ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ವೇಣೂರಿನ ಎಸ್.ಡಿ.ಎಂ. ಐಟಿಐ ಮಾತ್ರವಲ್ಲದೆ ಆಸುಪಾಸಿನ ಏಳು ಐಟಿಐ ಸಂಸ್ಥೆಗಳಿಂದ ನೇಮಕಾತಿ ಶಿಬಿರದಲ್ಲಿ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Related posts

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುನಃಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ ಹಸಿರುವಾಣಿ ಹೊರೆಕಾಣಿಕೆ ಮತ್ತು ದೈವ-ದೇವರ ಆಭರಣಗಳ ವೈಭವಯುತ ಮೆರವಣಿಗೆ ಶಾಸಕ ಹರೀಶ್ ಪೂಂಜರವರಿಂದ ಹಾಗೂ ಮುಂಬೈ ಉದ್ಯಮಿ ಸುರೇಶ್ ಪೂಜಾರಿಯವರಿಂದ ಚಾಲನೆ

Suddi Udaya

ಡಿ.17: ಬೆಳ್ತಂಗಡಿ ತಾಲೂಕು 18ನೆಯ ಕನ್ನಡ ಸಾಹಿತ್ಯ ಸಮ್ಮೇಳನ

Suddi Udaya

ಕೊಕ್ಕಡ ಚಲಿಸುತ್ತಿದ್ದ ಬಸ್ ಮೇಲೆ ಬಿದ್ದ ವಿದ್ಯುತ್ ಕಂಬ

Suddi Udaya

ಒಡಿಶಾದಲ್ಲಿ ರಾಷ್ಟ್ರೀಯ ಯುವ ಟೆನ್ನಿಸ್ ವಾಲಿಬಾಲ್ ಪಂದ್ಯಾಟ: ಕರ್ನಾಟಕ ಮಹಿಳಾ ತಂಡವನ್ನು ಪ್ರತಿನಿಧಿಸಲಿರುವ ಎಸ್.ಡಿ.ಎಂ ನ ಕ್ರೀಡಾಪಟುಗಳು

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಯೂತ್ ತರಬೇತಿ ಕಾರ್ಯಕ್ರಮ

Suddi Udaya

ಶೈಕ್ಷಣಿಕ ಕ್ಷೇತ್ರದಲ್ಲಿ ಕ್ರಾಂತಿ ಮಾಡಿದ ಯುವ ಸಾಧಕ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ “ಪ್ರತಿಷ್ಠಿತ ವಿಜಯರತ್ನ ಪ್ರಶಸ್ತಿ”ಪ್ರದಾನ

Suddi Udaya
error: Content is protected !!