ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿವರದಿ

ಕಳೆಂಜ ನಂದಗೋಕುಲ ಗೋಶಾಲೆ: ಮೇ 19: ಗೋಗ್ರಾಸ ಹೊರ ಕಾಣಿಕೆ ಸಮರ್ಪಣೆ: ಮೇ 26: ನಂದಗೋಕುಲ ದೀಪೋತ್ಸವ

ಬೆಳ್ತಂಗಡಿ: ದೇಶಿ ಗೋ ತಳಿಗಳ ರಕ್ಷಣೆ, ಪಾರಂಪರಿಕ ಗೋ ಆಧಾರಿತ ಕೃಷಿ ವಿಧಾನಗಳ ಬಗ್ಗೆ ಹಾಗೂ ಸಾವಯವ ಕೃಷಿಗೆ ಒತ್ತು ನೀಡುವ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಕಳೆದ ನಾಲ್ಕು ವರ್ಷಗಳ ಹಿಂದೆ ಸ್ಥಾಪನೆಗೊಂಡ
ಸ್ವಾಮಿ ಶ್ರೀ ವಿವೇಕಾನಂದ ಸೇವಾಶ್ರಮ ಟ್ರಸ್ಟ್ ಆಶ್ರಯದಲ್ಲಿ ಕಳೆಂಜ ಗ್ರಾಮದಲ್ಲಿ ನಡೆಯುತ್ತಿರುವ ನಂದಗೋಕುಲ ಗೋ ಶಾಲೆಯಲ್ಲಿ ಮೇ 26ರಂದು ಸಂಜೆ ‘ನಂದ ಗೋಕುಲ ದೀಪೋತ್ಸವ’ ಪುಣ್ಯಕೋಟಿಗೆ ಒಂದು ಕೋಟಿ.. ಗೋಮಾತೆ ಗೆ ಕೋಟಿಯ ನಮನ ವಿಶಿಷ್ಟ ಕಾರ್ಯಕ್ರಮ ನಡೆಯಲಿದೆ ಎಂದು ಟ್ರಸ್ಟ್ ಕಾರ್ಯದರ್ಶಿ ಸುಬ್ರಹ್ಮಣ್ಯ ಕುಮಾರ್ ಅಗತ೯ ಹೇಳಿದರು.

ಅವರು ಮೇ 16 ರಂದು ಬೆಳ್ತಂಗಡಿ ಟ್ರಸ್ಟ್ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ದೇಶೀ ಗೋಸಂತತಿಯನ್ನು ಉಳಿಸುವ, ಬೆಳೆಸುವ ಹಾಗೂ ನಿರ್ಗತಿಕ, ಅನಾಥ ಮತ್ತು ಅಶಕ್ತ ಗೋವುಗಳಿಗೆ ರಕ್ಷಣೆ ಮತ್ತು ಅವುಗಳ ಬದುಕಿಗೆ ಪೂರಕ ವಾತಾವರಣವನ್ನು ಒದಗಿಸುವ ಉದ್ದೇಶದಿಂದ ಟ್ರಸ್ಟ್‌ನ ಆಶ್ರಯದಡಿಯಲ್ಲಿ ‘ನಂದಗೋಕುಲ ಗೋಶಾಲೆ’ ಯನ್ನು ಕಳೆದ ನಾಲ್ಕು ವರ್ಷಗಳ ಹಿಂದೆ ಆರಂಭಿಸಲಾಯಿತು.

ಗೋ ಶಾಲೆಯಲ್ಲಿ ಪ್ರಕೃತ 240 ಕ್ಕಿಂತಲೂ ಹೆಚ್ಚು ಅನಾಥ ಹಾಗೂ ಕಸಾಯಿಖಾನೆಗೆ ಸಾಗಿಸಲ್ಪಡುತ್ತಿದ್ದ ಗೋವುಗಳು ನೆಮ್ಮದಿಯ ದಿನಗಳನ್ನು ಕಾಣುತ್ತಿವೆ. ಅಲ್ಲದೇ ಗೋಶಾಲೆಯ ಮೂಲಕ ‘ಹೈನುಗಾರರಿಗೆ ಹಾಗೂ ಕೃಷಿಕರಿಗೆ ದೇಶೀ ಗೋತಳಿಗಳ ಬಗ್ಗೆ ಜಾಗೃತಿ ಮೂಡಿಸುವ ಮೂಲಕ ಅವುಗಳನ್ನು ಸಾಕುವಂತೆ ಉತ್ತೇಜಿಸಲಾಗುತ್ತಿದೆ ಎಂದು ತಿಳಿಸಿದರು.

ಮೇ 19 :ಗೋಗ್ರಾಸ ಹೊರೆಕಾಣಿಕೆ ಬೃಹತ್ ಶೋಭಾಯಾತ್ರೆ:
‘ನಂದಗೋಕುಲದಲ್ಲಿ ಇನ್ನಷ್ಟು ಅನಾಥ ಗೋವುಗಳಿಗೆ ರಕ್ಷಣೆ , ಅದಕ್ಕಾಗಿ ಹಟ್ಟಿಗಳ ನಿರ್ಮಾಣ, ಮೇವಿನ ವ್ಯವಸ್ಥೆ, ಎರೆಗೊಬ್ಬರ ಘಟಕ, ಹಣತೆ, ದೂಪದ ಕಡ್ಡಿ ಇತ್ಯಾದಿ ಉಪ ಉತ್ಪನ್ನಗಳ ತಯಾರಿಗಾಗಿ ಯಂತ್ರೋಪಕರಣಗಳು ಮುಂತಾದವುಗಳ ಅವಶ್ಯಕತೆ ಇರುತ್ತಿದ್ದು, ಅದರ ಜೊತೆಗೆ ಈಗಾಗಲೇ ಇರುವ ಗೋವುಗಳ ಮೇವಿಗಾಗಿ ಸಮಾಜದ ಸಹಕಾರ ಬೇಕಾಗಿರುತ್ತದೆ. ಅದಕ್ಕಾಗಿ ಬೆಳ್ತಂಗಡಿ ತಾಲೂಕಿನ ಎಲ್ಲಾ ಗ್ರಾಮಗಳಿಂದಲೂ ಗೋಮಾತೆಗೆ ಗೋಗ್ರಾಸ ಸಂಗ್ರಹದ ‘ಗೋಗ್ರಾಸ ಹೊರೆಕಾಣಿಕೆ ಅರ್ಪಣೆ’ಯ ಬೃಹತ್ ಶೋಭಾಯಾತ್ರೆ ಕಾರ್ಯಕ್ರಮವನ್ನು ಮೇ 19 ರಂದು ಹಮ್ಮಿಕೊಳ್ಳಲಾಗಿದೆ .

ತಾಲೂಕಿನ ಪ್ರತಿ ಗ್ರಾಮದಿಂದ ಗೋ ಪ್ರೇಮಿಗಳು ಗೋ ಗ್ರಾಮವನ್ನು ಅಂದು ಮಧ್ಯಾಹ್ನ 2 ಗಂಟೆ ಬೆಳ್ತಂಗಡಿ ಎಪಿಎಂಸಿಗೆ ತರಲಿದ್ದಾರೆ. ಅಲ್ಲಿಂದ ವಾಹನ ಮೆರವಣಿಗೆ ಮೂಲಕ ಅದನ್ನು ಕಳೆಂಜ ಗೋಶಾಲೆಗೆ ಕೊಂಡುಹೋಗಿ ಸಮಪಿ೯ಸಲಾಗುವುದು. ಉಜಿರೆ, ಧಮ೯ಸ್ಥಳ, ನಿಡ್ಲೆ, ಕೊಕ್ಕಡದ ಭಾಗದವರು ಅಲ್ಲಲ್ಲಿ ಶೋಭಾಯಾತ್ರೆ ಯಲ್ಲಿ ಸೇರಿಕೊಳ್ಳಲಿದ್ದಾರೆ. ಗೋ ಪ್ರೇಮಿಗಳು ಹಸಿ ಹುಲ್ಲು, ಒಣಹುಲ್ಲು, ಪಶು ಆಹಾರ, ಕೃಷಿ ಉತ್ಪನ್ನಗಳಾದ ಅಡಿಕೆ, ತೆಂಗಿನಕಾಯಿ, ಅಕ್ಕಿ ಇತ್ಯಾದಿಗಳನ್ನು ಹೊರೆಕಾಣಿಕೆಯಾಗಿ ಅರ್ಪಿಸಬಹುದಾಗಿರುತ್ತದೆ. ಸಾವ೯ಜನಿಕರು
ಶಕ್ತಾನುಸಾರ ಗೋಗ್ರಾಸ ಅರ್ಪಿಸಿ, ತನು, ಮನ, ಧನದ ಸಹಕಾರವನ್ನು ನೀಡಬೇಕಾಗಿ ವಿನಂತಿಸುತ್ತೇವೆ ಎಂದು ತಿಳಿಸಿದರು.

ಮೇ 26: ನಂದಗೋಕುಲ ದೀಪೋತ್ಸವ:
ಮೇ 26 ರಂದು ಕಾಮಧೇನು ವೇದಿಕೆ, ನಂದಗೋಕುಲ ಗೋಶಾಲೆ ಕಾಯರ್ತಡ್ಡ, ಕಳೆಂಜದಲ್ಲಿ ಸಂಜೆ 4 ಗಂಟೆಗೆ ಸಭಾ ಕಾರ್ಯಕ್ರಮ ಬಳಿಕ ಇಳಿ ಸಂಜೆ 6 .30 ಗಂಟೆಗೆ ಗೋ ಶಾಲೆಯಲ್ಲಿ ನಂದಗೋಕುಲ ದೀಪೋತ್ಸವ ಸಂಚಾಲನಾ ಸಮಿತಿ ಉದ್ಯಮಿ ಶಶಿಧರ ಶೆಟ್ಟಿ ನವಶಕ್ತಿ ಇವರು ಗೌರವಾಧ್ಯಕ್ಷ ರಾಗಿರುವ ಸಮಿತಿ ನೇತೃತ್ವದಲ್ಲಿ ಮಾನವನ ಬದುಕಿನ ಸಂಜೀವಿನಿಯಾದ ಜಗಜ್ಜನನಿ ಗೋಮಾತೆಗೆ ಪ್ರಣಾಮ ಸಲ್ಲಿಸುವ ವಿಶಿಷ್ಠ ಕಾರ್ಯಕ್ರಮ.

ನಂದಗೋಕುಲ ದೀಪೋತ್ಸವ’ ಪುಣ್ಯಕೋಟಿಗೆ ಒಂದು ಕೋಟಿ… ಗೋಮಾತೆಗೆ ಕೋಟಿಯ ನಮನ… ಸಾಮೂಹಿಕ ಗೋಪೂಜೆ, ಗೋನಂದಾರತಿ ಮತ್ತು ದೀಪೋತ್ಸ ಕಾರ್ಯಕ್ರಮ ನಡೆಯಲಿದೆ ಎಂದು ವಿವರಿಸಿದರು.

ಸಮಿತಿ ಪ್ರಧಾನ ಸಂಚಾಲಕ ಶಶಿರಾಜ್ ಶೆಟ್ಟಿ ಮಾತನಾಡಿ, ಕಾರ್ಯಕ್ರಮ ಅಚ್ಚುಕಟ್ಟಾಗಿ ನಡೆಯಲು ಎಲ್ಲಾ ತಯಾರಿ ನಡೆಸಲಾಗುತ್ತಿದೆ. ಸುಮಾರು ಐದು ವಷ೯ಕ್ಕೆ ಬೇಕಾದಷ್ಟು ಗೋ ಗ್ರಾಸ ಸಂಗ್ರಹಿಸುವ ಗುರಿ ಇಟ್ಟು ಕೊಳ್ಳಲಾಗಿದೆ. ತಾಲೂಕಿನ ಪ್ರತಿ ಮನೆಗೆ ಆಮಂತ್ರಣ ಪತ್ರಿಕೆ ತಲುಪಿಸುವ ಕೆಲಸ ಮಾಡಲಾಗುತ್ತಿದೆ ಎಂದು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಸಮಿತಿ ಅಧ್ಯಕ್ಷ ನಾರಾಯಣ ಗೌಡ ಪಂಚಶ್ರೀ , ಪದ್ಮಕುಮಾರ್ ಹೆಚ್ ಉಪಸ್ಥಿತರಿದ್ದರು.

.

Related posts

ರಾಜ್ಯ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರನ್ನು ಭೇಟಿಯಾದ ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಪದಾಧಿಕಾರಿಗಳುಅರಣ್ಯವಾಸಿಗಳ ಸಮಸ್ಯೆಗಳನ್ನು ಬಗೆಹರಿಸಲು ಮನವಿ ಸಲ್ಲಿಕೆ

Suddi Udaya

ತಮಿಳುನಾಡು ಸ್ವಾಮೀಜಿ ಧರ್ಮಸ್ಥಳ ಭೇಟಿ

Suddi Udaya

ಧರ್ಮಸ್ಥಳಕ್ಕೆ ಪಾದಯಾತ್ರೆಯಲ್ಲಿ ಆಗಮಿಸಿದ ಅತಿಥಿ ತನ್ವೀರ್ ಅಹಮ್ಮದ್ ಉಲ್ಲಾ ಅವರಿಗೆ ರಸ್ತೆಯುದ್ದಕ್ಕೂ ಭವ್ಯ ಸ್ವಾಗತ

Suddi Udaya

ಉಜಿರೆ: ಅಪ್ರಾಪ್ತ ಕಾಲೇಜು ವಿದ್ಯಾರ್ಥಿನಿಗೆ ಕಿರುಕುಳ ಆರೋಪಿ ಸಯ್ಯದ್ ಬಂಧನ; ಪೋಕ್ಸೋ ಪ್ರಕರಣ ದಾಖಲು

Suddi Udaya

ಉಜಿರೆ ಇಂಜಿನಿಯರಿಂಗ್‌ ಕಾಲೇಜಿನಲ್ಲಿ ವಾಲ್ಮೀಕಿ ಜಯಂತಿ ಆಚರಣೆ

Suddi Udaya

ಶ್ರೀ ಧ. ಮಂ. ಅನುದಾನಿತ ಸೆಕೆಂಡರಿ ಶಾಲೆಯ ವಿದ್ಯಾರ್ಥಿನಿ ಶ್ರುತ ಆಳ್ವ ಎನ್.ಎಮ್.ಎಮ್.ಎಸ್ ಪರೀಕ್ಷೆಯಲ್ಲಿ ಉತ್ತೀರ್ಣ

Suddi Udaya
error: Content is protected !!