23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಭಾರತ್ ಬೀಡಿ ಕಂಪೆನಿ ಉಳಿಸಿ ಭಾರತ್ ಬೀಡಿ ಕಂಪೆನಿ ಎದುರು ಸಿಐಟಿಯು ನೇತೃತ್ವದಲ್ಲಿ ಧರಣಿ ಸತ್ಯಾಗ್ರಹ

ಬೆಳ್ತಂಗಡಿ: 2500 ಅಧಿಕೃತ 2500 ಅನಧಿಕೃತ ಒಟ್ಟು 5000 ಕಾರ್ಮಿಕರನ್ನು ಹೊಂದಿದ ಬೆಳ್ತಂಗಡಿಯಲ್ಲಿರುವ ಭಾರತ್ ಬೀಡಿ ಕಂಪೆನಿಯನ್ನು ಮುಚ್ಚಲು ಸರಕಾರ‌ ಅನುಮತಿ ಕೊಡಲು ಬಿಡುವುದಿಲ್ಲ ಎಂದು ಕೆಪಿಸಿಸಿ ರಾಜ್ಯ ಪ್ರಧಾನ‌‌ ಕಾರ್ಯದರ್ಶಿ ರಕ್ಷಿತ್‌ ಶಿವರಾಂ ಭರವಸೆ ನಿಡಿದರು. ಅವರು ಇಂದು ಭಾರತ್ ಬೀಡಿ ಕಂಪೆನಿ ಉಳಿಸಿ ಎಂದು ಭಾರತ್ ಬೀಡಿ ಕಂಪೆನಿ ಬೆಳ್ತಂಗಡಿ ಎದುರು ಸಿಐಟಿಯು ನೇತೃತ್ವದಲ್ಲಿ ನಡೆಯುತ್ತಿರುವ ಧರಣಿ ಸತ್ಯಾಗ್ರಹ ಬೆಂಬಲಿಸಿ ಮಾತಾಡುತ್ತಿದ್ದರು.

ಸರಕಾರದ ಅನುಮತಿ ಇಲ್ಲದೆ ಮುಚ್ಚಲು ಅಥವಾ ಶಿಫ್ಟ್ ಮಾಡಲು ಹೊರಟಿರುವುದು ಬೀಡಿ ಮಾಲಕರ ಕಾನೂನು ಬಾಹಿರ ನಡೆ. ಇದನ್ನು ಸರಕಾರ ಸಹಿಸುವುದಿಲ್ಲ. ಕಾರ್ಮಿಕ ಸಚಿವರ ಗಮನಕ್ಕೆ ತಂದು ಕಂಪೆನಿ ಉಳಿಸುವ ಕೆಲಸ ಮಾಡುತ್ತೇನೆ ಹಾಗೂ ಅದಕ್ಕಾಗಿ ಹೋರಾಡುವ ನಿಮ್ಮ ಜೊತೆ ನಾನು ಬೆಂಬಲಿಕ್ಕಿದ್ದೇನೆ ಎಂದು ಕಾರ್ಮಿಕರಿಗೆ ಅಭಯ ನೀಡಿ ಮಾತಾಡಿದರು.

ಧರಣಿಯನ್ನು ಉದ್ಘಾಟಿಸಿ ಮಾತಾಡಿದ ಬೀಡಿ ಫೆಡರೇಶನ್ ನ ರಾಜ್ಯ ಅದ್ಯಕ್ಷರಾದ ಜೆ ಭಾಲಕೃಷ್ಣ ಶೆಟ್ಟಿ ಮಾತಾಡುತ್ತಾ ಸರಕಾರದ ಅನುಮತಿ ಇಲ್ಲದೆ ಭಾರತ್ ಬೀಡಿ ಕಂಪೆನಿ ಮುಚ್ಚುವ ಅಥವಾ ಶಿಫ್ಡ್ ಮಾಡುವ ಮೂಲಕ ಬ್ರಾಂಚು ಮುಚ್ಚುವ ಭಾರತ್ ಬೀಡಿ ಕಂಪೆನಿಯ ಬ್ರಾಂಚನ್ನು ಬೆಳ್ತಂಗಡಿಯಲ್ಲಿ ಮುಚ್ಚುವ/ ಶಿಫ್ಟಿನ ಹೆಸರಲ್ಲಿ ಮುಚ್ಚುವ ಬೀಡಿ ಮಾಲೀಕರ ಧೋರಣೆ ಕಾನೂನಿನ ಸ್ಪಷ್ಟ ಉಲ್ಲಂಘನೆ ಹಾಗೂ ಸರಕಾರಕ್ಕೆ ಮಾಡುವ ಅವಮಾನ ಎಂದು ಹೇಳಿದರು. ಈ ವರ್ಷದ ಡಿ.ಎ. ಯನ್ನೂ ನೀಡದ ಮಾಲಕರು ಕಾರ್ಮಿಕರನ್ನು ಶೋಷಿಸುವ ಮಾಲಕರ ನಡೆಯ ವಿರುದ್ದ‌ ಸರಕಾರ ಮದ್ಯೆ ಪ್ರವೇಶ ಮಾಡಬೇಕಿದೆ ಎಂದರು.

ಈ ಸಂದರ್ಭ ಮಾತಾಡಿದ ರಾಜ್ಯ ಬೀಡಿ ಫೆಡರೇಶನ್ ಕಾರ್ಯದರ್ಶಿ ಸಯ್ಯದ್ ಮುಜೀಬ್ ಅವರು, ಕಾನೂನು ಬದ್ದ ಸವಲತ್ತುಗಳ ನೀಡದೆ ವಂಚಿಸುತ್ತಾ ಬಂದ ಬೀಡಿ ಮಾಲಕರು ಇದೀಗ ಕಂಪೆನಿ‌ ಮುಚ್ಚಲು ಹೊರಟು ಬೀಡಿ ಕಾರ್ಮಿಕರ ಬದುಕನ್ನು‌ಹೊಸಕಿ ಹಾಕಲು ಹೊರಟಿದ್ದಾರೆ ಎಂದರು. ಗ್ರಾಚ್ಯುವಿಟಿಯಂತಹ ಕಾನೂನು ಬದ್ದ ಸವಲತ್ತನ್ನೇ ನೀಡದೆ‌ ವಂಚಿಸುತ್ತಿರುವ ಈ ಮಾಲಕರ ಸರ್ವಾಧಿಕಾರ ನಡೆಯನ್ನು ಸರಕಾರ ನಿಲ್ಲಿಸಬೇಕಿದೆ. ಮೊದಲೇ ಕೇಂದ್ರ ಸರಕಾರ ಬೀಡಿ & ಸಿಗಾರ್‌‌ ಕಾಯ್ದೆಯನ್ನೇ ರದ್ದು ಪಡಿಸಿ ಕಾರ್ಮಿಕ‌ ಸಂಹಿತೆ ತರಲು ಹೊರಟು ಕಾರ್ಮಿಕರ ಶೋಷಿಸಲು ಮಾಲಕರಿಗೆ ಅನುವು ಮಾಡಿ ಕೊಡುತ್ತಿದೆ. ಈ ಸಂದರ್ಭ ನಮ್ಮ ಸಮರ‌ ಶೀಲ ಹೋರಾಟ ಅನಿವಾರ್ಯವಾಗಿದೆ ಮತ್ತು ಈ ಕಂಪೆನಿ ಉಳಿಸಲು ರಾಜ್ಯ ಫೆಡರೇಶನ್ ಸಿಐಟಿಯು ನಿಮ್ಮ‌ ಜೊತೆಗೆ ಇದೆ ಎಂದು ಹೇಳಿದರು.

ಈ ಸಂದರ್ಭ ಮಾತಾಡಿದ ಸಂಘದ ಅದ್ಯಕ್ಷ ಬಿ.ಎಂ.ಭಟ್ ಅವರು ಸರಕಾರಕ್ಕೆ ಗೌರವ ನೀದ ಹಾಗೂ ದೇಶದ ಕಾನೂನು ಪಾಲನೆ ಮಾಡದ ಕಂಪೆನಿಯ ನಡೆ ದೇಶದ್ರೋಹಕ್ಕೆ ಸಮ ಎಂದರು. ಗ್ರಾಚ್ಚುವಿಟಿ ಕೇಳಿದರೆ ಡಿ.ಎ.‌ಕೇಳಿದರೆ ಕಾನೂನು ಬದ್ದ ವೇತನ ಕೇಳಿದರೆ ಕಾರ್ಮಿಕರ ಕಿರಿ ಕಿರಿ ಎನ್ನುವ ಮಾಲಕರೇ ನಿಮ್ಮ ಹೆತ್ತು ಬೆಳೆಸಿದ ತಾಯಂದಿರ ಬೀದಿ ಪಾಲು ಮಾಡಲು ಹೊರಡುವುದು ನಿಮಗೆ ಶೋಭೆ ತರದು ಎಂದರು. ನ್ಯಾಯ ಸಿಗದಿದ್ದರೆ ಈ ಹೋರಾಟ ಸೋಮವಾರದಿಂದ ಉಪವಾಸ ಸತ್ಯಾಗ್ರಹ ಪ್ರಾರಂಭಿಸುವ ಮೂಲಕ ಉಗ್ರವಾದ ಸ್ವರೂಪ ಪಡೆಯಲಿದೆ ಎಂದು ಸಾರಿದರು. ಸರಕಾರಕ್ಕಿಂತ ತಾನು ಮೇಲೆಂದು ಮೆರೆಯುವ ಬೀಡಿ ಮಾಲಕರಿಗೆ ಕಂಪೆನಿ ಬಂದ್ ಮಾಡದಂತೆ ಸರಕಾರ ಸೂಚಿಸಬೇಕೆಂದು ಹೇಳಿದರು.

ಈ ಸಂದರ್ಭ ಬೀಡಿ ಗುತ್ತಿಗೆದಾರ ಸಂಘದ ಮುಖಂಡರುಗಳಾದ ಸಿ ಮಹಮ್ಮದ್ , ಕಕ್ಕನಾಜೆ ಶಿವಾನಂದ ರಾವ್ ಮಾತಾಡಿದರು. ಹೋರಾಟದ ನಾಯಕತ್ವದಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ಈಶ್ವರಿ ಶಂಕರ್ ಪದ್ಮುಂಜ, ನೆಬಿಸಾ, ಜಯಶ್ರೀ, ಪುಷ್ಪಾ, ವಿಶ್ವಾನಾಥ ಶಿಬಾಜೆ, ಜಯರಾಮ ಮಯ್ಯ, ಅಶ್ವಿತ, ಉಷಾ, ರಾಮಚಂದ್ರ, ಶ್ರೀಧರ ಮುದ್ದಿಗೆ, ಅಬಿಷೆಕ್ ಪದ್ಮುಂಜ, ರಮೇಶ್ ಕೊಕ್ಕಡ, ಮೊದಲಾದವರು ಇದ್ದರು.

Related posts

ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಕಿಲ್ಲೂರಿನ ಶಾಲೆಯಲ್ಲಿ ಶೈಕ್ಷಣಿಕ ಕಾರ್ಯಕ್ರಮಗಳ ಆಯೋಜನೆ

Suddi Udaya

ನಾವೂರು: ಮುರ ಮದರಸದಲ್ಲಿ ಮಾದಕ ದ್ರವ್ಯ ವಿರುದ್ಧದ ಅಭಿಯಾನ ಹಾಗೂ ಸ್ನೇಹ ಸಹವಾಸ ಶಿಬಿರ

Suddi Udaya

ಕೊಯ್ಯೂರು: ಶ್ರೀ ಪಂಚದುರ್ಗಾಪರಮೇಶ್ವರಿ ಭಜನಾ ಮಂಡಳಿಗಳಿಗೆ ತಾಲೂಕು ಭಜನಾ ಪರಿಷತ್ ಕಾರ್ಯದರ್ಶಿ ಪಿ ಚಂದ್ರಶೇಖರ್ ಸಾಲ್ಯಾನ್ ಭೇಟಿ

Suddi Udaya

ವೇಣೂರು: ರವಿಚಂದ್ರ ಭಂಡಾರಿ ನಿಧನ

Suddi Udaya

ಆಪರೇಷನ್ ಸಿಂಧೂರ: ಮುಂಡಾಜೆ ಪರಶುರಾಮ ದೇವಸ್ಥಾನದಲ್ಲಿ ಪ್ರಾಥ೯ನೆ

Suddi Udaya

ಉಜಿರೆ: ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ‘ಸಿರಿಧಾನ್ಯದಿಂದ ಆರೋಗ್ಯ ಸಿರಿ ‘ ಸಿರಿಧಾನ್ಯ ಜಾಗೃತಿ

Suddi Udaya
error: Content is protected !!