23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿಸಮಸ್ಯೆ

ಮರೋಡಿ 25 ಕೆವಿ ಸಾಮರ್ಥ್ಯದ ಪರಿವರ್ತಕ ಧರಾಶಾಯಿ: ಗಾಳಿ ಮಳೆ ಮೆಸ್ಕಾಂಗೆ 5 ಲಕ್ಷ ರೂ. ನಷ್ಟ

ಬೆಳ್ತಂಗಡಿ: ಬುಧವಾರ ಸಂಜೆ ಬೆಳ್ತಂಗಡಿ, ಅಳದಂಗಡಿ, ನಾರಾವಿ, ಕುದ್ಯಾಡಿ, ಮರೋಡಿ ಮೊದಲಾದ ಕಡೆಗಳಲ್ಲಿ ಮಳೆಯೊಂದಿಗೆ ಗಾಳಿಯು ಬೀಸಿದ ಪರಿಣಾಮ ವಿದ್ಯುತ್ ಕಂಬಗಳು ಹಾಗೂ ಪರಿವರ್ತಕ ನೆಲಕ್ಕುರುಳಿ ಮೆಸ್ಕಾಂಗೆ ರೂ.5 ಲಕ್ಷ ನಷ್ಟ ಉಂಟಾಗಿದೆ.

ಬೆಳ್ತಂಗಡಿ ಮೆಸ್ಕಾಂ ಉಪ ವಿಭಾಗದ ನಾರಾವಿ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ 4 ಎಚ್‌ ಟಿ, 7 ಎಲ್ ಟಿ ಕಂಬಗಳು ಮುರಿದುಬಿದ್ದು ಪರಿಸರದಲ್ಲಿ ವಿದ್ಯುತ್ ಪೂರೈಕೆ ಅಸ್ತವ್ಯಸ್ತವಾಯಿತು. ನಾರಾವಿಯ ಮರೋಡಿ ರಸ್ತೆಯಲ್ಲಿ 25 ಕೆವಿ ಸಾಮರ್ಥ್ಯದ ಪರಿವರ್ತಕ ಧರಾಶಾಯಿಯಾಯಿತು. ಪರಿವರ್ತಕ ಅಳವಡಿಸಿದ್ದ ಕಂಬಗಳು ಮುರಿದುಬಿದ್ದವು. ವಿದ್ಯುತ್ ವ್ಯತ್ಯಯ ಉಂಟಾದ ಕಡೆಗಳಲ್ಲಿ ಮೆಸ್ಕಾಂ ಮರು ಸಂಪರ್ಕ ನಿರ್ಮಿಸಿಕೊಡುವ ಕಾಮಗಾರಿ ನಡೆಸಿದೆ..

ರಸ್ತೆಗೆ ಬಿದ್ದ ಮರ-
ಬೆಳ್ತಂಗಡಿ ಸಂತೆಕಟ್ಟೆಯ ಕುತ್ಯಾರು ರಸ್ತೆಯಲ್ಲಿ ಬುಧವಾರ ರಾತ್ರಿ ವಿದ್ಯುತ್ ಲೈನ್ ಮೇಲೆ ಮರ ಬಿದ್ದಿದೆ. ಅದೃಷ್ಟವಶಾತ್ ಮರ ಬೀಳುವ ವೇಳೆ ಜನ, ವಾಹನ ಸಂಚಾರ ಇಲ್ಲದ ಕಾರಣ ಯಾವುದೇ ಅಪಾಯ ಉಂಟಾಗಿಲ್ಲ. ಮೆಸ್ಕಾಂ ಸಿಬ್ಬಂದಿ ಮರ ತೆರೆವುಗೊಳಿಸಿ ವಿದ್ಯುತ್ ಪೂರೈಕೆಗೆ ಸಹಕರಿಸಿದರು.

Related posts

ಇಂದಬೆಟ್ಟು: ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿ 10 ನೇ ತರಗತಿಯ ಮಕ್ಕಳಿಗೆ ವಿಶೇಷ ತರಗತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ವಿಧಾನ ಪರಿಷತ್ ಉಪಚುನಾವಣೆ, ಬೆಳ್ತಂಗಡಿಯಲ್ಲಿ 676 ಮತದಾರರು ಬೆಳ್ತಂಗಡಿಯ 49 ಮತಗಟ್ಟೆಯ 100 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಪತ್ರಿಕಾಗೋಷ್ಠಿಯಲ್ಲಿ ತಹಿಶೀಲ್ದಾರ್ ಪೃಥ್ವಿ ಸಾನಿಕಾಮ್ ಮಾಹಿತಿ

Suddi Udaya

ಸಿದ್ದಕಟ್ಟೆ ಮಹಿಳೆ ಕಳೆದುಕೊಂಡ ಹಣವಿದ್ದ ಬ್ಯಾಗ್ ನ್ನು ಹಿಂತಿರುಗಿಸಿದ ಗರ್ಡಾಡಿ ಯುವಕ ವರುಣ್ ಪೂಜಾರಿ: ಯುವಕನ ಕಾರ್ಯಕ್ಕೆ ಶಾಸಕ ಹರೀಶ್ ಪೂಂಜಾರಿಂದ ಅಭಿನಂದನೆ

Suddi Udaya

ಹತ್ತು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Suddi Udaya

ಮಿತ್ತಬಾಗಿಲು ಬ್ರಹ್ಮಶ್ರೀ ನಾರಾಯಣ ಗುರುಗಳ ಮಂದಿರದಲ್ಲಿ ನಡೆಯಿತೊಂದು ಪವಾಡ: ಕಲಶೋತ್ಸವ ಸಂದರ್ಭದಲ್ಲಿ ಮಾಂಗಲ್ಯ ಸರಮಾಲೆ ಕಳೆದುಕೊಂಡ ಮಹಿಳೆಗೆ ಮಂದಿರದ ಆವರಣದಲ್ಲೇ ಸಿಕ್ಕಿತು ಮಾಂಗಲ್ಯ

Suddi Udaya

ತಾಲೂಕು ಮಟ್ಟದ ಕರಾಟೆ ಪಂದ್ಯಾಟ : ಸ್ಟಾರ್ ಲೈನ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!