July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿಸಮಸ್ಯೆ

ಮರೋಡಿ 25 ಕೆವಿ ಸಾಮರ್ಥ್ಯದ ಪರಿವರ್ತಕ ಧರಾಶಾಯಿ: ಗಾಳಿ ಮಳೆ ಮೆಸ್ಕಾಂಗೆ 5 ಲಕ್ಷ ರೂ. ನಷ್ಟ

ಬೆಳ್ತಂಗಡಿ: ಬುಧವಾರ ಸಂಜೆ ಬೆಳ್ತಂಗಡಿ, ಅಳದಂಗಡಿ, ನಾರಾವಿ, ಕುದ್ಯಾಡಿ, ಮರೋಡಿ ಮೊದಲಾದ ಕಡೆಗಳಲ್ಲಿ ಮಳೆಯೊಂದಿಗೆ ಗಾಳಿಯು ಬೀಸಿದ ಪರಿಣಾಮ ವಿದ್ಯುತ್ ಕಂಬಗಳು ಹಾಗೂ ಪರಿವರ್ತಕ ನೆಲಕ್ಕುರುಳಿ ಮೆಸ್ಕಾಂಗೆ ರೂ.5 ಲಕ್ಷ ನಷ್ಟ ಉಂಟಾಗಿದೆ.

ಬೆಳ್ತಂಗಡಿ ಮೆಸ್ಕಾಂ ಉಪ ವಿಭಾಗದ ನಾರಾವಿ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ 4 ಎಚ್‌ ಟಿ, 7 ಎಲ್ ಟಿ ಕಂಬಗಳು ಮುರಿದುಬಿದ್ದು ಪರಿಸರದಲ್ಲಿ ವಿದ್ಯುತ್ ಪೂರೈಕೆ ಅಸ್ತವ್ಯಸ್ತವಾಯಿತು. ನಾರಾವಿಯ ಮರೋಡಿ ರಸ್ತೆಯಲ್ಲಿ 25 ಕೆವಿ ಸಾಮರ್ಥ್ಯದ ಪರಿವರ್ತಕ ಧರಾಶಾಯಿಯಾಯಿತು. ಪರಿವರ್ತಕ ಅಳವಡಿಸಿದ್ದ ಕಂಬಗಳು ಮುರಿದುಬಿದ್ದವು. ವಿದ್ಯುತ್ ವ್ಯತ್ಯಯ ಉಂಟಾದ ಕಡೆಗಳಲ್ಲಿ ಮೆಸ್ಕಾಂ ಮರು ಸಂಪರ್ಕ ನಿರ್ಮಿಸಿಕೊಡುವ ಕಾಮಗಾರಿ ನಡೆಸಿದೆ..

ರಸ್ತೆಗೆ ಬಿದ್ದ ಮರ-
ಬೆಳ್ತಂಗಡಿ ಸಂತೆಕಟ್ಟೆಯ ಕುತ್ಯಾರು ರಸ್ತೆಯಲ್ಲಿ ಬುಧವಾರ ರಾತ್ರಿ ವಿದ್ಯುತ್ ಲೈನ್ ಮೇಲೆ ಮರ ಬಿದ್ದಿದೆ. ಅದೃಷ್ಟವಶಾತ್ ಮರ ಬೀಳುವ ವೇಳೆ ಜನ, ವಾಹನ ಸಂಚಾರ ಇಲ್ಲದ ಕಾರಣ ಯಾವುದೇ ಅಪಾಯ ಉಂಟಾಗಿಲ್ಲ. ಮೆಸ್ಕಾಂ ಸಿಬ್ಬಂದಿ ಮರ ತೆರೆವುಗೊಳಿಸಿ ವಿದ್ಯುತ್ ಪೂರೈಕೆಗೆ ಸಹಕರಿಸಿದರು.

Related posts

ಕಳೆಂಜ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಬ್ರಾಂಡೆಡ್ ಬಟ್ಟೆ ಖರೀದಿಗೆ ಸುವರ್ಣಾವಕಾಶ! ಶೇ.80 ರವರೆಗೆ ಬ್ರಾಂಡೆಡ್ ಬಟ್ಟೆಗಳ ಮೇಲೆ ಭಾರೀ ರಿಯಾಯಿತಿ

Suddi Udaya

ಕೊಕ್ಕಡ: ತಲೆಗೆ ಮರಬಿದ್ದು ಮಹಿಳೆಯ ಧಾರುಣ ಸಾವು:

Suddi Udaya

ಕರಾಟೆ ಚಾಂಪಿಯನ್ಶಿಪ್: ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿ ಶಹೀರ್ ಅನಸ್ ಕುಮಿಟೆ ಯಲ್ಲಿ ಚಿನ್ನ ಹಾಗೂ ಕಟಾದಲ್ಲಿ ಬೆಳ್ಳಿ ಪದಕ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ/ದುರ್ಗಾದೇವಿ ದೇವಸ್ಥಾನದಲ್ಲಿ ಮರದ ಮುಹೂರ್ತ ಮತ್ತು ಬ್ರಹ್ಮಕಲಶೋತ್ಸವ ಮಹಾ ಅನ್ನದಾನದ ಕೂಪನ್ ಬಿಡುಗಡೆ

Suddi Udaya

ಎಸ್.ಡಿ.ಎಂ ಇಂಜಿನಿಯರಿಂಗ್ ಕಾಲೇಜಿನ ಅಸಿಸ್ಟೆಂಟ್ ಪ್ರೊಫೆಸರ್ ಪದ್ಮಪ್ರಸಾದ ಅವರಿಗೆ ಪಿಎಚ್.ಡಿ. ಪದವಿ ಪ್ರದಾನ

Suddi Udaya
error: Content is protected !!