ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿಸಮಸ್ಯೆ

ಮರೋಡಿ 25 ಕೆವಿ ಸಾಮರ್ಥ್ಯದ ಪರಿವರ್ತಕ ಧರಾಶಾಯಿ: ಗಾಳಿ ಮಳೆ ಮೆಸ್ಕಾಂಗೆ 5 ಲಕ್ಷ ರೂ. ನಷ್ಟ

ಬೆಳ್ತಂಗಡಿ: ಬುಧವಾರ ಸಂಜೆ ಬೆಳ್ತಂಗಡಿ, ಅಳದಂಗಡಿ, ನಾರಾವಿ, ಕುದ್ಯಾಡಿ, ಮರೋಡಿ ಮೊದಲಾದ ಕಡೆಗಳಲ್ಲಿ ಮಳೆಯೊಂದಿಗೆ ಗಾಳಿಯು ಬೀಸಿದ ಪರಿಣಾಮ ವಿದ್ಯುತ್ ಕಂಬಗಳು ಹಾಗೂ ಪರಿವರ್ತಕ ನೆಲಕ್ಕುರುಳಿ ಮೆಸ್ಕಾಂಗೆ ರೂ.5 ಲಕ್ಷ ನಷ್ಟ ಉಂಟಾಗಿದೆ.

ಬೆಳ್ತಂಗಡಿ ಮೆಸ್ಕಾಂ ಉಪ ವಿಭಾಗದ ನಾರಾವಿ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ 4 ಎಚ್‌ ಟಿ, 7 ಎಲ್ ಟಿ ಕಂಬಗಳು ಮುರಿದುಬಿದ್ದು ಪರಿಸರದಲ್ಲಿ ವಿದ್ಯುತ್ ಪೂರೈಕೆ ಅಸ್ತವ್ಯಸ್ತವಾಯಿತು. ನಾರಾವಿಯ ಮರೋಡಿ ರಸ್ತೆಯಲ್ಲಿ 25 ಕೆವಿ ಸಾಮರ್ಥ್ಯದ ಪರಿವರ್ತಕ ಧರಾಶಾಯಿಯಾಯಿತು. ಪರಿವರ್ತಕ ಅಳವಡಿಸಿದ್ದ ಕಂಬಗಳು ಮುರಿದುಬಿದ್ದವು. ವಿದ್ಯುತ್ ವ್ಯತ್ಯಯ ಉಂಟಾದ ಕಡೆಗಳಲ್ಲಿ ಮೆಸ್ಕಾಂ ಮರು ಸಂಪರ್ಕ ನಿರ್ಮಿಸಿಕೊಡುವ ಕಾಮಗಾರಿ ನಡೆಸಿದೆ..

ರಸ್ತೆಗೆ ಬಿದ್ದ ಮರ-
ಬೆಳ್ತಂಗಡಿ ಸಂತೆಕಟ್ಟೆಯ ಕುತ್ಯಾರು ರಸ್ತೆಯಲ್ಲಿ ಬುಧವಾರ ರಾತ್ರಿ ವಿದ್ಯುತ್ ಲೈನ್ ಮೇಲೆ ಮರ ಬಿದ್ದಿದೆ. ಅದೃಷ್ಟವಶಾತ್ ಮರ ಬೀಳುವ ವೇಳೆ ಜನ, ವಾಹನ ಸಂಚಾರ ಇಲ್ಲದ ಕಾರಣ ಯಾವುದೇ ಅಪಾಯ ಉಂಟಾಗಿಲ್ಲ. ಮೆಸ್ಕಾಂ ಸಿಬ್ಬಂದಿ ಮರ ತೆರೆವುಗೊಳಿಸಿ ವಿದ್ಯುತ್ ಪೂರೈಕೆಗೆ ಸಹಕರಿಸಿದರು.

Related posts

ಗಾಳಿ- ಮಳೆಗೆ ಕೋಳಿ ಸಾಕಾಣಿಕೆಯ ಶೆಡ್ ಕುಸಿದು ಬಿದ್ದು ಸಾವಿರಾರು ಕೋಳಿಗಳ ಸಾವು,ಲಕ್ಷಾಂತರ ರೂ ನಷ್ಟ

Suddi Udaya

ಇಳಂತಿಲ: ಅಮಲು ಸೇವನೆಯಿಂದ ಅನುಚಿತವಾಗಿ ವರ್ತಿಸುತ್ತಿದ್ದ ಇಬ್ಬರು ಯುವಕರು ಪೊಲೀಸರ ವಶಕ್ಕೆ

Suddi Udaya

ಕೊಕ್ರಾಡಿ ಸರ್ಕಾರಿ ಪ್ರೌಢಶಾಲೆಯಲ್ಲಿ ಸಾಂಸ್ಕೃತಿಕ ಸ್ಪರ್ಧೆಗಳ ಸಮಾರೋಪ ಸಮಾರಂಭ ಪ್ರತಿಭಾ ದಿನ

Suddi Udaya

ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನಕ್ಕೆ ಮಾಜಿ ಸಚಿವ ಸುರೇಶ್ ಕುಮಾರ್ ಭೇಟಿ

Suddi Udaya

ಸವಣಾಲು ಅ.ಹಿ.ಪ್ರಾ. ಶಾಲಾ ಮಂತ್ರಿ ಮಂಡಲದ ಪ್ರಮಾಣವಚನ ಸಮಾರಂಭ ಹಾಗೂ ವಿದ್ಯಾರ್ಥಿ ಸಂಘಗಳ ಉದ್ಘಾಟನೆ

Suddi Udaya

ನಿಡ್ಲೆ ಸರ್ಕಾರಿ ಪ್ರೌಢಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಶಾಂತಾ ಶೆಟ್ಟಿ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya
error: Content is protected !!