23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು ಐಟಿಐ : ಟೊಯೋಟೊ ನೇಮಕಾತಿ ಶಿಬಿರ

ವೇಣೂರು: ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಐಟಿಐಯಲ್ಲಿ ಪ್ರಖ್ಯಾತ ಟೊಯೋಟಾ ಸಂಸ್ಥೆಯವರು ಎರಡು ದಿನಗಳ ನೇಮಕಾತಿ ಶಿಬಿರವನ್ನು ನಡೆಸಿದ್ದು, ವೇಣೂರು ಐಟಿಐ ಮತ್ತು ಆಸುಪಾಸಿನ ಕೆಲವು ಐಟಿಐಗಳ ವಿದ್ಯಾರ್ಥಿಗಳ ಸಹಿತ ಒಟ್ಟು 273 ಅಭ್ಯರ್ಥಿಗಳನ್ನು ಆಯ್ಕೆ ಮಾಡಿರುತ್ತಾರೆ.

ಬರಹ ಪರೀಕ್ಷೆ, ಮೌಖಿಕ ಸಂದರ್ಶನ, ದೈಹಿಕ ಆರೋಗ್ಯ ಪರೀಕ್ಷೆ ಮುಂತಾದ ಮೂರು ಹಂತಗಳಲ್ಲಿ ಆಯ್ಕೆ ನಡೆಸಲಾಯಿತು. ಟೊಯೋಟಾ ಸಂಸ್ಥೆಯ ಮಾನವ ಸಂಪನ್ಮೂಲ ಅಧಿಕಾರಿಗಳಾದ ದಯಾನಂದ ಆರ್., ರೋಷನ್, ರುದ್ರ ಅವರಲ್ಲದೇ ತಾಂತ್ರಿಕ ಪರಿಣಿತರನ್ನೊಳಗೊಂಡ ಇನ್ನಿತರ ಅಧಿಕಾರಿಗಳು ಆಯ್ಕೆ ಶಿಬಿರವನ್ನು ನಡೆಸಿದರು.

ದಯಾನಂದ್ ಆರ್. ರವರು ವಿದ್ಯಾರ್ಥಿಗಳನ್ನು ಕುರಿತು ಮಾತನಾಡಿ ಆಧುನಿಕ ಜಗತ್ತಿನಲ್ಲಿ ತಾಂತ್ರಿಕ ಕೌಶಲ್ಯಕ್ಕೆ ವಿಪರೀತ ಬೇಡಿಕೆಗಳಿದ್ದು, ತಾಂತ್ರಿಕ ಕೌಶಲ್ಯವನ್ನು ಹೊಂದಿರುವ ಯಾವುದೇ ವ್ಯಕ್ತಿಗೆ ಉತ್ತಮ ಭವಿಷ್ಯವಿದೆ. ಕಂಪನಿಗಳಲ್ಲಿ ಇದೀಗ ಮಹಿಳೆಯರನ್ನು ನೇಮಕಾತಿ ಮಾಡುತ್ತಿದ್ದು, ಐಟಿಐ ಕಲಿತ ಮಹಿಳೆಯರಿಗೆ ಕೂಡಲೇ ಬಹುರಾಷ್ಟ್ರೀಯ ಕಂಪನಿಗಳಲ್ಲಿ ನೌಕರಿ ಸಿಗುವುದು ನಿಶ್ಚಿತ ಎಂದು ತಿಳಿಸಿದರು. ಸಂಸ್ಥೆಯ ಪ್ರಾಚಾರ್ಯರಾದ ವಿಶ್ವೇಶ್ವರ ಪ್ರಸಾದ್ ಅತಿಥಿಗಳನ್ನು ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ವೇಣೂರಿನ ಎಸ್.ಡಿ.ಎಂ. ಐಟಿಐ ಮಾತ್ರವಲ್ಲದೆ ಆಸುಪಾಸಿನ ಏಳು ಐಟಿಐ ಸಂಸ್ಥೆಗಳಿಂದ ನೇಮಕಾತಿ ಶಿಬಿರದಲ್ಲಿ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Related posts

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಬೆಳ್ತಂಗಡಿ: ಗಣೇಶ್ ಕ್ಲಿನಿಕಲ್ ಲ್ಯಾಬೋರೇಟರಿ ರಕ್ತಪರೀಕ್ಷಾ ಕೇಂದ್ರ ಸ್ಥಳಾಂತರಗೊಂಡು ಶುಭಾರಂಭ

Suddi Udaya

ಪುತ್ತೂರು: ಸಹಾಯಕ ಆಯುಕ್ತ ಗಿರೀಶ್ ನಂದನ್ ವರ್ಗಾವಣೆ: ನೂತನ ಆಯುಕ್ತರಾಗಿ ಮಹೇಶ್ ಚಂದ್ರ ನೇಮಕ

Suddi Udaya

ಝೆಂಕಾರ ರಾಷ್ಟ್ರೀಯ ಶಿಕ್ಷಣ ಮತ್ತು ಸಾಂಸ್ಕ್ರತಿಕ ಫೆಸ್ಟ್: ಶ್ರೀ ಗುರುದೇವ ಪ್ರ.ದ. ಕಾಲೇಜಿನ ವಿದ್ಯಾರ್ಥಿ ಕೀರ್ತನ್ ಚಿತ್ರಕಲೆ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ

Suddi Udaya

ಕನ್ಯಾಡಿ || : ಡಾ. ಡಿ.ವೀರೇಂದ್ರ ಹೆಗ್ಗಡೆ ಯವರಿಂದ 12ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮದ್ದಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿಯ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!