September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು ಐಟಿಐ : ಟೊಯೋಟೊ ನೇಮಕಾತಿ ಶಿಬಿರ

ವೇಣೂರು: ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಐಟಿಐಯಲ್ಲಿ ಪ್ರಖ್ಯಾತ ಟೊಯೋಟಾ ಸಂಸ್ಥೆಯವರು ಎರಡು ದಿನಗಳ ನೇಮಕಾತಿ ಶಿಬಿರವನ್ನು ನಡೆಸಿದ್ದು, ವೇಣೂರು ಐಟಿಐ ಮತ್ತು ಆಸುಪಾಸಿನ ಕೆಲವು ಐಟಿಐಗಳ ವಿದ್ಯಾರ್ಥಿಗಳ ಸಹಿತ ಒಟ್ಟು 273 ಅಭ್ಯರ್ಥಿಗಳನ್ನು ಆಯ್ಕೆ ಮಾಡಿರುತ್ತಾರೆ.

ಬರಹ ಪರೀಕ್ಷೆ, ಮೌಖಿಕ ಸಂದರ್ಶನ, ದೈಹಿಕ ಆರೋಗ್ಯ ಪರೀಕ್ಷೆ ಮುಂತಾದ ಮೂರು ಹಂತಗಳಲ್ಲಿ ಆಯ್ಕೆ ನಡೆಸಲಾಯಿತು. ಟೊಯೋಟಾ ಸಂಸ್ಥೆಯ ಮಾನವ ಸಂಪನ್ಮೂಲ ಅಧಿಕಾರಿಗಳಾದ ದಯಾನಂದ ಆರ್., ರೋಷನ್, ರುದ್ರ ಅವರಲ್ಲದೇ ತಾಂತ್ರಿಕ ಪರಿಣಿತರನ್ನೊಳಗೊಂಡ ಇನ್ನಿತರ ಅಧಿಕಾರಿಗಳು ಆಯ್ಕೆ ಶಿಬಿರವನ್ನು ನಡೆಸಿದರು.

ದಯಾನಂದ್ ಆರ್. ರವರು ವಿದ್ಯಾರ್ಥಿಗಳನ್ನು ಕುರಿತು ಮಾತನಾಡಿ ಆಧುನಿಕ ಜಗತ್ತಿನಲ್ಲಿ ತಾಂತ್ರಿಕ ಕೌಶಲ್ಯಕ್ಕೆ ವಿಪರೀತ ಬೇಡಿಕೆಗಳಿದ್ದು, ತಾಂತ್ರಿಕ ಕೌಶಲ್ಯವನ್ನು ಹೊಂದಿರುವ ಯಾವುದೇ ವ್ಯಕ್ತಿಗೆ ಉತ್ತಮ ಭವಿಷ್ಯವಿದೆ. ಕಂಪನಿಗಳಲ್ಲಿ ಇದೀಗ ಮಹಿಳೆಯರನ್ನು ನೇಮಕಾತಿ ಮಾಡುತ್ತಿದ್ದು, ಐಟಿಐ ಕಲಿತ ಮಹಿಳೆಯರಿಗೆ ಕೂಡಲೇ ಬಹುರಾಷ್ಟ್ರೀಯ ಕಂಪನಿಗಳಲ್ಲಿ ನೌಕರಿ ಸಿಗುವುದು ನಿಶ್ಚಿತ ಎಂದು ತಿಳಿಸಿದರು. ಸಂಸ್ಥೆಯ ಪ್ರಾಚಾರ್ಯರಾದ ವಿಶ್ವೇಶ್ವರ ಪ್ರಸಾದ್ ಅತಿಥಿಗಳನ್ನು ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ವೇಣೂರಿನ ಎಸ್.ಡಿ.ಎಂ. ಐಟಿಐ ಮಾತ್ರವಲ್ಲದೆ ಆಸುಪಾಸಿನ ಏಳು ಐಟಿಐ ಸಂಸ್ಥೆಗಳಿಂದ ನೇಮಕಾತಿ ಶಿಬಿರದಲ್ಲಿ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Related posts

ಶಿಶಿಲ ಸ.ಉ.ಹಿ.ಪ್ರಾ. ಶಾಲೆಯ ಮರು ನಿರ್ಮಾಣ ಕಾರ್ಯ ನಡೆಯುತ್ತಿದ್ದು ಸ್ಥಳಕ್ಕೆ ಪುತ್ತೂರು ಮಾಸ್ಟರ್ ಪ್ಲಾನರಿಯವರಿಂದ ಭೇಟಿ

Suddi Udaya

ನಾವೂರು: ನಮನ ಟ್ರೇಡರ್‍ಸ್ ಶುಭಾರಂಭ

Suddi Udaya

ಬೆಳ್ತಂಗಡಿ ತ್ರಿ ಸ್ಟಾರ್ ವೈನ್ಸ್ ಶಾಪ್ ಮತ್ತು ಉಜಿರೆಯ ಮೊಬೈಲ್ ಶಾಪ್ ಕಳ್ಳತನ ಪ್ರಕರಣ: ಅಪ್ರಾಪ್ತ ಬಾಲಕ ಸೇರಿ ಇಬ್ಬರು ಕುಂದಾಪುರದಲ್ಲಿ ವಶಕ್ಕೆ

Suddi Udaya

ಬಳಂಜ: ಅಟ್ಲಾಜೆ ಸರ್ವೋದಯ ಫ್ರೆಂಡ್ಸ್ ಕ್ಲಬ್ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ವೇಣೂರು ಪ್ರೌಢಶಾಲಾ ವಿದ್ಯಾರ್ಥಿಯ ಚಿಕಿತ್ಸೆಗೆ ರೂ 40 ಸಾವಿರ ಆರ್ಥಿಕ ನೆರವು ಹಸ್ತಾಂತರ

Suddi Udaya

ತೆಕ್ಕಾರು ಉಪ ಆರೋಗ್ಯ ಕೇಂದ್ರಕ್ಕೆ ಕಟ್ಟಡ ನಿರ್ಮಿಸಲು ಅನುದಾನ ಮಂಜೂರುಗೊಳಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರಿಗೆ ತೆಕ್ಕಾರು ಗ್ರಾ.ಪಂ. ಸದಸ್ಯ ಅಬ್ದುಲ್ ರಝಾಕ್ ರವರಿಂದ ಮನವಿ

Suddi Udaya
error: Content is protected !!