September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಚಾರ್ಮಾಡಿ ಘಾಟಿ: ಅರಣ್ಯ ಇಲಾಖೆ ಗಸ್ತು

ಚಾರ್ಮಾಡಿ ಘಾಟಿ ರಸ್ತೆ ಪರಿಸರದಲ್ಲಿ ನಿರಂತರವಾಗಿ ಕಾಡಾನೆ ಕಂಡು ಬರುತ್ತಿರುವ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ವತಿಯಿಂದ ರಾತ್ರಿ ಗಸ್ತು ಆರಂಭವಾಗಿದೆ.

ಕಳೆದ ಕೆಲವು ದಿನಗಳಿಂದ ಕಾಡಾನೆ ಪ್ರತಿದಿನ ಎಂಬಂತೆ ಘಾಟಿಯ ಒಂದನೇ ತಿರುವಿನಿಂದ ಒಂಬತ್ತನೇ ತಿರುವಿನ ತನಕವು ಸವಾರಿ ನಡೆಸುತ್ತಿದ್ದು, ರಸ್ತೆಯಲ್ಲಿ ನಿಂತು ಈಚಲ ಮರ ತಿನ್ನುವುದು ಕಂಡುಬಂದಿದೆ. ಅಲ್ಲದೆ ಹಲವು ಬಾರಿ ಹಗಲು ಹೊತ್ತಿನಲ್ಲೂ ಸಂಚಾರವನ್ನು ನಡೆಸಿ ಪ್ರಯಾಣಿಕರ ವಾಹನ ಸವಾರರರ ಭೀತಿಗೆ ಕಾರಣವಾಗಿದೆ. ಕೆಲವು ಪ್ರಯಾಣಿಕರು ಆನೆಯನ್ನು ಅಟ್ಟಲು ಯತ್ನಿಸುವುದು, ಕಲ್ಲೆಸೆಯುವುದು, ಬೊಬ್ಬೆ ಹಾಕುವುದು, ಇತ್ಯಾದಿ ಅನಗತ್ಯ ಚಟುವಟಿಕೆಗಳನ್ನು ಮಾಡುತ್ತಾ ಅಪಾಯವನ್ನು ಆಹ್ವಾನಿಸುವುದು ಕಂಡುಬರುತ್ತಿದೆ.

ನಿರಂತರವಾಗಿ ಕಾಡಾನೆ ಘಾಟಿ ರಸ್ತೆಯಲ್ಲಿ ಕಂಡು ಬರುವ ಕಾರಣ ಹಲವು ವಾಹನ ಸವಾರರು ಪ್ರಯಾಣಿಕರು ಈಗಲೂ ಭಯದಿಂದಲೇ ಸಾಗುತ್ತಿದ್ದಾರೆ..

Related posts

ವಿದ್ಯಾರ್ಥಿಗೆ ಬೆತ್ತದಿಂದ ಥಳಿಸಿದ ಶಿಕ್ಷಕನ ವಿರುದ್ದ ದೂರು ದಾಖಲು

Suddi Udaya

ಉಜಿರೆ: ಸ್ಕೂಟರ್ ಮತ್ತು ಬೈಕ್ ನಡುವೆ ಅಪಘಾತ; ಸ್ಕೂಟರ್ ಸವಾರ ಮೃತ್ಯು

Suddi Udaya

ಬೆಳ್ತಂಗಡಿ ಜೈನ ಬಸದಿ ಬಳಿ ಕಾರುಗಳೆರಡು ಪರಸ್ಪರ ಡಿಕ್ಕಿ: ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯ

Suddi Udaya

ಮಾ:29: ನಿಡ್ಲೆ ಪ್ರೌಢಶಾಲಾ ಕೊಠಡಿಗಳ ಹಸ್ತಾಂತರ ಹಾಗೂ ಉಚಿತ ನೇತ್ರ ತಪಾಸಣಾ ಶಿಬಿರ

Suddi Udaya

ಬುರುಡೆ ಚಿನ್ನಯ್ಯ ಮತ್ತೆ ಇಂದು ಬೆಳ್ತಂಗಡಿ ಕೋರ್ಟ್ ಗೆ ಹಾಜರು

Suddi Udaya

ಕಡಿರುದ್ಯಾವರ ಬೊಳ್ಳೂರು ನೇತ್ರಾವತಿ ನದಿಯಿಂದ ಅಕ್ರಮ ಮರಳು ಸಾಗಾಟ: ಪಿಕಪ್ ಸಹಿತ ಮರಳು ವಶ

Suddi Udaya
error: Content is protected !!