25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಚಾರ್ಮಾಡಿ ಘಾಟಿ: ಅರಣ್ಯ ಇಲಾಖೆ ಗಸ್ತು

ಚಾರ್ಮಾಡಿ ಘಾಟಿ ರಸ್ತೆ ಪರಿಸರದಲ್ಲಿ ನಿರಂತರವಾಗಿ ಕಾಡಾನೆ ಕಂಡು ಬರುತ್ತಿರುವ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ವತಿಯಿಂದ ರಾತ್ರಿ ಗಸ್ತು ಆರಂಭವಾಗಿದೆ.

ಕಳೆದ ಕೆಲವು ದಿನಗಳಿಂದ ಕಾಡಾನೆ ಪ್ರತಿದಿನ ಎಂಬಂತೆ ಘಾಟಿಯ ಒಂದನೇ ತಿರುವಿನಿಂದ ಒಂಬತ್ತನೇ ತಿರುವಿನ ತನಕವು ಸವಾರಿ ನಡೆಸುತ್ತಿದ್ದು, ರಸ್ತೆಯಲ್ಲಿ ನಿಂತು ಈಚಲ ಮರ ತಿನ್ನುವುದು ಕಂಡುಬಂದಿದೆ. ಅಲ್ಲದೆ ಹಲವು ಬಾರಿ ಹಗಲು ಹೊತ್ತಿನಲ್ಲೂ ಸಂಚಾರವನ್ನು ನಡೆಸಿ ಪ್ರಯಾಣಿಕರ ವಾಹನ ಸವಾರರರ ಭೀತಿಗೆ ಕಾರಣವಾಗಿದೆ. ಕೆಲವು ಪ್ರಯಾಣಿಕರು ಆನೆಯನ್ನು ಅಟ್ಟಲು ಯತ್ನಿಸುವುದು, ಕಲ್ಲೆಸೆಯುವುದು, ಬೊಬ್ಬೆ ಹಾಕುವುದು, ಇತ್ಯಾದಿ ಅನಗತ್ಯ ಚಟುವಟಿಕೆಗಳನ್ನು ಮಾಡುತ್ತಾ ಅಪಾಯವನ್ನು ಆಹ್ವಾನಿಸುವುದು ಕಂಡುಬರುತ್ತಿದೆ.

ನಿರಂತರವಾಗಿ ಕಾಡಾನೆ ಘಾಟಿ ರಸ್ತೆಯಲ್ಲಿ ಕಂಡು ಬರುವ ಕಾರಣ ಹಲವು ವಾಹನ ಸವಾರರು ಪ್ರಯಾಣಿಕರು ಈಗಲೂ ಭಯದಿಂದಲೇ ಸಾಗುತ್ತಿದ್ದಾರೆ..

Related posts

ಕಡಿರುದ್ಯಾವರ: ತೋಟಗಳಿಗೆ ನುಗ್ಗಿದ ಕಾಡಾನೆಗಳ ಹಿಂಡು: ಅಪಾರ ಕೃಷಿ ನಾಶ

Suddi Udaya

ಶುಭವಿವಾಹ ಪ್ರತಿಭಾ-ಸುಕೇಶ್

Suddi Udaya

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಟಾಬಂಧ ಬ್ರಹ್ಮಕಲಶೋತ್ಸವಕ್ಕೆ ಮಾಜಿ ಶಾಸಕರಾದ ಪ್ರಭಾಕರ ಬಂಗೇರ ಭೇಟಿ

Suddi Udaya

ಜೆಸಿಐ ಕೊಕ್ಕಡ ಕಪಿಲ ಘಟಕದ ವತಿಯಿಂದ ದಿವ್ಯಜ್ಯೋತಿ ಶಾಲಾ ವಿದ್ಯಾರ್ಥಿಗಳಿಗೆ ಪರೀಕ್ಷೆ ಎದುರಿಸುವ ಬಗ್ಗೆ ತರಬೇತಿ ಕಾರ್ಯಕ್ರಮ

Suddi Udaya

ಬೆಂಗಳೂರಿನ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದಿಂದ ಎಸ್‌ಡಿಎಂ ಪ್ರಕೃತಿ ಚಿಕಿತ್ಸಾ ಮತ್ತು ಯೋಗವಿಜ್ಞಾನ ಮಹಾವಿದ್ಯಾಲಯದ ಡೀನ್ ಗೀತಾ ಬಿ. ಶೆಟ್ಟಿಯವರಿಗೆ ಪಿಎಚ್.ಡಿ

Suddi Udaya

ಮುಳಿಯ ಜ್ಯುವೆಲ್ಸ್‌ನ ಡೈಮಂಡ್ ಫೆಸ್ಟ್‌ಗೆ ಗ್ರಾಹಕರಿಂದ ವ್ಯಾಪಕ ಬೆಂಬಲ; ಮನಮೆಚ್ಚಿದ ವಜ್ರಾಭರಣಗಳ ಖರೀದಿಗೆ ಸಾಲುಗಟ್ಟಿದ ಗ್ರಾಹಕರು

Suddi Udaya
error: Content is protected !!