July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಚಾರ್ಮಾಡಿ ಘಾಟಿ: ಅರಣ್ಯ ಇಲಾಖೆ ಗಸ್ತು

ಚಾರ್ಮಾಡಿ ಘಾಟಿ ರಸ್ತೆ ಪರಿಸರದಲ್ಲಿ ನಿರಂತರವಾಗಿ ಕಾಡಾನೆ ಕಂಡು ಬರುತ್ತಿರುವ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ವತಿಯಿಂದ ರಾತ್ರಿ ಗಸ್ತು ಆರಂಭವಾಗಿದೆ.

ಕಳೆದ ಕೆಲವು ದಿನಗಳಿಂದ ಕಾಡಾನೆ ಪ್ರತಿದಿನ ಎಂಬಂತೆ ಘಾಟಿಯ ಒಂದನೇ ತಿರುವಿನಿಂದ ಒಂಬತ್ತನೇ ತಿರುವಿನ ತನಕವು ಸವಾರಿ ನಡೆಸುತ್ತಿದ್ದು, ರಸ್ತೆಯಲ್ಲಿ ನಿಂತು ಈಚಲ ಮರ ತಿನ್ನುವುದು ಕಂಡುಬಂದಿದೆ. ಅಲ್ಲದೆ ಹಲವು ಬಾರಿ ಹಗಲು ಹೊತ್ತಿನಲ್ಲೂ ಸಂಚಾರವನ್ನು ನಡೆಸಿ ಪ್ರಯಾಣಿಕರ ವಾಹನ ಸವಾರರರ ಭೀತಿಗೆ ಕಾರಣವಾಗಿದೆ. ಕೆಲವು ಪ್ರಯಾಣಿಕರು ಆನೆಯನ್ನು ಅಟ್ಟಲು ಯತ್ನಿಸುವುದು, ಕಲ್ಲೆಸೆಯುವುದು, ಬೊಬ್ಬೆ ಹಾಕುವುದು, ಇತ್ಯಾದಿ ಅನಗತ್ಯ ಚಟುವಟಿಕೆಗಳನ್ನು ಮಾಡುತ್ತಾ ಅಪಾಯವನ್ನು ಆಹ್ವಾನಿಸುವುದು ಕಂಡುಬರುತ್ತಿದೆ.

ನಿರಂತರವಾಗಿ ಕಾಡಾನೆ ಘಾಟಿ ರಸ್ತೆಯಲ್ಲಿ ಕಂಡು ಬರುವ ಕಾರಣ ಹಲವು ವಾಹನ ಸವಾರರು ಪ್ರಯಾಣಿಕರು ಈಗಲೂ ಭಯದಿಂದಲೇ ಸಾಗುತ್ತಿದ್ದಾರೆ..

Related posts

ವಿಷ ಪದಾರ್ಥ ಸೇವಿಸಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

Suddi Udaya

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಹೊಸ ತಿರುವು: ಪ್ರಕರಣದ ತನಿಖೆಯ ವರದಿ ಸಲ್ಲಿಸುವಂತೆ ಸಿಬಿಐಗೆ ಸುಪ್ರೀಂ ಕೋರ್ಟ್ ಸೂಚನೆ

Suddi Udaya

ಮಳೆ ಹಾನಿಗೊಳಗಾದ ನೆರಿಯ, ಚಿಬಿದ್ರೆ ಗ್ರಾಮಗಳಿಗೆ ಶಾಸಕ ಹರೀಶ್ ಪೂಂಜ ಭೇಟಿ: ಪರಿಹಾರಕ್ಕಾಗಿ ಸರಕಾರಕ್ಕೆ ಒತ್ತಾಯಿಸುವ ಭರವಸೆ

Suddi Udaya

ಉಜಿರೆ ಪಾಲಿಟೆಕ್ನಿಕ್ ಕಾಲೇಜಿನ ವಿದ್ಯಾರ್ಥಿಗಳಿಂದ ಮಂಗಳೂರು ಬಂದರಿಗೆ ಭೇಟಿ

Suddi Udaya

ಸಮರ್ಪಿತ ಸೇವೆಗೆ ಗೌರವದ ಬೀಳ್ಕೊಡುಗೆ – ಸಿಬ್ಬಂದಿ ಧನ್ಯ ಅವರಿಗೆ ಸೋಜಾ ಎಲೆಕ್ಟ್ರಾನಿಕ್ಸ್‌ನಿಂದ ಸನ್ಮಾನ

Suddi Udaya

ನಾವರ ಶ್ರೀ ಮಹಾಲಿಂಗೇಶ್ವರ ದೇಗುಲದ ಬ್ರಹ್ಮಕಲಶೋತ್ಸವ ಚಪ್ಪರ ಮುಹೂರ್ತ

Suddi Udaya
error: Content is protected !!