23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಾಲಾಡಿ: ಬೆನ್ನುನೋವಿನ ಸಮಸ್ಯೆಯಿಂದ ಮನನೊಂದು ವ್ಯಕ್ತಿ ನೇಣುಬಿಗಿದು ಆತ್ಮಹತ್ಯೆ

ಮಾಲಾಡಿ: ಇಲ್ಲಿಯ ಕೊಲ್ಪೆದಬೈಲ್ ಅತಿ೯ಲ‌ ನಿವಾಸಿ ವಲೇರಿಯನ್ ಡಿಸೋಜಾ(78ವ) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೇ 15 ರಂದು ವರದಿಯಾಗಿದೆ.


ಈ ಬಗ್ಗೆ ರೀಟಾ ಲೋಬೋ ಪೊಲೀಸರಿಗೆ ದೂರು ನೀಡಿ, ತನ್ನ ಗಂಡ ವಲೇರಿಯನ್ ಡಿಸೋಜಾ ಇತ್ತಿಚೀಗೆ ಗ್ಯಾಸ್ಟ್ರಿಕ್ ಮೂಲವ್ಯಾಧಿ, ಹಾಗೂ ವಿಪರೀತ ಬೆನ್ನುನೋವಿನ ಸಮಸ್ಯೆಯಿಂದ ಬಳಲುತ್ತಿದ್ದು, ಅದಕ್ಕೆ ಚಿಕಿತ್ಸೆಯನ್ನು ಪಡೆಯುತ್ತಿದ್ದರು. ಮೇ 14 ರಂದು ತನ್ನ ಮಗ, ಮಕ್ಕಳೊಂದಿಗೆ ಆತನ ಹೆಂಡತಿಯ ಅಕ್ಕನ ಮನೆಗೆ ಹೋಗಿ ಬರುವುದಾಗಿ ತಿಳಿಸಿ ಹೋಗಿರುತ್ತಾರೆ. ಮನೆಯಲ್ಲಿ ನಾನು ಹಾಗೂ ಗಂಡ ವಲೇರಿಯನ್ ಡಿಸೋಜಾ ಮಾತ್ರ ಇದ್ದೆವು. ಮೇ 15 ರಂದು ಬೆಳಿಗ್ಗೆ 6 ಗಂಟೆಗೆ ನಾನು ಮಡಂತ್ಯಾರು ಚರ್ಚ್ ಗೆ ಹೋಗಿ ಬೆಳಿಗ್ಗೆ 7:30ಕ್ಕೆ ಮನೆಗೆ ವಾಪಾಸು ಬಂದು ಗಂಡನನ್ನು ಕರೆದಾಗ ಪ್ರತ್ಯುತ್ತರ ಇಲ್ಲದುದರಿಂದ ಮನೆಯ ಒಳಗಡೆ ಹೊರಗಡೆ ಹುಡುಕಿದಾಗ ಗಂಡ ವಲೇರಿಯನ್ ಡಿಸೋಜಾ ರವರು ಮನೆಯ ಹಿಂಬದಿಯಲ್ಲಿ ಇರುವ 2 ಕಿಟಕಿಯ ಸನ್ ಡ್ಯಾಪ್ ನ ಮದ್ಯೆ ಇಟ್ಟಿದ್ದ ಮರದ ಪಕ್ಕಾಸಿ ಮದ್ಯಭಾಗಕ್ಕೆ ನೈಲಾನ್ ಹಗ್ಗವನ್ನು ಬಿಗಿದು ಕುತ್ತಿಗೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡು ಬಂದಿದೆ.

ಇತ್ತಿಚೇಗೆ ಗ್ಯಾಸ್ಟ್ರಿಕ್ ಮೂಲವ್ಯಾಧಿ, ಹಾಗೂ ವಿಪರೀತ ಬೆನ್ನುನೋವಿನ ಸಮಸ್ಯೆಯಿಂದ ಬಳಲುತ್ತಿದ್ದು ಇದೇ ಕಾರಣಕ್ಕೆ ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ನೀಡಿದ ದೂರಿನಂತೆ ಪುಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ಭಜನಾ ಮಂಡಳಿ ಭಜನಾ ಸಪ್ತಾಹದ ಧಾರ್ಮಿಕ ಸಭೆ

Suddi Udaya

ಸೆ.22-ಅ.1: ಶ್ರೀ ಕ್ಷೇತ್ರ ಮೊಂಟೆತಡ್ಕ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ

Suddi Udaya

ಮಂಗಳೂರು, ಜೆಡಿಎಸ್ ಮಹಿಳಾ ಘಟಕದ ಮಾಜಿ ಜಿಲ್ಲಾಧ್ಯಕ್ಷೆಯಾಗಿದ್ದ ಅಳದಂಗಡಿಯ ಸುಮತಿ ಹೆಗ್ಡೆ ಎಸ್.ಡಿ.ಪಿ.ಐ ಗೆ ಸೇರ್ಪಡೆ

Suddi Udaya

ಕಾಶಿಪಟ್ಣ: ಸರಕಾರಿ ಪ್ರೌಢಶಾಲೆಯಲ್ಲಿ ಗಣರಾಜ್ಯೋತ್ಸವ ದಿನಾಚರಣೆ

Suddi Udaya

ರೆಖ್ಯ: ಕೆ ಎಸ್ ಆರ್ ಟಿ ಸಿ ಬಸ್ ಹಾಗೂ ಕಾರು ನಡುವೆ ಅಪಘಾತ

Suddi Udaya

ಗೇರುಕಟ್ಟೆ: ಕಾರು ಹಾಗೂ ಬೈಕ್ ಡಿಕ್ಕಿ: ಬೈಕ್ ಸವಾರನಿಗೆ ಗಂಭೀರ ಗಾಯ

Suddi Udaya
error: Content is protected !!