27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಚಾರ್ಮಾಡಿ ಘಾಟಿ: ಅರಣ್ಯ ಇಲಾಖೆ ಗಸ್ತು

ಚಾರ್ಮಾಡಿ ಘಾಟಿ ರಸ್ತೆ ಪರಿಸರದಲ್ಲಿ ನಿರಂತರವಾಗಿ ಕಾಡಾನೆ ಕಂಡು ಬರುತ್ತಿರುವ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ವತಿಯಿಂದ ರಾತ್ರಿ ಗಸ್ತು ಆರಂಭವಾಗಿದೆ.

ಕಳೆದ ಕೆಲವು ದಿನಗಳಿಂದ ಕಾಡಾನೆ ಪ್ರತಿದಿನ ಎಂಬಂತೆ ಘಾಟಿಯ ಒಂದನೇ ತಿರುವಿನಿಂದ ಒಂಬತ್ತನೇ ತಿರುವಿನ ತನಕವು ಸವಾರಿ ನಡೆಸುತ್ತಿದ್ದು, ರಸ್ತೆಯಲ್ಲಿ ನಿಂತು ಈಚಲ ಮರ ತಿನ್ನುವುದು ಕಂಡುಬಂದಿದೆ. ಅಲ್ಲದೆ ಹಲವು ಬಾರಿ ಹಗಲು ಹೊತ್ತಿನಲ್ಲೂ ಸಂಚಾರವನ್ನು ನಡೆಸಿ ಪ್ರಯಾಣಿಕರ ವಾಹನ ಸವಾರರರ ಭೀತಿಗೆ ಕಾರಣವಾಗಿದೆ. ಕೆಲವು ಪ್ರಯಾಣಿಕರು ಆನೆಯನ್ನು ಅಟ್ಟಲು ಯತ್ನಿಸುವುದು, ಕಲ್ಲೆಸೆಯುವುದು, ಬೊಬ್ಬೆ ಹಾಕುವುದು, ಇತ್ಯಾದಿ ಅನಗತ್ಯ ಚಟುವಟಿಕೆಗಳನ್ನು ಮಾಡುತ್ತಾ ಅಪಾಯವನ್ನು ಆಹ್ವಾನಿಸುವುದು ಕಂಡುಬರುತ್ತಿದೆ.

ನಿರಂತರವಾಗಿ ಕಾಡಾನೆ ಘಾಟಿ ರಸ್ತೆಯಲ್ಲಿ ಕಂಡು ಬರುವ ಕಾರಣ ಹಲವು ವಾಹನ ಸವಾರರು ಪ್ರಯಾಣಿಕರು ಈಗಲೂ ಭಯದಿಂದಲೇ ಸಾಗುತ್ತಿದ್ದಾರೆ..

Related posts

ಉಜಿರೆಯಲ್ಲಿ ಕೇರಳ ಸಂಪ್ರದಾಯ ವಿಷು ಕಣಿ ಉತ್ಸವ, ಸಾವಿರಾರು ಮಂದಿ ಭಾಗಿ

Suddi Udaya

ಗೇರುಕಟ್ಟೆ ಆಟೋ ಚಾಲಕರ ಸಂಘದ ವತಿಯಿಂದ ಶಿವರಾಮ ಪೂಜಾರಿ ರವರಿಗೆ ಧನಸಹಾಯ

Suddi Udaya

ಮಚ್ಚಿನ ಗ್ರಾ.ಪಂ. ಅಧ್ಯಕ್ಷರಾಗಿ ರುಕ್ಮಿಣಿ, ಉಪಾಧ್ಯಕ್ಷರಾಗಿ ಸೋಮಾವತಿ ಆಯ್ಕೆ

Suddi Udaya

ಸುಳ್ಳು ಆರೋಪ ಹೊರಿಸಿ, ಕ್ಷೇತ್ರದ ಮಾನಹಾನಿ ಮಾಡುವ ಸ್ಥಾಪಿತ ಹಿತಾಸಕ್ತಿಗಳ ವಿರುದ್ಧ ಅಗತ್ಯ ಕಾನೂನು ಕ್ರಮಕ್ಕೆ ಒತ್ತಾಯಿಸಿ ಮಾ.27 ರಂದು ಧರ್ಮಸ್ಥಳದಲ್ಲಿ ಒಂದು ದಿನದ ಹರತಾಳ ಮತ್ತು ಪ್ರತಿಭಟನಾ ಸಭೆ

Suddi Udaya

ಮುಳಿಕ್ಕಾರುನಲ್ಲಿ ದೈವ ವ್ಯಾಘ್ರ ಚಾಮುಂಡಿ, ಪರಿವಾರ ದೈವಗಳ ನೇಮೋತ್ಸವ

Suddi Udaya

ವಿದ್ಯುತ್ ತಂತಿಗೆ ತಾಗಿದ ಕಾಂಕ್ರೀಟ್ ಮಿಕ್ಸಿಂಗ್ ಲಾರಿ : ರಸ್ತೆಗೆ ಉರುಳಿದ ಎರಡು ವಿದ್ಯುತ್ ಕಂಬ

Suddi Udaya
error: Content is protected !!