July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಚಾರ್ಮಾಡಿ ಘಾಟಿ: ಅರಣ್ಯ ಇಲಾಖೆ ಗಸ್ತು

ಚಾರ್ಮಾಡಿ ಘಾಟಿ ರಸ್ತೆ ಪರಿಸರದಲ್ಲಿ ನಿರಂತರವಾಗಿ ಕಾಡಾನೆ ಕಂಡು ಬರುತ್ತಿರುವ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ವತಿಯಿಂದ ರಾತ್ರಿ ಗಸ್ತು ಆರಂಭವಾಗಿದೆ.

ಕಳೆದ ಕೆಲವು ದಿನಗಳಿಂದ ಕಾಡಾನೆ ಪ್ರತಿದಿನ ಎಂಬಂತೆ ಘಾಟಿಯ ಒಂದನೇ ತಿರುವಿನಿಂದ ಒಂಬತ್ತನೇ ತಿರುವಿನ ತನಕವು ಸವಾರಿ ನಡೆಸುತ್ತಿದ್ದು, ರಸ್ತೆಯಲ್ಲಿ ನಿಂತು ಈಚಲ ಮರ ತಿನ್ನುವುದು ಕಂಡುಬಂದಿದೆ. ಅಲ್ಲದೆ ಹಲವು ಬಾರಿ ಹಗಲು ಹೊತ್ತಿನಲ್ಲೂ ಸಂಚಾರವನ್ನು ನಡೆಸಿ ಪ್ರಯಾಣಿಕರ ವಾಹನ ಸವಾರರರ ಭೀತಿಗೆ ಕಾರಣವಾಗಿದೆ. ಕೆಲವು ಪ್ರಯಾಣಿಕರು ಆನೆಯನ್ನು ಅಟ್ಟಲು ಯತ್ನಿಸುವುದು, ಕಲ್ಲೆಸೆಯುವುದು, ಬೊಬ್ಬೆ ಹಾಕುವುದು, ಇತ್ಯಾದಿ ಅನಗತ್ಯ ಚಟುವಟಿಕೆಗಳನ್ನು ಮಾಡುತ್ತಾ ಅಪಾಯವನ್ನು ಆಹ್ವಾನಿಸುವುದು ಕಂಡುಬರುತ್ತಿದೆ.

ನಿರಂತರವಾಗಿ ಕಾಡಾನೆ ಘಾಟಿ ರಸ್ತೆಯಲ್ಲಿ ಕಂಡು ಬರುವ ಕಾರಣ ಹಲವು ವಾಹನ ಸವಾರರು ಪ್ರಯಾಣಿಕರು ಈಗಲೂ ಭಯದಿಂದಲೇ ಸಾಗುತ್ತಿದ್ದಾರೆ..

Related posts

ಮಚ್ಚಿನ: ನೆತ್ತರ ಸ. ಕಿ. ಪ್ರಾ. ಶಾಲೆಯಲ್ಲಿ ಯಕ್ಷಗಾನ ನಾಟ್ಯ ತರಬೇತಿ ಶಿಬಿರ ಉದ್ಘಾಟನೆ

Suddi Udaya

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಬೆಳಾಲು ಎಸ್.ಡಿ.ಎಂ. ಅ. ಪ್ರೌಢಶಾಲೆಗೆ ಶೇ. 93.54 ಫಲಿತಾಂಶ

Suddi Udaya

ಕಾಶಿಪಟ್ಣ: ಕಲಾ ಪೋಷಕ ಕಿಶೋರ್ ರಾವ್ ನಿಧನ

Suddi Udaya

ಬೆಳ್ತಂಗಡಿ ಸಂಜಯ್ ಗ್ಲೋಬಲ್ ಫೌಂಡೇಶನ್ ವಾರ್ಷಿಕ ಸಭೆ: ನೂತನ ಸಮಿತಿ ರಚನೆ

Suddi Udaya

ನಾರಾವಿ ಗ್ರಾ.ಪಂ. ನಲ್ಲಿ ಪಿಎಂ ಜನ್ ಮನ್ ಕಾರ್ಯಕ್ರಮ

Suddi Udaya

ಪೆರಾಲ್ದರಕಟ್ಟೆ ಬದ್ರೀಯಾ ಜುಮಾ ಮಸೀದಿ ನೂತನ ಜಮಾತ್ ಕಮಿಟಿ ರಚನೆ: ನವಾಝ್ ಶರೀಫ್ ಕಟ್ಟೆ 3 ನೇ ಬಾರಿಗೆ ಅಧ್ಯಕ್ಷರಾಗಿ ಪುನರಾಯ್ಕೆ

Suddi Udaya
error: Content is protected !!