25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೀಡಿ ಬ್ರಾಂಚ್ ನ ಕಟ್ಟಡದ ಅಡ್ಡಕ್ಕೆ ವ್ಯಕ್ತಿ ನೇಣು ಹಾಕಿಕೊಂಡು ಆತ್ಮಹತ್ಯೆ

ಬೆಳ್ತಂಗಡಿ: ವ್ಯಕ್ತಿಯೊಬ್ಬರು ಯಾವುದೋ ವೈಯುಕ್ತಿಕ ಕಾರಣಕ್ಕೆ ಕುತ್ತಿಗೆಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ವೇಣೂರು ಠಾಣಾ ವ್ಯಾಪ್ತಿಯ ಕುರ್ಲೊಟ್ಟು ಎಂಬಲ್ಲಿ ನಡೆದಿದೆ.
ಹೊಸಂಗಡಿ ಗ್ರಾಮದ ಕುರ್ಲೊಟ್ಟು ಸುದೆಕಾರ್ ಮನೆ ನಿವಾಸಿ ಅಬೂಬಕ್ಕರ್ (54ವ) ಆತ್ಮಹತ್ಯೆ ಮಾಡಿಕೊಂಡವರು.

ಈ ಸಂಬಂಧ ಮೃತರ ಪತ್ನಿ ಹಾಜಿರಾ ವೇಣೂರು ಪೊಲೀಸರಿಗೆ ದೂರು ನೀಡಿ, ಮೇ.16 ರಂದು ಮಧ್ಯಾಹ್ನ 12.30 ರಿಂದ 4 ಗಂಟೆಯ ಮಧ್ಯೆ ಅವಧಿಯಲ್ಲಿ ಹೊಸಂಗಡಿ ಗ್ರಾಮದ ಕುರ್ಲೊಟ್ಟು ಎಂಬಲ್ಲಿ ತನ್ನ ಯಾವುದೋ ವೈಯಕ್ತಿಕ ಕಾರಣದಿಂದ ಮನನೊಂದು ಜೀವನದಲ್ಲಿ ಜಿಗುಪ್ಸೆ ಹೊಂದಿ ಬೀಡಿ ಬ್ರಾಂಚ್‌ ಕಟ್ಟಡದ ಮಾಡಿನ ಅಡ್ಡಕ್ಕೆ ನೈಲಾನ್‌ ಹಗ್ಗವನ್ನು ಕಟ್ಟಿ ಕುತ್ತಿಗೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಮೃತರ ಮರಣದಲ್ಲಿ ಬೇರೆ ಯಾವುದೇ ಸಂಶಯ ಇರುವುದಿಲ್ಲ ಎಂದು ನೀಡಿದ ದೂರಿನಂತೆ ವೇಣೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Related posts

ಧರ್ಮಸ್ಥಳ ಮಹಾಶಕ್ತಿ ಕೇಂದ್ರದ ಕಳೆoಜ ಶಕ್ತಿಕೇಂದ್ರದಲ್ಲಿ ನಮೋ ಯುವಚೌಪಲ್

Suddi Udaya

ಮೇಲಂತಬೆಟ್ಟು ನಿಸರ್ಗ ಸಂಜೀವಿನಿ ಸ್ವಸಹಾಯ ಗುಂಪಿನ ಸದಸ್ಯೆ ಲಕ್ಷ್ಮಿ ಸೇರಿದಂತೆ ದ.ಕ. ಜಿಲ್ಲೆಯಿಂದ ನಾಲ್ವರು ಕೊರಗ ಸಮುದಾಯದ ಮಹಿಳೆಯರಿಗೆ ರಾಷ್ಟ್ರಪತಿ ಭೇಟಿಗೆ ಅವಕಾಶ

Suddi Udaya

ಬೆಳ್ತಂಗಡಿ: ಈದ್ ಮಿಲಾದ್ ಪ್ರಯುಕ್ತ ಖಿಲರ್ ಜುಮ್ಮಾ ಮಸೀದಿಯಲ್ಲಿ ಧಾರ್ಮಿಕ ಕಾರ್ಯಕ್ರಮ

Suddi Udaya

ಸಹಕಾರಿ ಸಪ್ತಾಹದಲ್ಲಿ ಕೃಷಿ ಕ್ಷೇತ್ರದ ಸಾಧಕರಾದ ಪೆರಾಡಿ ಸೊಸೈಟಿ ಸದಸ್ಯರಿಗೆ ಸನ್ಮಾನ

Suddi Udaya

ಬಿಜೆಪಿ ಚಾರ್ಮಾಡಿ ಶಕ್ತಿಕೇಂದ್ರದ ಬೂತ್ ಮಟ್ಟದ ಯುವ ಮೋರ್ಚಾ ಸಂಚಾಲಕರ ಆಯ್ಕೆ

Suddi Udaya

ಬೆಳ್ತಂಗಡಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಜಿಲ್ಲಾ ಮಟ್ಟದ ದೇಸಿ ತಳಿಗಳ ಸಂರಕ್ಷಣೆ ಮತ್ತು ಉತ್ತೇಜನ ಕಾರ್ಯಾಗಾರ

Suddi Udaya
error: Content is protected !!