ಬೀಡಿ ಬ್ರಾಂಚ್ ನ ಕಟ್ಟಡದ ಅಡ್ಡಕ್ಕೆ ವ್ಯಕ್ತಿ ನೇಣು ಹಾಕಿಕೊಂಡು ಆತ್ಮಹತ್ಯೆ

Suddi Udaya

ಬೆಳ್ತಂಗಡಿ: ವ್ಯಕ್ತಿಯೊಬ್ಬರು ಯಾವುದೋ ವೈಯುಕ್ತಿಕ ಕಾರಣಕ್ಕೆ ಕುತ್ತಿಗೆಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ವೇಣೂರು ಠಾಣಾ ವ್ಯಾಪ್ತಿಯ ಕುರ್ಲೊಟ್ಟು ಎಂಬಲ್ಲಿ ನಡೆದಿದೆ.
ಹೊಸಂಗಡಿ ಗ್ರಾಮದ ಕುರ್ಲೊಟ್ಟು ಸುದೆಕಾರ್ ಮನೆ ನಿವಾಸಿ ಅಬೂಬಕ್ಕರ್ (54ವ) ಆತ್ಮಹತ್ಯೆ ಮಾಡಿಕೊಂಡವರು.

ಈ ಸಂಬಂಧ ಮೃತರ ಪತ್ನಿ ಹಾಜಿರಾ ವೇಣೂರು ಪೊಲೀಸರಿಗೆ ದೂರು ನೀಡಿ, ಮೇ.16 ರಂದು ಮಧ್ಯಾಹ್ನ 12.30 ರಿಂದ 4 ಗಂಟೆಯ ಮಧ್ಯೆ ಅವಧಿಯಲ್ಲಿ ಹೊಸಂಗಡಿ ಗ್ರಾಮದ ಕುರ್ಲೊಟ್ಟು ಎಂಬಲ್ಲಿ ತನ್ನ ಯಾವುದೋ ವೈಯಕ್ತಿಕ ಕಾರಣದಿಂದ ಮನನೊಂದು ಜೀವನದಲ್ಲಿ ಜಿಗುಪ್ಸೆ ಹೊಂದಿ ಬೀಡಿ ಬ್ರಾಂಚ್‌ ಕಟ್ಟಡದ ಮಾಡಿನ ಅಡ್ಡಕ್ಕೆ ನೈಲಾನ್‌ ಹಗ್ಗವನ್ನು ಕಟ್ಟಿ ಕುತ್ತಿಗೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಮೃತರ ಮರಣದಲ್ಲಿ ಬೇರೆ ಯಾವುದೇ ಸಂಶಯ ಇರುವುದಿಲ್ಲ ಎಂದು ನೀಡಿದ ದೂರಿನಂತೆ ವೇಣೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Comment

error: Content is protected !!