30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಯಾತ್ರಾರ್ಥಿಯಾಗಿ ಬಂದಿದ್ದ ಮಹಿಳೆಯ ಬ್ಯಾಗಿನಲ್ಲಿದ್ದ ಪರ್ಸಿನಿಂದ ರೂ 2.16ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ರೂ. 5 ಸಾವಿರ ನಗದು ಕಳವು

ಬೆಳ್ತಂಗಡಿ: ಯಾತ್ರಾರ್ಥಿ ಮಹಿಳೆಯ ಬ್ಯಾಗಿನಿಂದ ಎರಡು ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಹಾಗೂ ನಗದು ಕಳವಾದ ಘಟನೆ ಸಂಭವಿಸಿದ್ದು ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಯಾತ್ರಾರ್ಥಿಯಾಗಿ ಬಂದಿದ್ದ ಅಂತುಬಾಯಮ್ಮ ಎಂಬವರೇ ಚಿನ್ನಾಭರಣ ನಗದು ಕಳೆದುಕೊಂಡವರಾಗಿದ್ದಾರೆ. ಇವರು ಮೇ 15 ರಂದು ಬೆಳಗ್ಗೆ ಧರ್ಮಸ್ಥಳದಲ್ಲಿ ದೇವರ ದರ್ಶನ ಮುಗಿಸಿ ಸೌತಡ್ಕ ದೇವಸ್ಥಾನಕ್ಕೆ ಹೋಗಿದ್ದಾರೆ. ಧರ್ಮಸ್ಥಳ ದಿಂದ ಹೊರಡುವ ವೇಳೆ ಅವರ ಬ್ಯಾಗಿನಲ್ಲಿ ಇಟ್ಟಿದ್ದ ಪರ್ಸಿನಲ್ಲಿ ಚಿನ್ನಾಭರಣ ಹಾಗೂ ನಗದು ಇತ್ತು. ಸೌತಡ್ಕ ದೇವಸ್ಥಾನ ತಲುಪಿ ಅಂಗಡಿಯಲ್ಲಿ ಹಣಕೊಡಲು ಪರ್ಸ್ ಹುಡುಕಿದಾಗ ಪರ್ಸ್ ನಾಪತ್ತೆಯಾಗಿತ್ತು.‌ಪರ್ಸಿನಲ್ಲಿ ಇದ್ದ 2,16,000 ಮೌಲ್ಯದ ಚಿನ್ನಾಭರಣ ಹಾಗೂ 5 ಸಾವಿರ ನಗದನ್ನು ಯಾರೋ ಕಳ್ಳರು ಕಳವು ಮಾಡಿಕೊಂಡು ಹೋಗಿರುವುದಾಗಿ ಅವರು ಧರ್ಮಸ್ಥಳ ಪೊಲೀಸರಿಗೆ ದೂರು ನೀಡಿದ್ದಾರೆ. ಧರ್ಮಸ್ಥಳ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Related posts

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಂದಿ ಬಳಿ ಇರುವ ಕಾಣಿಕೆ ಡಬ್ಬಿ ಒಡೆದು ಹಣ ಕಳವು

Suddi Udaya

ಸೌಜನ್ಯ ಕೊಲೆ ಪ್ರಕರಣ ಮರು ತನಿಖೆ ನಡೆಸುವಂತೆ: ರೆಖ್ಯ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಗ್ರಾಮ ಸಮಿತಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಮನವಿ

Suddi Udaya

ಉಜಿರೆ ಶ್ರೀ ಧ.ಮಂ. ಪದವಿಪೂರ್ವ ಕಾಲೇಜಿನಲ್ಲಿ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ

Suddi Udaya

ಮಾ.1: ಗ್ರಾ.ಪಂ. ನೌಕರರ ವಿವಿಧ ಬೇಡಿಕೆ ಈಡೇರಿಕೆಗೆ ಕೈಗೆ ಕಪ್ಪು ಪಟ್ಟಿ ಧರಿಸಿ ವಿಭಿನ್ನ ಪ್ರತಿಭಟನೆ

Suddi Udaya

ಓಡಿಲ್ನಾಳ: ಶಕ್ತಿ ಯುವಕ ಮಂಡಲ ರೇಷ್ಮೆ ರೋಡ್ ಇದರ ವಾರ್ಷಿಕ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ ಎಸ್ ಡಿ ಎಮ್ ಶಾಲಾ ವಿದ್ಯಾರ್ಥಿಗಳು ಎಲ್ ಐ ಸಿ 67ನೇ ಸಪ್ತಹದಲ್ಲಿ ಹಲವಾರು ಪ್ರಶಸ್ತಿಗಳು

Suddi Udaya
error: Content is protected !!