April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಯಾತ್ರಾರ್ಥಿಯಾಗಿ ಬಂದಿದ್ದ ಮಹಿಳೆಯ ಬ್ಯಾಗಿನಲ್ಲಿದ್ದ ಪರ್ಸಿನಿಂದ ರೂ 2.16ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ರೂ. 5 ಸಾವಿರ ನಗದು ಕಳವು

ಬೆಳ್ತಂಗಡಿ: ಯಾತ್ರಾರ್ಥಿ ಮಹಿಳೆಯ ಬ್ಯಾಗಿನಿಂದ ಎರಡು ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಹಾಗೂ ನಗದು ಕಳವಾದ ಘಟನೆ ಸಂಭವಿಸಿದ್ದು ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಯಾತ್ರಾರ್ಥಿಯಾಗಿ ಬಂದಿದ್ದ ಅಂತುಬಾಯಮ್ಮ ಎಂಬವರೇ ಚಿನ್ನಾಭರಣ ನಗದು ಕಳೆದುಕೊಂಡವರಾಗಿದ್ದಾರೆ. ಇವರು ಮೇ 15 ರಂದು ಬೆಳಗ್ಗೆ ಧರ್ಮಸ್ಥಳದಲ್ಲಿ ದೇವರ ದರ್ಶನ ಮುಗಿಸಿ ಸೌತಡ್ಕ ದೇವಸ್ಥಾನಕ್ಕೆ ಹೋಗಿದ್ದಾರೆ. ಧರ್ಮಸ್ಥಳ ದಿಂದ ಹೊರಡುವ ವೇಳೆ ಅವರ ಬ್ಯಾಗಿನಲ್ಲಿ ಇಟ್ಟಿದ್ದ ಪರ್ಸಿನಲ್ಲಿ ಚಿನ್ನಾಭರಣ ಹಾಗೂ ನಗದು ಇತ್ತು. ಸೌತಡ್ಕ ದೇವಸ್ಥಾನ ತಲುಪಿ ಅಂಗಡಿಯಲ್ಲಿ ಹಣಕೊಡಲು ಪರ್ಸ್ ಹುಡುಕಿದಾಗ ಪರ್ಸ್ ನಾಪತ್ತೆಯಾಗಿತ್ತು.‌ಪರ್ಸಿನಲ್ಲಿ ಇದ್ದ 2,16,000 ಮೌಲ್ಯದ ಚಿನ್ನಾಭರಣ ಹಾಗೂ 5 ಸಾವಿರ ನಗದನ್ನು ಯಾರೋ ಕಳ್ಳರು ಕಳವು ಮಾಡಿಕೊಂಡು ಹೋಗಿರುವುದಾಗಿ ಅವರು ಧರ್ಮಸ್ಥಳ ಪೊಲೀಸರಿಗೆ ದೂರು ನೀಡಿದ್ದಾರೆ. ಧರ್ಮಸ್ಥಳ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Related posts

ಬಳಂಜ ಶ್ರೀ ಧರ್ಮರಸು ದೈವ ಕೊಡಮಣಿತ್ತಾಯ ಮತ್ತು ಪರಿವಾರ ಶಕ್ತಿಗಳ ಕ್ಷೇತ್ರ ಬೊಂಟ್ರೋಟ್ಟುಗುತ್ತು ಬಳಂಜ ಡಿ.28-31 ಮಹಾಚಂಡಿಕಾಯಾಗ,ದೈವಗಳ ಪ್ರತಿಷ್ಠಾ ಕಲಶಾಭಿಷೇಕ, ನೇಮೋತ್ಸವ ಕಾರ್ಯಕ್ರಮಗಳ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವಾರ್ಷಿಕ ಮಹಾಸಭೆ

Suddi Udaya

ಉಜಿರೆ: ಶ್ರೀ.ಧ.ಮಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲಾ ವಾರ್ಷಿಕೋತ್ಸವ

Suddi Udaya

ಉಜಿರೆ ಶ್ರೀ ಧ.ಮಂ. ಪಾಲಿಟೆಕ್ನಿಕ್ ವತಿಯಿಂದ ಅಂತರ್ ಜಿಲ್ಲಾ ಪುರುಷರ ವಾಲಿಬಾಲ್ ಪಂದ್ಯಾಟದ ಸಮಾರೋಪ ಸಮಾರಂಭ

Suddi Udaya

ಶಿಬಾಜೆ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಕಳೆಂಜ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಸೇರ್ಪಡೆ

Suddi Udaya
error: Content is protected !!