25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಯಾತ್ರಾರ್ಥಿಯಾಗಿ ಬಂದಿದ್ದ ಮಹಿಳೆಯ ಬ್ಯಾಗಿನಲ್ಲಿದ್ದ ಪರ್ಸಿನಿಂದ ರೂ 2.16ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ರೂ. 5 ಸಾವಿರ ನಗದು ಕಳವು

ಬೆಳ್ತಂಗಡಿ: ಯಾತ್ರಾರ್ಥಿ ಮಹಿಳೆಯ ಬ್ಯಾಗಿನಿಂದ ಎರಡು ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಹಾಗೂ ನಗದು ಕಳವಾದ ಘಟನೆ ಸಂಭವಿಸಿದ್ದು ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಯಾತ್ರಾರ್ಥಿಯಾಗಿ ಬಂದಿದ್ದ ಅಂತುಬಾಯಮ್ಮ ಎಂಬವರೇ ಚಿನ್ನಾಭರಣ ನಗದು ಕಳೆದುಕೊಂಡವರಾಗಿದ್ದಾರೆ. ಇವರು ಮೇ 15 ರಂದು ಬೆಳಗ್ಗೆ ಧರ್ಮಸ್ಥಳದಲ್ಲಿ ದೇವರ ದರ್ಶನ ಮುಗಿಸಿ ಸೌತಡ್ಕ ದೇವಸ್ಥಾನಕ್ಕೆ ಹೋಗಿದ್ದಾರೆ. ಧರ್ಮಸ್ಥಳ ದಿಂದ ಹೊರಡುವ ವೇಳೆ ಅವರ ಬ್ಯಾಗಿನಲ್ಲಿ ಇಟ್ಟಿದ್ದ ಪರ್ಸಿನಲ್ಲಿ ಚಿನ್ನಾಭರಣ ಹಾಗೂ ನಗದು ಇತ್ತು. ಸೌತಡ್ಕ ದೇವಸ್ಥಾನ ತಲುಪಿ ಅಂಗಡಿಯಲ್ಲಿ ಹಣಕೊಡಲು ಪರ್ಸ್ ಹುಡುಕಿದಾಗ ಪರ್ಸ್ ನಾಪತ್ತೆಯಾಗಿತ್ತು.‌ಪರ್ಸಿನಲ್ಲಿ ಇದ್ದ 2,16,000 ಮೌಲ್ಯದ ಚಿನ್ನಾಭರಣ ಹಾಗೂ 5 ಸಾವಿರ ನಗದನ್ನು ಯಾರೋ ಕಳ್ಳರು ಕಳವು ಮಾಡಿಕೊಂಡು ಹೋಗಿರುವುದಾಗಿ ಅವರು ಧರ್ಮಸ್ಥಳ ಪೊಲೀಸರಿಗೆ ದೂರು ನೀಡಿದ್ದಾರೆ. ಧರ್ಮಸ್ಥಳ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Related posts

ದ.ಕ ಟೆಲಿಕಾಂ ಸಲಹಾ ಸಮಿತಿ ಸದಸ್ಯರಾಗಿ ಕೊರಗಪ್ಪ ನಾಯ್ಕ ಮುಂಡಾಜೆ ನೇಮಕ

Suddi Udaya

ಬೆಳ್ತಂಗಡಿ ಕೋಟಿ- ಚೆನ್ನಯ ಕ್ರೀಡಾಕೂಟ : ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಕುಕ್ಕೇಡಿ ನಿಟ್ಟಡೆ ಸಮಗ್ರ ಚಾಂಪಿಯನ್

Suddi Udaya

ಸೂಳಬೆಟ್ಟು ಬರಾಯ ಶ್ರೀಗೋಪಾಲಕೃಷ್ಣ ದೇವರ ಬ್ರಹ್ಮಕಲಶೋತ್ಸವದ ಯಶಸ್ಸಿಗಾಗಿ ಪೂರ್ವಭಾವಿ ಪ್ರಾರ್ಥನೆ

Suddi Udaya

ಸುಲ್ಕೇರಿಯಲ್ಲಿ ಭಗವಾನ್ 1008 ಶ್ರೀ ನೇಮಿನಾಥ ಸ್ವಾಮಿ ಬಸದಿ ಧಾಮ ಸಂಪ್ರೋಕ್ಷಣ ಮಹೋತ್ಸವ

Suddi Udaya

ಭೀಕರ ಗಾಳಿ ಮಳೆ : ಹೊಸಂಗಡಿಯಲ್ಲಿ ಮನೆಗೆ ತೆಂಗಿನ ಮರ ಬಿದ್ದು ಹಾನಿ

Suddi Udaya

ಉಜಿರೆ: ಎಸ್ ಡಿ ಎಂ ಕಾಲೇಜಿನಲ್ಲಿ ದೈಹಿಕ ಶಿಕ್ಷಣ ವಿಭಾಗದ ವತಿಯಿಂದ ರಾಷ್ಟ್ರೀಯ ಕ್ರೀಡಾ ದಿನಾಚರಣೆ

Suddi Udaya
error: Content is protected !!