23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಾಲಾಡಿ: ಬೆನ್ನುನೋವಿನ ಸಮಸ್ಯೆಯಿಂದ ಮನನೊಂದು ವ್ಯಕ್ತಿ ನೇಣುಬಿಗಿದು ಆತ್ಮಹತ್ಯೆ

ಮಾಲಾಡಿ: ಇಲ್ಲಿಯ ಕೊಲ್ಪೆದಬೈಲ್ ಅತಿ೯ಲ‌ ನಿವಾಸಿ ವಲೇರಿಯನ್ ಡಿಸೋಜಾ(78ವ) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೇ 15 ರಂದು ವರದಿಯಾಗಿದೆ.


ಈ ಬಗ್ಗೆ ರೀಟಾ ಲೋಬೋ ಪೊಲೀಸರಿಗೆ ದೂರು ನೀಡಿ, ತನ್ನ ಗಂಡ ವಲೇರಿಯನ್ ಡಿಸೋಜಾ ಇತ್ತಿಚೀಗೆ ಗ್ಯಾಸ್ಟ್ರಿಕ್ ಮೂಲವ್ಯಾಧಿ, ಹಾಗೂ ವಿಪರೀತ ಬೆನ್ನುನೋವಿನ ಸಮಸ್ಯೆಯಿಂದ ಬಳಲುತ್ತಿದ್ದು, ಅದಕ್ಕೆ ಚಿಕಿತ್ಸೆಯನ್ನು ಪಡೆಯುತ್ತಿದ್ದರು. ಮೇ 14 ರಂದು ತನ್ನ ಮಗ, ಮಕ್ಕಳೊಂದಿಗೆ ಆತನ ಹೆಂಡತಿಯ ಅಕ್ಕನ ಮನೆಗೆ ಹೋಗಿ ಬರುವುದಾಗಿ ತಿಳಿಸಿ ಹೋಗಿರುತ್ತಾರೆ. ಮನೆಯಲ್ಲಿ ನಾನು ಹಾಗೂ ಗಂಡ ವಲೇರಿಯನ್ ಡಿಸೋಜಾ ಮಾತ್ರ ಇದ್ದೆವು. ಮೇ 15 ರಂದು ಬೆಳಿಗ್ಗೆ 6 ಗಂಟೆಗೆ ನಾನು ಮಡಂತ್ಯಾರು ಚರ್ಚ್ ಗೆ ಹೋಗಿ ಬೆಳಿಗ್ಗೆ 7:30ಕ್ಕೆ ಮನೆಗೆ ವಾಪಾಸು ಬಂದು ಗಂಡನನ್ನು ಕರೆದಾಗ ಪ್ರತ್ಯುತ್ತರ ಇಲ್ಲದುದರಿಂದ ಮನೆಯ ಒಳಗಡೆ ಹೊರಗಡೆ ಹುಡುಕಿದಾಗ ಗಂಡ ವಲೇರಿಯನ್ ಡಿಸೋಜಾ ರವರು ಮನೆಯ ಹಿಂಬದಿಯಲ್ಲಿ ಇರುವ 2 ಕಿಟಕಿಯ ಸನ್ ಡ್ಯಾಪ್ ನ ಮದ್ಯೆ ಇಟ್ಟಿದ್ದ ಮರದ ಪಕ್ಕಾಸಿ ಮದ್ಯಭಾಗಕ್ಕೆ ನೈಲಾನ್ ಹಗ್ಗವನ್ನು ಬಿಗಿದು ಕುತ್ತಿಗೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡು ಬಂದಿದೆ.

ಇತ್ತಿಚೇಗೆ ಗ್ಯಾಸ್ಟ್ರಿಕ್ ಮೂಲವ್ಯಾಧಿ, ಹಾಗೂ ವಿಪರೀತ ಬೆನ್ನುನೋವಿನ ಸಮಸ್ಯೆಯಿಂದ ಬಳಲುತ್ತಿದ್ದು ಇದೇ ಕಾರಣಕ್ಕೆ ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ನೀಡಿದ ದೂರಿನಂತೆ ಪುಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಲಾಯಿಲ ಸೈಂಟ್ ಮೇರಿಸ್ ಶಾಲೆ ರಜತ ಮಹೋತ್ಸವ ಸಂಭ್ರಮ: ಡಾ| ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿದ ಶಾಲೆಯ ಆಡಳಿತ ಮಂಡಳಿ

Suddi Udaya

ಕುಣಿತಾ ಭಜನೆಯಲ್ಲಿ ಶ್ರೀ ವಿದ್ಯಾ ಸರಸ್ವತಿ ಭಜನಾ ಮಂಡಳಿ ಪಾರೆಂಕಿ ತಂಡಕ್ಕೆ ಪ್ರಥಮ ಸ್ಥಾನ

Suddi Udaya

ಆ.19: ಧರ್ಮಸ್ಥಳದಲ್ಲಿ ನೈತಿಕ ಮೌಲ್ಯಾಧಾರಿತ ಪುಸ್ತಕಗಳ ಲೋಕಾರ್ಪಣೆ, ರಾಜ್ಯಮಟ್ಟದ ಅಂಚೆ-ಕುಂಚ ಸ್ಪರ್ಧಾ ವಿಜೇತರಿಗೆ ಪುರಸ್ಕಾರ ಸಮಾರಂಭ

Suddi Udaya

ಗುರಿಪಳ್ಳ ನಿವಾಸಿ ಉಮೇಶ್ ಆಚಾರ್ಯರವರ ಶಸ್ತ್ರ ಚಿಕಿತ್ಸೆಯ ಆರ್ಥಿಕ ನೆರವಿಗಾಗಿ ಮನವಿ

Suddi Udaya

ಬೆಳ್ತಂಗಡಿ ಸ.ಪ.ಪೂ. ಕಾಲೇಜಿನಲ್ಲಿ ‘ರಸ್ತೆ ಸುರಕ್ಷತೆ ಮತ್ತು ವೃತ್ತಿ ಮಾರ್ಗದರ್ಶನ’ ಬಗ್ಗೆ ಉಪನ್ಯಾಸ

Suddi Udaya

ಶಿಶಿಲ: ನಿಷೇಧಿತ ಪ್ರದೇಶದಲ್ಲಿ ರಾತ್ರಿ ಮೀನು ಹಿಡಿಯಲು ಬಂದವರನ್ನು ಪತ್ತೆ ಹಚ್ಚಿದ ಸ್ಥಳೀಯರು

Suddi Udaya
error: Content is protected !!