September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಾಲಾಡಿ: ಬೆನ್ನುನೋವಿನ ಸಮಸ್ಯೆಯಿಂದ ಮನನೊಂದು ವ್ಯಕ್ತಿ ನೇಣುಬಿಗಿದು ಆತ್ಮಹತ್ಯೆ

ಮಾಲಾಡಿ: ಇಲ್ಲಿಯ ಕೊಲ್ಪೆದಬೈಲ್ ಅತಿ೯ಲ‌ ನಿವಾಸಿ ವಲೇರಿಯನ್ ಡಿಸೋಜಾ(78ವ) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೇ 15 ರಂದು ವರದಿಯಾಗಿದೆ.


ಈ ಬಗ್ಗೆ ರೀಟಾ ಲೋಬೋ ಪೊಲೀಸರಿಗೆ ದೂರು ನೀಡಿ, ತನ್ನ ಗಂಡ ವಲೇರಿಯನ್ ಡಿಸೋಜಾ ಇತ್ತಿಚೀಗೆ ಗ್ಯಾಸ್ಟ್ರಿಕ್ ಮೂಲವ್ಯಾಧಿ, ಹಾಗೂ ವಿಪರೀತ ಬೆನ್ನುನೋವಿನ ಸಮಸ್ಯೆಯಿಂದ ಬಳಲುತ್ತಿದ್ದು, ಅದಕ್ಕೆ ಚಿಕಿತ್ಸೆಯನ್ನು ಪಡೆಯುತ್ತಿದ್ದರು. ಮೇ 14 ರಂದು ತನ್ನ ಮಗ, ಮಕ್ಕಳೊಂದಿಗೆ ಆತನ ಹೆಂಡತಿಯ ಅಕ್ಕನ ಮನೆಗೆ ಹೋಗಿ ಬರುವುದಾಗಿ ತಿಳಿಸಿ ಹೋಗಿರುತ್ತಾರೆ. ಮನೆಯಲ್ಲಿ ನಾನು ಹಾಗೂ ಗಂಡ ವಲೇರಿಯನ್ ಡಿಸೋಜಾ ಮಾತ್ರ ಇದ್ದೆವು. ಮೇ 15 ರಂದು ಬೆಳಿಗ್ಗೆ 6 ಗಂಟೆಗೆ ನಾನು ಮಡಂತ್ಯಾರು ಚರ್ಚ್ ಗೆ ಹೋಗಿ ಬೆಳಿಗ್ಗೆ 7:30ಕ್ಕೆ ಮನೆಗೆ ವಾಪಾಸು ಬಂದು ಗಂಡನನ್ನು ಕರೆದಾಗ ಪ್ರತ್ಯುತ್ತರ ಇಲ್ಲದುದರಿಂದ ಮನೆಯ ಒಳಗಡೆ ಹೊರಗಡೆ ಹುಡುಕಿದಾಗ ಗಂಡ ವಲೇರಿಯನ್ ಡಿಸೋಜಾ ರವರು ಮನೆಯ ಹಿಂಬದಿಯಲ್ಲಿ ಇರುವ 2 ಕಿಟಕಿಯ ಸನ್ ಡ್ಯಾಪ್ ನ ಮದ್ಯೆ ಇಟ್ಟಿದ್ದ ಮರದ ಪಕ್ಕಾಸಿ ಮದ್ಯಭಾಗಕ್ಕೆ ನೈಲಾನ್ ಹಗ್ಗವನ್ನು ಬಿಗಿದು ಕುತ್ತಿಗೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡು ಬಂದಿದೆ.

ಇತ್ತಿಚೇಗೆ ಗ್ಯಾಸ್ಟ್ರಿಕ್ ಮೂಲವ್ಯಾಧಿ, ಹಾಗೂ ವಿಪರೀತ ಬೆನ್ನುನೋವಿನ ಸಮಸ್ಯೆಯಿಂದ ಬಳಲುತ್ತಿದ್ದು ಇದೇ ಕಾರಣಕ್ಕೆ ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ನೀಡಿದ ದೂರಿನಂತೆ ಪುಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ತೆಂಕಕಾರಂದೂರು ವಿಷ್ಣು ಮೂರ್ತಿ ಮಕ್ಕಳ ಕುಣಿತ ಭಜನೆ ತರಬೇತಿ ಉದ್ಘಾಟನೆ

Suddi Udaya

ಉರುವಾಲು ಕಾರಿಂಜ ಬಾಕಿಮಾರು ದೈವಸ್ಥಾನದ “ಕಾರಿಂಜ ಶ್ರೀ ಕಲ್ಕುಡ” ಧ್ವನಿ ಸುರುಳಿ ಬಿಡುಗಡೆ

Suddi Udaya

ಡಾ. ಹೆಗ್ಗಡೆಯವರ ಬಗ್ಗೆ ಅಪಪ್ರಚಾರಕ್ಕೆ ಎಸ್‌.ಡಿ.ಎಂ ಶಿಕ್ಷಣ ಸಂಸ್ಥೆಗಳಿಂದ ಖಂಡನೆ; ಹೆಗ್ಗಡೆಯವರ ಮತ್ತು ಅವರ ಕುಟುಂಬವರ್ಗದವರ ಬಗ್ಗೆಅವಮಾನಕರ ಮಾತುಗಳನ್ನಾಡುವವರ ಅನಪೇಕ್ಷಿತ‌ ಚಟುವಟಿಕೆಗಳನ್ನು ನಾವು ಬಲವಾಗಿ ವಿರೋಧಿಸುತ್ತೇವೆ; ಉಜಿರೆಯ ಎಸ್ ಡಿ ಎಮ್ ಶಿಕ್ಷಣ ಸಂಸ್ಥೆಗಳಕಾರ್ಯದರ್ಶಿಗಳು ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿಎಸ್‌ಡಿಎಂ ಶಾಲಾ ಕಾಲೇಜುಗಳ ಪ್ರಾಂಶುಪಾಲರು ಮತ್ತು ಸಿಬ್ಬಂದಿಗಳು ಪತ್ರಿಕಾ ಹೇಳಿಕೆ ಬಿಡುಗಡೆ

Suddi Udaya

ಕುತ್ರೋಟ್ಟು ನಿವಾಸಿ ಫಯಾಜ್ ಸ್ಥಳೀಯ ಮಹಿಳೆ ಜೊತೆ ನಾಪತ್ತೆ ಶಂಕೆ: ಫಯಾಜ್ ನ ಪತ್ನಿಯಿಂದ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು -ಪ್ರಕರಣ ದಾಖಲು

Suddi Udaya

ಸೌಜನ್ಯ ಕೊಲೆ ಪ್ರಕರಣ ಮರು ತನಿಖೆ ನಡೆಸುವಂತೆ ಶಿಶಿಲ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಗ್ರಾಮ ಸಮಿತಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಮನವಿ

Suddi Udaya

ಅತ್ಯಂತ ಕುತೂಹಲ ಕೆರಳಿಸಿದ ಮಡಂತ್ಯಾರು ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಚುನಾವಣೆ : ಅಧ್ಯಕ್ಷರಾಗಿ ಜೋಯಲ್ ಗಾಡ್ಫಿ ಮೆಂಡೋನ್ಸಾ, ಹಾಗೂ ಉಪಾಧ್ಯಕ್ಷರಾಗಿ ಕಾಂತಪ್ಪ ಗೌಡ ಆಯ್ಕೆ

Suddi Udaya
error: Content is protected !!