22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಾಲಾಡಿ: ಬೆನ್ನುನೋವಿನ ಸಮಸ್ಯೆಯಿಂದ ಮನನೊಂದು ವ್ಯಕ್ತಿ ನೇಣುಬಿಗಿದು ಆತ್ಮಹತ್ಯೆ

ಮಾಲಾಡಿ: ಇಲ್ಲಿಯ ಕೊಲ್ಪೆದಬೈಲ್ ಅತಿ೯ಲ‌ ನಿವಾಸಿ ವಲೇರಿಯನ್ ಡಿಸೋಜಾ(78ವ) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೇ 15 ರಂದು ವರದಿಯಾಗಿದೆ.


ಈ ಬಗ್ಗೆ ರೀಟಾ ಲೋಬೋ ಪೊಲೀಸರಿಗೆ ದೂರು ನೀಡಿ, ತನ್ನ ಗಂಡ ವಲೇರಿಯನ್ ಡಿಸೋಜಾ ಇತ್ತಿಚೀಗೆ ಗ್ಯಾಸ್ಟ್ರಿಕ್ ಮೂಲವ್ಯಾಧಿ, ಹಾಗೂ ವಿಪರೀತ ಬೆನ್ನುನೋವಿನ ಸಮಸ್ಯೆಯಿಂದ ಬಳಲುತ್ತಿದ್ದು, ಅದಕ್ಕೆ ಚಿಕಿತ್ಸೆಯನ್ನು ಪಡೆಯುತ್ತಿದ್ದರು. ಮೇ 14 ರಂದು ತನ್ನ ಮಗ, ಮಕ್ಕಳೊಂದಿಗೆ ಆತನ ಹೆಂಡತಿಯ ಅಕ್ಕನ ಮನೆಗೆ ಹೋಗಿ ಬರುವುದಾಗಿ ತಿಳಿಸಿ ಹೋಗಿರುತ್ತಾರೆ. ಮನೆಯಲ್ಲಿ ನಾನು ಹಾಗೂ ಗಂಡ ವಲೇರಿಯನ್ ಡಿಸೋಜಾ ಮಾತ್ರ ಇದ್ದೆವು. ಮೇ 15 ರಂದು ಬೆಳಿಗ್ಗೆ 6 ಗಂಟೆಗೆ ನಾನು ಮಡಂತ್ಯಾರು ಚರ್ಚ್ ಗೆ ಹೋಗಿ ಬೆಳಿಗ್ಗೆ 7:30ಕ್ಕೆ ಮನೆಗೆ ವಾಪಾಸು ಬಂದು ಗಂಡನನ್ನು ಕರೆದಾಗ ಪ್ರತ್ಯುತ್ತರ ಇಲ್ಲದುದರಿಂದ ಮನೆಯ ಒಳಗಡೆ ಹೊರಗಡೆ ಹುಡುಕಿದಾಗ ಗಂಡ ವಲೇರಿಯನ್ ಡಿಸೋಜಾ ರವರು ಮನೆಯ ಹಿಂಬದಿಯಲ್ಲಿ ಇರುವ 2 ಕಿಟಕಿಯ ಸನ್ ಡ್ಯಾಪ್ ನ ಮದ್ಯೆ ಇಟ್ಟಿದ್ದ ಮರದ ಪಕ್ಕಾಸಿ ಮದ್ಯಭಾಗಕ್ಕೆ ನೈಲಾನ್ ಹಗ್ಗವನ್ನು ಬಿಗಿದು ಕುತ್ತಿಗೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡು ಬಂದಿದೆ.

ಇತ್ತಿಚೇಗೆ ಗ್ಯಾಸ್ಟ್ರಿಕ್ ಮೂಲವ್ಯಾಧಿ, ಹಾಗೂ ವಿಪರೀತ ಬೆನ್ನುನೋವಿನ ಸಮಸ್ಯೆಯಿಂದ ಬಳಲುತ್ತಿದ್ದು ಇದೇ ಕಾರಣಕ್ಕೆ ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ನೀಡಿದ ದೂರಿನಂತೆ ಪುಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಜೆಸಿಐ ಕೊಕ್ಕಡ ಕಪಿಲ ಘಟಕದ ವತಿಯಿಂದ ದಿವ್ಯಜ್ಯೋತಿ ಶಾಲಾ ವಿದ್ಯಾರ್ಥಿಗಳಿಗೆ ಪರೀಕ್ಷೆ ಎದುರಿಸುವ ಬಗ್ಗೆ ತರಬೇತಿ ಕಾರ್ಯಕ್ರಮ

Suddi Udaya

ಜೂ.21: ಕಳಿಯ ಪ್ರಾ.ಕೃ.ಪ.ಸ. ಸಂಘದ ನೂತನ ಗೋದಾಮು ಕಟ್ಟಡ ಉದ್ಘಾಟನೆ, ರೈತಾಪಿ ಸದಸ್ಯರಿಗೆ ಉಚಿತ ಮೈಲುತುತ್ತು ವಿತರಣೆ ಹಾಗೂ ಎರಡನೇ ಬಾರಿಗೆ ನೂತನ ಶಾಸಕರಾಗಿ ಆಯ್ಕೆಯಾದ ಹರೀಶ್ ಪೂಂಜ ಮತ್ತು ಮದರ್ ತೆರೇಸಾ ಮೆಮೋರಿಯಲ್ ನ್ಯಾಷನಲ್ ಅವಾರ್ಡ್ ಪುರಸ್ಕೃತ ಡಾ. ಎಂ.ಎಸ್ ರಾಜೇಂದ್ರ ಕುಮಾರ್ ರವರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಗೇರುಕಟ್ಟೆ: ಹಲೇಜಿ -ಕಲಾಯಿ ಸಂಪರ್ಕ ರಸ್ತೆಯ ಚೆಕ್ ಡ್ಯಾಮ್ ನಲ್ಲಿ ತುಂಬಿಕೊಂಡ ಮರದ ದಿಮ್ಮಿಗಳ ತೆರವು

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ-200 ರಲ್ಲಿ ಸ್ವೀಪ್ ಸಮಿತಿಯಿಂದ ತಾಲೂಕಿನ 241 ಬಿಎಲ್ ಒ ಗಳಿಗೆ ತರಬೇತಿ

Suddi Udaya

ಎಲ್‌ಕೆಜಿ ಪ್ರವೇಶಕ್ಕೆ 4 ವರ್ಷ ವಯಸ್ಸು ಕಡ್ಡಾಯ ಶಿಕ್ಷಣ ಇಲಾಖೆ ಆದೇಶ

Suddi Udaya

ಪುದುವೆಟ್ಟು ಪಂ. ಉಪಚುನಾವಣೆ: ಬಿಜೆಪಿ ಬೆಂಬಲಿತ ಅಭ್ಯರ್ಥಿ ಜಯಲಕ್ಷ್ಮೀ ಯವರಿಂದ ನಾಮಪತ್ರ ಸಲ್ಲಿಕೆ

Suddi Udaya
error: Content is protected !!