24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಚಾರ್ಮಾಡಿ ಘಾಟಿ: ಅರಣ್ಯ ಇಲಾಖೆ ಗಸ್ತು

ಚಾರ್ಮಾಡಿ ಘಾಟಿ ರಸ್ತೆ ಪರಿಸರದಲ್ಲಿ ನಿರಂತರವಾಗಿ ಕಾಡಾನೆ ಕಂಡು ಬರುತ್ತಿರುವ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ವತಿಯಿಂದ ರಾತ್ರಿ ಗಸ್ತು ಆರಂಭವಾಗಿದೆ.

ಕಳೆದ ಕೆಲವು ದಿನಗಳಿಂದ ಕಾಡಾನೆ ಪ್ರತಿದಿನ ಎಂಬಂತೆ ಘಾಟಿಯ ಒಂದನೇ ತಿರುವಿನಿಂದ ಒಂಬತ್ತನೇ ತಿರುವಿನ ತನಕವು ಸವಾರಿ ನಡೆಸುತ್ತಿದ್ದು, ರಸ್ತೆಯಲ್ಲಿ ನಿಂತು ಈಚಲ ಮರ ತಿನ್ನುವುದು ಕಂಡುಬಂದಿದೆ. ಅಲ್ಲದೆ ಹಲವು ಬಾರಿ ಹಗಲು ಹೊತ್ತಿನಲ್ಲೂ ಸಂಚಾರವನ್ನು ನಡೆಸಿ ಪ್ರಯಾಣಿಕರ ವಾಹನ ಸವಾರರರ ಭೀತಿಗೆ ಕಾರಣವಾಗಿದೆ. ಕೆಲವು ಪ್ರಯಾಣಿಕರು ಆನೆಯನ್ನು ಅಟ್ಟಲು ಯತ್ನಿಸುವುದು, ಕಲ್ಲೆಸೆಯುವುದು, ಬೊಬ್ಬೆ ಹಾಕುವುದು, ಇತ್ಯಾದಿ ಅನಗತ್ಯ ಚಟುವಟಿಕೆಗಳನ್ನು ಮಾಡುತ್ತಾ ಅಪಾಯವನ್ನು ಆಹ್ವಾನಿಸುವುದು ಕಂಡುಬರುತ್ತಿದೆ.

ನಿರಂತರವಾಗಿ ಕಾಡಾನೆ ಘಾಟಿ ರಸ್ತೆಯಲ್ಲಿ ಕಂಡು ಬರುವ ಕಾರಣ ಹಲವು ವಾಹನ ಸವಾರರು ಪ್ರಯಾಣಿಕರು ಈಗಲೂ ಭಯದಿಂದಲೇ ಸಾಗುತ್ತಿದ್ದಾರೆ..

Related posts

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ: ಯಶಸ್ವಿ ಶಸ್ತ್ರಚಿಕಿತ್ಸೆಯಲ್ಲಿ ಗ್ರಾಮೀಣ ಆಸ್ಪತ್ರೆಯ ಮತ್ತೊಂದು ಸಾಧನೆ ಸಂಕೀರ್ಣ; ಬಾಯಿ ಕ್ಯಾನ್ಸರ್‌ಗೆ ಯಶಸ್ವಿ ಶಸ್ತ್ರಚಿಕಿತ್ಸೆ

Suddi Udaya

ರಾಜ್ಯ ಮಟ್ಟದ ಕಾಲೇಜು ಪತ್ರಿಕೋದ್ಯಮ ಉಪನ್ಯಾಸಕರ ಸಂಘದ ಕಾರ್ಯದರ್ಶಿಯಾಗಿ ಡಾ. ಭಾಸ್ಕರ ಹೆಗಡೆ ಆಯ್ಕೆ

Suddi Udaya

ಬೆಳ್ತಂಗಡಿ: ಕಾಲೇಜು ವಿದ್ಯಾರ್ಥಿ ನಾಪತ್ತೆ : ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಮಾಜಿ ಸಚಿವ ಹೆಚ್.ಡಿ ರೇವಣ್ಣ ಭೇಟಿ

Suddi Udaya

ಬೆಳ್ತಂಗಡಿ ರಾಜ್ಯ ಹೆದ್ದಾರಿಯಲ್ಲಿ ರಾಜ ಕೇಸರಿ ಸಂಘಟನೆಯಿಂದ ಸ್ವಚ್ಛತಾ ಕಾರ್ಯ

Suddi Udaya

ಸುಲ್ಕೇರಿ ಮಹಮ್ಮಾಯಿ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಭಂಡಾರಿಗೋಳಿ ಬಸ್ ಸ್ಟಾಂಡ್ ಗೆ ಹೊಸ ಶೀಟು ಅಳವಡಿಕೆ

Suddi Udaya
error: Content is protected !!