23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೀಡಿ ಬ್ರಾಂಚ್ ನ ಕಟ್ಟಡದ ಅಡ್ಡಕ್ಕೆ ವ್ಯಕ್ತಿ ನೇಣು ಹಾಕಿಕೊಂಡು ಆತ್ಮಹತ್ಯೆ

ಬೆಳ್ತಂಗಡಿ: ವ್ಯಕ್ತಿಯೊಬ್ಬರು ಯಾವುದೋ ವೈಯುಕ್ತಿಕ ಕಾರಣಕ್ಕೆ ಕುತ್ತಿಗೆಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ವೇಣೂರು ಠಾಣಾ ವ್ಯಾಪ್ತಿಯ ಕುರ್ಲೊಟ್ಟು ಎಂಬಲ್ಲಿ ನಡೆದಿದೆ.
ಹೊಸಂಗಡಿ ಗ್ರಾಮದ ಕುರ್ಲೊಟ್ಟು ಸುದೆಕಾರ್ ಮನೆ ನಿವಾಸಿ ಅಬೂಬಕ್ಕರ್ (54ವ) ಆತ್ಮಹತ್ಯೆ ಮಾಡಿಕೊಂಡವರು.

ಈ ಸಂಬಂಧ ಮೃತರ ಪತ್ನಿ ಹಾಜಿರಾ ವೇಣೂರು ಪೊಲೀಸರಿಗೆ ದೂರು ನೀಡಿ, ಮೇ.16 ರಂದು ಮಧ್ಯಾಹ್ನ 12.30 ರಿಂದ 4 ಗಂಟೆಯ ಮಧ್ಯೆ ಅವಧಿಯಲ್ಲಿ ಹೊಸಂಗಡಿ ಗ್ರಾಮದ ಕುರ್ಲೊಟ್ಟು ಎಂಬಲ್ಲಿ ತನ್ನ ಯಾವುದೋ ವೈಯಕ್ತಿಕ ಕಾರಣದಿಂದ ಮನನೊಂದು ಜೀವನದಲ್ಲಿ ಜಿಗುಪ್ಸೆ ಹೊಂದಿ ಬೀಡಿ ಬ್ರಾಂಚ್‌ ಕಟ್ಟಡದ ಮಾಡಿನ ಅಡ್ಡಕ್ಕೆ ನೈಲಾನ್‌ ಹಗ್ಗವನ್ನು ಕಟ್ಟಿ ಕುತ್ತಿಗೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಮೃತರ ಮರಣದಲ್ಲಿ ಬೇರೆ ಯಾವುದೇ ಸಂಶಯ ಇರುವುದಿಲ್ಲ ಎಂದು ನೀಡಿದ ದೂರಿನಂತೆ ವೇಣೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Related posts

ಜ.2: ಧರ್ಮಸ್ಥಳ ಶಾಂತಿವನ ಟ್ರಸ್ಟ್ ವತಿಯಿಂದ 31ನೇ ವರ್ಷದ “ಜ್ಞಾನರಥ” ಮತ್ತು “ಜ್ಞಾನಪಥ” ಮೌಲ್ಯಧಾರಿತ ಪುಸ್ತಕಗಳ ರಾಜ್ಯಮಟ್ಟದ ವಿವಿಧ ಸ್ಪರ್ಧೆ ಹಾಗೂ ಪುರಸ್ಕಾರ ಸಮಾರಂಭ

Suddi Udaya

ಹತ್ಯಡ್ಕ: ನಿವೃತ್ತಿಗೊಂಡ ಕೆ.ವಿ.ಜಿ ಬ್ಯಾಂಕ್ ಮ್ಯಾನೇಜರ್ ಪುಷ್ಪರಾಜ್ ಕೆ.ಸಿ ರವರಿಗೆ ಬಿಳ್ಕೋಡುಗೆ ಸಮಾರಂಭ

Suddi Udaya

ಕಾಯರ್ತಡ್ಕ: ಹದಗೆಟ್ಟ ರಸ್ತೆ, ಶಿಲಾನ್ಯಾಸಗೊಂಡ ಕಾಮಗಾರಿಗೆ ಅನುದಾನ ಬಿಡುಗಡೆಗೊಳಿಸುವಂತೆ ಒತ್ತಾಯಿಸಿ, ಪ್ರತಿಭಟನೆಗೆ ಗ್ರಾಮಸ್ಥರ ಸಿದ್ದತೆ

Suddi Udaya

ಸುಲ್ಕೇರಿ ಶ್ರೀ ಗುರುನಾರಾಯಣ ಸೇವಾ ಸಂಘದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ನಡೆಯುವ ವಾರ್ಷಿಕ ಜಾತ್ರಾ ಮಹೋತ್ಸವದ ಬಗ್ಗೆ ಸಮಾಲೋಚನ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆ ರುಡ್‌ಸೆಟ್ ಸಂಸ್ಥೆಯ ಬ್ಯೂಟಿಪಾರ್ಲರ್ ಮ್ಯಾನೇಜ್‌ಮೆಂಟ್ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಉಜಿರೆ : ಪಾರ್ಕಿಂಗ್ ಜಾಗದಲ್ಲಿ ನಿಲ್ಲಿಸಿದ್ದ ಕಾರು ಕಳವು : ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ‌ ದಾಖಲು

Suddi Udaya
error: Content is protected !!