September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಯಾತ್ರಾರ್ಥಿಯಾಗಿ ಬಂದಿದ್ದ ಮಹಿಳೆಯ ಬ್ಯಾಗಿನಲ್ಲಿದ್ದ ಪರ್ಸಿನಿಂದ ರೂ 2.16ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ರೂ. 5 ಸಾವಿರ ನಗದು ಕಳವು

ಬೆಳ್ತಂಗಡಿ: ಯಾತ್ರಾರ್ಥಿ ಮಹಿಳೆಯ ಬ್ಯಾಗಿನಿಂದ ಎರಡು ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಹಾಗೂ ನಗದು ಕಳವಾದ ಘಟನೆ ಸಂಭವಿಸಿದ್ದು ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಯಾತ್ರಾರ್ಥಿಯಾಗಿ ಬಂದಿದ್ದ ಅಂತುಬಾಯಮ್ಮ ಎಂಬವರೇ ಚಿನ್ನಾಭರಣ ನಗದು ಕಳೆದುಕೊಂಡವರಾಗಿದ್ದಾರೆ. ಇವರು ಮೇ 15 ರಂದು ಬೆಳಗ್ಗೆ ಧರ್ಮಸ್ಥಳದಲ್ಲಿ ದೇವರ ದರ್ಶನ ಮುಗಿಸಿ ಸೌತಡ್ಕ ದೇವಸ್ಥಾನಕ್ಕೆ ಹೋಗಿದ್ದಾರೆ. ಧರ್ಮಸ್ಥಳ ದಿಂದ ಹೊರಡುವ ವೇಳೆ ಅವರ ಬ್ಯಾಗಿನಲ್ಲಿ ಇಟ್ಟಿದ್ದ ಪರ್ಸಿನಲ್ಲಿ ಚಿನ್ನಾಭರಣ ಹಾಗೂ ನಗದು ಇತ್ತು. ಸೌತಡ್ಕ ದೇವಸ್ಥಾನ ತಲುಪಿ ಅಂಗಡಿಯಲ್ಲಿ ಹಣಕೊಡಲು ಪರ್ಸ್ ಹುಡುಕಿದಾಗ ಪರ್ಸ್ ನಾಪತ್ತೆಯಾಗಿತ್ತು.‌ಪರ್ಸಿನಲ್ಲಿ ಇದ್ದ 2,16,000 ಮೌಲ್ಯದ ಚಿನ್ನಾಭರಣ ಹಾಗೂ 5 ಸಾವಿರ ನಗದನ್ನು ಯಾರೋ ಕಳ್ಳರು ಕಳವು ಮಾಡಿಕೊಂಡು ಹೋಗಿರುವುದಾಗಿ ಅವರು ಧರ್ಮಸ್ಥಳ ಪೊಲೀಸರಿಗೆ ದೂರು ನೀಡಿದ್ದಾರೆ. ಧರ್ಮಸ್ಥಳ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Related posts

ಬೆಳ್ತಂಗಡಿ: ಸಂತ ಅಲ್ಫೋನ್ಸ ಮಿಷನ್ ಲೀಗ್ ವತಿಯಿಂದ ರೂ. 75 ಸಾವಿರ ಚೆಕ್ ಹಸ್ತಾಂತರ

Suddi Udaya

ಶಿಶಿಲ ಭಗವಾನ್ 1008 ಶ್ರೀ ಚಂದ್ರನಾಥ ಸ್ವಾಮಿ ಜಿನಮಂದಿರದ ವಾರ್ಷಿಕ ಮಹೋತ್ಸವ

Suddi Udaya

ಕಾಡಾನೆಗಳ ಓಡಾಟ: ಮಲವಂತಿಗೆ ಗ್ರಾಮ ಪಂಚಾಯತ್ ನಿಂದ ಎಚ್ಚರಿಕೆ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯ ವಾರ್ಷಿಕ ಜಾತ್ರಾ ಮಹೋತ್ಸವ :ಪುದುವೆಟ್ಟು ಶ್ರೀ ನಾರಾಯಣ ಗುರು ಬಿಲ್ಲವ ಸೇವಾ ಸಂಘದಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮಡಂತ್ಯಾರು ಗಣೇಶೋತ್ಸವ ಸಮಿತಿಯ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಮರೋಡಿ: ಊರವರಿಂದ ಶ್ರಮದಾನ, ಕಳೆಗಿಡಗಂಟಿಗಳ ತೆರವು

Suddi Udaya
error: Content is protected !!