22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಇತ್ತೀಚೆಗೆ ನಿಧನರಾದ ಮಾಜಿ ಶಾಸಕ ಕೆ. ವಸಂತ ಬಂಗೇರರ ಹಳೆಕೋಟೆಯ ಮನೆಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಭೇಟಿ; ಕುಟುಂಬಸ್ಥರಿಗೆ ಸಾಂತ್ವಾನ

ಬೆಳ್ತಂಗಡಿ: ಕರ್ನಾಟಕ ಸರಕಾರದ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಮೇ 18 ರಂದು ಸಂಜೆ ಇತ್ತಿಚೇಗಷ್ಟೇ ವಿಧಿವಶರಾದ ಮಾಜಿ ಶಾಸಕ ಕೆ. ವಸಂತ ಬಂಗೇರರ ಬೆಳ್ತಂಗಡಿಯ ಹಳೆಕೋಟೆ ಮನೆಗೆ ಭೇಟಿ ನೀಡಿ ಬಂಗೇರರ ಪತ್ನಿ ಸುಜಿತಾ ವಿ. ಬಂಗೇರ ಹಾಗೂ ಕುಟುಂಬಸ್ಥರಿಗೆ ಸಂತ್ವಾನ ಹೇಳಿದರು.


ನನ್ನ ತಂದೆ ಬಂಗಾರಪ್ಪ ಅವರಂತೆ ವಸಂತ ಬಂಗೇರ ಅವರು ಕೂಡಾ ನೇರ ನಡೆನುಡಿಯ ವ್ಯಕ್ತಿಯಾಗಿದ್ದರು. ಬೆಳ್ತಂಗಡಿ ಕ್ಷೇತ್ರದಲ್ಲಿ ಒಳ್ಳೆಯ ಕೆಲಸ ಮಾಡಿದ್ದರು. ರಾಜಕೀಯ ಕ್ಷೇತ್ರದಲ್ಲಿ ಬಹಳಷ್ಟು ಅನುಭವವನ್ನು ಹೊಂದಿದ್ದರು. ಅವರ ನಿಧನರಾದ ದಿನ ಅನಿವಾರ್ಯ ಕಾರಣಗಳಿಂದ ನನಗೆ ಬರಲು ಸಾಧ್ಯವಾಗಿಲ್ಲ. ನಾವು ಅವರ ಕುಟುಂಬಸ್ಥರ ಜೊತೆ ಸದಾ ಇರುತ್ತೇವೆ ಎಂದು ಸಚಿವರ ಈ ಸಂದರ್ಭದಲ್ಲಿ ತಿಳಿಸಿದರು.


ಈ ಸಂದರ್ಭದಲ್ಲಿ ಎಂಎಲ್‌ಸಿ ಮಂಜುನಾಥ ಭಂಡಾರಿ, ಜಿ.ಪಂ ಮಾಜಿ ಸದಸ್ಯ ಧರಣೇಂದ್ರ ಕುಮಾರ್ ಹೊಸಂಗಡಿ, ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಜಯವಿಕ್ರಮ್ ಕಲ್ಲಾಪು, ಇಳಂತಿಲ ಗ್ರಾ.ಪಂ ಮಾಜಿ ಅಧ್ಯಕ್ಷ ಇಸುಬು ಇಳಂತಿಲ, ನ್ಯಾಯವಾದಿ ಮನೋಹರ ಕುಮಾರ್ ಇಳಂತಿಲ, ಅನೂಪ್ ಬಂಗೇರ ಮದ್ದಡ್ಕ, ಬಂಗೇರರ ಪುತ್ರಿಯರಾದ ಪ್ರೀತಿತ ಬಂಗೇರ, ಬಿನುತ ಬಂಗೇರ, ಅಳಿಯಂದಿರಾದ ಧರ್ಮವಿಜೇತ್ ಮತ್ತು ಸಂಜೀವ್ ಕನೇಕಲ್ ಉಪಸ್ಥಿತರಿದ್ದರು.

Related posts

ಯುವವಾಹಿನಿ ಬೆಂಗಳೂರು ಘಟಕದ ಪದಗ್ರಹಣ ಸಮಾರಂಭ

Suddi Udaya

ಕುಂಟಿನಿ ಮದ್ರಸದಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಬ್ರಹ್ಮಾನಂದ ಶ್ರೀಗಳ ಚಾತುರ್ಮಾಸ್ಯ ವೃತ: ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಭೇಟಿ

Suddi Udaya

ಚಾರ್ಮಾಡಿ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಸದಾಶಿವ ಕೆವುಟಾಜೆ ಆಯ್ಕೆ

Suddi Udaya

ಪುತ್ತಿಲ ಕುಂಡಡ್ಕ : ಮನೆಯ ದಾರಂದ ಬಿದ್ದು ಶಾಲಾ ಬಾಲಕಿ ಅಲ್ಫಿಯಾ ಮೃತ್ಯು

Suddi Udaya

ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಎಸ್ ಎಸ್ ಎಲ್ ಸಿ ಮರು ಮೌಲ್ಯಮಾಪನದಲ್ಲಿ ಹೆಚ್ಚುವರಿ ಅಂಕ ಹಾಗೂ ರಾಜ್ಯಕ್ಕೆ 5ನೇ ಸ್ಥಾನ

Suddi Udaya
error: Content is protected !!