July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆಯ ರುಡ್‌ಸೆಟ್ ಸಂಸ್ಥೆಯಲ್ಲಿ ವಿವಿಧ ಉಚಿತ ತರಬೇತಿಗಳಿಗೆ ಅರ್ಜಿ ಆಹ್ವಾನ

ಉಜಿರೆ: ಉಜಿರೆಯ ರುಡ್‌ಸೆಟ್ ಸಂಸ್ಥೆಯಲ್ಲಿ ಮುಂದಿನ ದಿನಗಳಲ್ಲಿ ನಡೆಯಲಿರುವ ಉಚಿತ ತರಬೇತಿ ಕಾರ್ಯಕ್ರಮಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ:
ಕಂಪ್ಯೂಟರ್ ಡಿ.ಟ.ಪಿ ಮೇ 27 ರಿಂದ ಜು.10 ರವರೆಗೆ (45 ದಿನಗಳು). ಮಹಿಳೆಯರ ವಸ್ತ್ರ ವಿನ್ಯಾಸ ಮೇ 30ರಿಂದ ಜೂ 28 ರವರೆಗೆ (3೦ ದಿನಗಳು), ಫೋಟೋಗ್ರಫಿ ಮತ್ತು ವೀಡಿಯೋಗ್ರಫಿ ಜೂ 11 ರಿಂದ ಜು.10 ರವರೆಗೆ (30 ದಿನಗಳು), ಕಂಪ್ಯೂಟರ್ ಟ್ಯಾಲಿ (ಅಕೌಂಟಿಂಗ್) ಜು, 11 ರಿಂದ ಆ. 9 ರವರೆಗೆ (30 ದಿನಗಳು) ಈ ತರಬೇತಿಗಳು ನಡೆಯಲಿದೆ.

ಜೊತೆಗೆ ಮುಂದಿನ ದಿನಗಳಲ್ಲಿ ಮೆನ್ಸ್ ಪಾರ್ಲರ್, ಮೊಬೈಲ್ ಫೋನ್ ರಿಪೇರಿ, ಮೊದಲಾದ ತರಬೇತಿಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಈ ಎಲ್ಲಾ ತರಬೇತಿಗಳು ಊಟ ಮತ್ತು ವಸತಿಯೊಂದಿಗೆ ಸಂಪೂರ್ಣವಾಗಿ ಉಚಿತವಾಗಿರುತ್ತದೆ. ಆಸಕ್ತ ಅಭ್ಯರ್ಥಿಗಳು 18 ರಿಂದ 45 ವರ್ಷಗಳ ವಯೋಮಿತಿಯ ಕನ್ನಡ ಓದು ಬರಹ ಬಲ್ಲ ಯುವಕ/ಯುವತಿಯರು ರುಡ್‌ಸೆಟ್ ಸಂಸ್ಥೆಯ ಇಮೇಲ್ [email protected] ಗೆ ಸಲ್ಲಿಸಬಹುದು, ವಾಟ್ಸಪ್ ಮೂಲಕ ಅರ್ಜಿ ಸಲ್ಲಿಸುವವರು ಮೊಬೈಲ್ ನಂ.6364561982 ಗೆ ಸಲ್ಲಿಸಬಹುದು. ನೇರವಾಗಿ ಕೂಡ ಅರ್ಜಿಯನ್ನು ಸಲ್ಲಿಸಬಹುದು ಅಥವಾ ಬಿಳಿ ಹಾಳೆಯಲ್ಲಿ ಅರ್ಜಿಯನ್ನು ಬರೆದು – ನಿರ್ದೇಶಕರು ರುಡ್‌ಸೆಟ್ ಸಂಸ್ಥೆ, ಸಿದ್ದವನ ಉಜಿರೆ, ಇವರಿಗೆ ಕಳುಹಿಸಬಹುದು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08256-236404 , 6364561982 ಸಂಪರ್ಕಿಸಬಹುದು. ಜೊತೆಗೆ https://forms.gle/Z2xPLE1FigamcMBd9 ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಇದೆ.

Related posts

ಕನ್ನಡಿಕಟ್ಟೆ ಬಳಿ ಬೈಕ್- ಕಾರು ನಡುವೆ ಭೀಕರ ರಸ್ತೆ ಅಪಘಾತ: ಮಹಿಳೆ ಸಾವು

Suddi Udaya

ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ ಅಪರೇಟಿವ್ ಸೊಸೈಟಿ ನಿರ್ದೇಶಕ ಜಯರಾಮ ಶೆಟ್ಟಿ ಮುಂಡಾಡಿಗುತ್ತುರವರಿಗೆ ವಿಶ್ವೇಶ್ವರಯ್ಯ ಅಂತರರಾಷ್ಟ್ರೀಯ ಪ್ರಶಸ್ತಿ

Suddi Udaya

ಶ್ರೀ ಧ.ಮಂ ಪ.ಪೂ ಕಾಲೇಜು : ಪಂಚಪ್ರಾಣ ಪ್ರತಿಜ್ಞಾ ಸ್ವೀಕಾರ ಕಾರ್ಯಕ್ರಮ

Suddi Udaya

ಎಸ್.ಎಸ್.ಎಲ್.ಸಿ ಮರುಮೌಲ್ಯಮಾಪನ: ನಾವೂರು ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳ ಅದ್ಭುತ ಸಾಧನೆ

Suddi Udaya

ಮಾಜಿ ಶಾಸಕ ದಿ. ಕೆ ವಸಂತ ಬಂಗೇರರವರ 78 ನೇ ಹುಟ್ಟು ಹಬ್ಬದ ಸವಿ ನೆನಪಿಗಾಗಿ, ಬಂಗೇರಾ ಬ್ರಿಗೇಡ್ ಬೆಳ್ತಂಗಡಿ ವತಿಯಿಂದ,ಬಿನುತಾ ಬಂಗೇರರ ನೇತೃತ್ವದಲ್ಲಿ ಮದ್ದಡ್ಕ ಬಂಡೀಮಠ ಮೈದಾನದಲ್ಲಿ ಹೊನಲು ಬೆಳೆಕಿನ ಮುಕ್ತ ಕಬಡ್ಡಿ ಪಂದ್ಯಕೂಟ

Suddi Udaya

ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ: ಜ.22ರಂದು ದ.ಕ ಜಿಲ್ಲೆಯಾದ್ಯಂತ ಬಾರ್‌, ಮದ್ಯದ ಅಂಗಡಿ ಬಂದ್ : ಜಿಲ್ಲಾಧಿಕಾರಿ ಆದೇಶ

Suddi Udaya
error: Content is protected !!