September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಳನೀರಿನಲ್ಲಿ ಮೊಟ್ಟಮೊದಲ ಸಾಹಿತ್ಯ ಕಾರ್ಯಕ್ರಮ: ಸಾಹಿತ್ಯ ಮತ್ತು ಬದುಕು ವಿಷಯದ ಕುರಿತು ಕಾರ್ಯಕ್ರಮ

ಬೆಳ್ತಂಗಡಿ: ತಾಲೂಕಿನ ಹಾಗೂ ಜಿಲ್ಲೆಯ ಕೊನೆಯ ಭಾಗವಾದ ಮಲವಂತಿಗೆ ಗ್ರಾಮದ ಎಳನೀರಿನಲ್ಲಿ ಶನಿವಾರ ಜಿಲ್ಲಾ ಸಾಹಿತ್ಯ ಪರಿಷತ್ ಹಾಗೂ ಬೆಳ್ತಂಗಡಿ ತಾಲೂಕು ಘಟಕದ ವತಿಯಿಂದ ಸಾಹಿತ್ಯ ಮತ್ತು ಬದುಕು ವಿಷಯದ ಕುರಿತು ಕಾರ್ಯಕ್ರಮ ಜರಗಿತು.

ಎಳನೀರಿನಲ್ಲಿ ಪ್ರಪ್ರಥಮ ಬಾರಿಗೆ ಅಲ್ಲಿನ ಸಮುದಾಯ ಭವನದಲ್ಲಿ ನಡೆದ ಸಾಹಿತ್ಯಕ್ಕೆ ಸಂಬಂಧ ಪಟ್ಟ ಈ ಕಾರ್ಯಕ್ರಮವನ್ನು ಉಜಿರೆ ಎಸ್ ಡಿಎಂ ಕಾಲೇಜಿನ ಕಾಲೇಜಿನ ಪ್ರಿನ್ಸಿಪಾಲ್ ಡಾ.ಬಿ.ಎ. ಕುಮಾರ್ ಹೆಗ್ಡೆ ಉದ್ಘಾಟಿಸಿ ಮಾತನಾಡಿ “ಸಾಹಿತ್ಯ, ಸಂಗೀತ, ಕಲೆಗಳಲ್ಲಿ ಆಸಕ್ತಿ ಬೆಳೆಸಿಕೊಳ್ಳಬೇಕು ಸಾಹಿತ್ಯವು ನಮ್ಮ ಬದುಕನ್ನು ಶ್ರೀಮಂತ ಗೊಳಿಸುತ್ತದೆ. ಎಳನೀರಿನಂತಹ ಸುಂದರ ಪರಿಸರದಲ್ಲಿ ಇನ್ನಷ್ಟು ಹೆಚ್ಚಿನ ಸಾಹಿತ್ಯ ಕಾರ್ಯಕ್ರಮಗಳು ನಡೆಯಬೇಕು” ಎಂದು ಹೇಳಿದರು.

ಸಾಹಿತಿ ಮುನಿರಾಜ ರೆಂಜಾಳ ವಿಶೇಷ ಉಪನ್ಯಾಸ ನೀಡಿ “ಸಾಹಿತ್ಯಕ್ಕಾಗಿ ಬದುಕು ಸಮರ್ಪಿಸಿಕೊಂಡವರ ನೆನಪು ಶಾಶ್ವತವಾಗಿರುತ್ತದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಡಾ.ಎಂ‌.ಪಿ. ಶ್ರೀನಾಥ್ ಮಾತನಾಡಿ “ಸಾಹಿತ್ಯ ಎಲ್ಲಾ ಕಡೆ ಪಸರಿಸಿ ಎಲ್ಲರನ್ನು ಮುಟ್ಟಬೇಕು. ಇದಕ್ಕಾಗಿ ಸಾಹಿತ್ಯ ಪರಿಷತ್ ಕೆಲಸ ಮಾಡುತ್ತಿದ್ದು ಜಿಲ್ಲೆಯ ಹಿಂದುಳಿದ ಪ್ರದೇಶಗಳಲ್ಲೂ ಇರುವ ಎಲೆ ಮರೆಯ ಕಾಯಿಗಳನ್ನು ಗುರುತಿಸಿ ಅವರನ್ನು ಮುನ್ನೆಲೆಗೆ ತರುವ ಪ್ರಯತ್ನ ನಡೆಯುತ್ತಿದೆ” ಎಂದರು


ಕೇಂದ್ರ ಕಾರ್ಯಕಾರಿ ಸಮಿತಿ ಸದಸ್ಯ ಡಾ. ಮಾಧವ ಎಂ.ಕೆ. ಮಾತನಾಡಿದರು. ತಾಲೂಕು ಘಟಕದ ಅಧ್ಯಕ್ಷ ಯದುಪತಿ ಗೌಡ, ಉಪನ್ಯಾಸಕ ದಿವ ಕೊಕ್ಕಡ ಉಪಸ್ಥಿತರಿದ್ದರು.
ಸಾಹಿತಿ ವೈ. ಪ್ರೇಮಕುಮಾರ್ ಎಳನೀರು ಹಾಗೂ ಸಮಾಜಸೇವಕ ಕೇಶವ ಫಡಕೆ ದಿಡುಪೆ ಅವರನ್ನು ಸನ್ಮಾನಿಸಲಾಯಿತು.
ಮಲವಂತಿಗೆ ಗ್ರಾಪಂ ಅಧ್ಯಕ್ಷ ಪ್ರಕಾಶ್ ಜೈನ್ ಸ್ವಾಗತಿಸಿದರು. ತಾಲೂಕು ಘಟಕದ ಗೌರವ ಕಾರ್ಯದರ್ಶಿ ರಾಮಕೃಷ್ಣ ಭಟ್ ವಂದಿಸಿದರು.
ಅರ್ಚಿತ್ ಜೈನ್ ಕಾರ್ಯಕ್ರಮ ನಿರೂಪಿಸಿದರು.

Related posts

ಪುತ್ತಿಲ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಮಹಿಳಾ ಸಬಲೀಕರಣ ಕಾಯ೯ಕ್ರಮ: ಡಾ. ಹೇಮಾವತಿ ವಿ.ಹೆಗ್ಗಡೆಯವರಿಗೆ ಸಾಧನಾ ರಾಜ್ಯ ಪ್ರಶಸ್ತಿ ಪ್ರದಾನ

Suddi Udaya

ಬೆಳಾಲು ಪ್ಯಾಕ್ಸ್: ಆರ್ಥಿಕ ಅವ್ಯವಹಾರ ಪ್ರಕರಣಎರಡನೇ ಆರೋಪಿ ಪ್ರಶಾಂತ್ ಬಂಧನ

Suddi Udaya

ಉರುವಾಲು ನಿವಾಸಿ ನವವಿವಾಹಿತೆ ಪುತ್ತೂರಿನ ಪತಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ವೇಣೂರು: ಸುದೆರ್ದು ನಿಲಯದ ಶ್ರೀಮತಿ ಗೀತಾ ನಿಧನ

Suddi Udaya

ಉಪ್ಪಿನಂಗಡಿ-ಕುಪ್ಪೆಟ್ಟಿ ಹೆದ್ದಾರಿಯಲ್ಲಿ ಮರಣ ಗುಂಡಿಗಳ ತಾಂಡವ: ದುಸ್ತರಗೊಂಡ ಸಂಚಾರ | ವಾಹನ ಸವಾರರಿಗೆ ತೀವ್ರ ಸಂಕಷ್ಟ: ಸುದ್ದಿ ಉದಯ ಜನಧ್ವನಿ

Suddi Udaya
error: Content is protected !!