24 C
ಪುತ್ತೂರು, ಬೆಳ್ತಂಗಡಿ
June 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚಾರ್ಮಾಡಿ ಘಾಟಿಯಲ್ಲಿ ಮತ್ತೆ ಕಾಡಾನೆ ಪ್ರತ್ಯಕ್ಷ

ಚಾರ್ಮಾಡಿ ಘಾಟಿ ರಸ್ತೆಯಲ್ಲಿ ಇಂದು (ಮೇ 18) ಮಧ್ಯಾಹ್ನದ ಹೊತ್ತು ಕಾಡಾನೆ ಮತ್ತೆ ಕಂಡು ಬಂದಿದೆ.
ಈ ವಾರದಲ್ಲಿ ಇದು ಕಾಡಾನೆ ಕಂಡು ಬಂದಿರುವುದು ನಾಲ್ಕನೇ ಬಾರಿ. ಸೋಮವಾರದಿಂದ ಬುಧವಾರದವರೆಗೆ ಇಲ್ಲಿನ ರಸ್ತೆಯ ಒಂದನೇ ತಿರುವಿನಿಂದ ಒಂಬತ್ತನೇ ತಿರುವಿನ ಅಲ್ಲಲ್ಲಿ ಕಾಡಾನೆ ಹಗಲಲ್ಲಿ ಹಾಗೂ ರಾತ್ರಿ ಹೊತ್ತು ಕಂಡುಬಂದಿತ್ತು. ಬಳಿಕ ಅರಣ್ಯ ಇಲಾಖೆ ಘಾಟಿ ಭಾಗದಲ್ಲಿ ರಾತ್ರಿ ಗಸ್ತು ಕಾರ್ಯಾಚರಣೆ ಆರಂಭಿಸಿದೆ. ಇದರ ನಂತರ ಎರಡು ದಿನ ಕಾಡಾನೆ ಕಂಡು ಬಂದಿರಲಿಲ್ಲ.
ಆದರೆ ಶನಿವಾರ ಮಧ್ಯಾಹ್ನ 8ನೇ ತಿರುವಿನಲ್ಲಿ ಕಾಡಾನೆ ಮತ್ತೆ ಕಂಡುಬಂದಿದೆ. ರಸ್ತೆ ಬದಿ ಆಹಾರ ತಿನ್ನುತ್ತಿದ್ದ ಕಾಡಾನೆ ಬಳಿಕ ಅರ್ಧ ಗಂಟೆ ಹೊತ್ತು ಅಲ್ಲೇ ವಿರಮಿಸಿತ್ತು. ಆನೆ ರಸ್ತೆ ವ್ಯಾಪ್ತಿಯಲ್ಲಿ ಇದ್ದ ಕಾರಣ ಸುಮಾರು ಒಂದು ತಾಸು ಕಾಲ ವಾಹನ ಸವಾರರು ಕಾದು ನಿಂತರು.


ಅರಣ್ಯ ಇಲಾಖೆ ಡಿ ಆರ್ ಎಫ್ ಒ ನಾಗೇಶ್ ಸಿಬ್ಬಂದಿಗಳಾದ ದಿವಾಕರ ಮತ್ತು ಗೋಪಾಲ ಸ್ಥಳಕ್ಕೆ ಭೇಟಿ ನೀಡಿದಾಗ ಆನೆ ಅಲ್ಲಿಂದ ಕಾಡಿನ ಕಡೆಗೆ ಮುಂದುವರೆದಿತ್ತು. ತಂಡವು ಕಾಡಿನ ಒಳಭಾಗದಲ್ಲಿ ಅಲ್ಲಲ್ಲಿ ಪರಿಶೀಲನೆ ನಡೆಸಿತು. ಈ ಹೊತ್ತಿಗೆ ಆನೆ ಅಲ್ಲಿಂದ ಬೇರೆ ಜಾಗಕ್ಕೆ ತನ್ನ ಠಿಕಾಣಿಯನ್ನು ಬದಲಾಯಿಸಿತ್ತು.

Related posts

ತೆಕ್ಕಾರು ಗ್ರಾಮದಲ್ಲಿ ರಾತ್ರಿ ವೇಳೆ ಕಣ್ಣಾ ಮುಚ್ಚಾಲೆ ಆಡುತ್ತಿರುವ ವಿದ್ಯುತ್

Suddi Udaya

ಭಾರತ್ ಬೀಡಿ ಕಂಪೆನಿ ಉಳಿಸಿ ಭಾರತ್ ಬೀಡಿ ಕಂಪೆನಿ ಎದುರು ಸಿಐಟಿಯು ನೇತೃತ್ವದಲ್ಲಿ ಧರಣಿ ಸತ್ಯಾಗ್ರಹ

Suddi Udaya

ಕಳೆಂಜ ರಾಜೇಶ್ ಎಂ.ಕೆ ರವರ ಪೋಕ್ಸೋ ಪ್ರಕರಣ: ಅಪ್ರಾಪ್ತ ವಯಸ್ಕಳ ಮೂಲಕ ಸುಳ್ಳು ಪ್ರಕರಣ ದಾಖಲಿಸಿ ಕಾನೂನು ವ್ಯವಸ್ಥೆಯ ದುರ್ಬಳಕೆ ಮಾಡಿದ ಬಗ್ಗೆ ಮಂಗಳೂರು ವರಿಷ್ಠಾಧಿಕಾರಿ ಹಾಗೂ ಜಿಲ್ಲಾಧಿಕಾರಿಗೆ ಕಳೆಂಜ ಗ್ರಾಮಸ್ಥರಿಂದ ಮನವಿ

Suddi Udaya

ನಿಡ್ಲೆ: ನಿವೃತ್ತ ಶಿಕ್ಷಕ ರಾಮಣ್ಣ ಪೂಜಾರಿ ನಿಧನ

Suddi Udaya

ಬೆಳ್ತಂಗಡಿ: ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬೇಸಿಗೆ ಹಾಗೂ ಕ್ರೀಡಾ ಶಿಬಿರ ಉದ್ಘಾಟನೆ

Suddi Udaya

ಉಜಿರೆ: ಧ.ಮಂ.ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
error: Content is protected !!