30.5 C
ಪುತ್ತೂರು, ಬೆಳ್ತಂಗಡಿ
April 11, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚಾರ್ಮಾಡಿ ಘಾಟಿಯಲ್ಲಿ ಮತ್ತೆ ಕಾಡಾನೆ ಪ್ರತ್ಯಕ್ಷ

ಚಾರ್ಮಾಡಿ ಘಾಟಿ ರಸ್ತೆಯಲ್ಲಿ ಇಂದು (ಮೇ 18) ಮಧ್ಯಾಹ್ನದ ಹೊತ್ತು ಕಾಡಾನೆ ಮತ್ತೆ ಕಂಡು ಬಂದಿದೆ.
ಈ ವಾರದಲ್ಲಿ ಇದು ಕಾಡಾನೆ ಕಂಡು ಬಂದಿರುವುದು ನಾಲ್ಕನೇ ಬಾರಿ. ಸೋಮವಾರದಿಂದ ಬುಧವಾರದವರೆಗೆ ಇಲ್ಲಿನ ರಸ್ತೆಯ ಒಂದನೇ ತಿರುವಿನಿಂದ ಒಂಬತ್ತನೇ ತಿರುವಿನ ಅಲ್ಲಲ್ಲಿ ಕಾಡಾನೆ ಹಗಲಲ್ಲಿ ಹಾಗೂ ರಾತ್ರಿ ಹೊತ್ತು ಕಂಡುಬಂದಿತ್ತು. ಬಳಿಕ ಅರಣ್ಯ ಇಲಾಖೆ ಘಾಟಿ ಭಾಗದಲ್ಲಿ ರಾತ್ರಿ ಗಸ್ತು ಕಾರ್ಯಾಚರಣೆ ಆರಂಭಿಸಿದೆ. ಇದರ ನಂತರ ಎರಡು ದಿನ ಕಾಡಾನೆ ಕಂಡು ಬಂದಿರಲಿಲ್ಲ.
ಆದರೆ ಶನಿವಾರ ಮಧ್ಯಾಹ್ನ 8ನೇ ತಿರುವಿನಲ್ಲಿ ಕಾಡಾನೆ ಮತ್ತೆ ಕಂಡುಬಂದಿದೆ. ರಸ್ತೆ ಬದಿ ಆಹಾರ ತಿನ್ನುತ್ತಿದ್ದ ಕಾಡಾನೆ ಬಳಿಕ ಅರ್ಧ ಗಂಟೆ ಹೊತ್ತು ಅಲ್ಲೇ ವಿರಮಿಸಿತ್ತು. ಆನೆ ರಸ್ತೆ ವ್ಯಾಪ್ತಿಯಲ್ಲಿ ಇದ್ದ ಕಾರಣ ಸುಮಾರು ಒಂದು ತಾಸು ಕಾಲ ವಾಹನ ಸವಾರರು ಕಾದು ನಿಂತರು.


ಅರಣ್ಯ ಇಲಾಖೆ ಡಿ ಆರ್ ಎಫ್ ಒ ನಾಗೇಶ್ ಸಿಬ್ಬಂದಿಗಳಾದ ದಿವಾಕರ ಮತ್ತು ಗೋಪಾಲ ಸ್ಥಳಕ್ಕೆ ಭೇಟಿ ನೀಡಿದಾಗ ಆನೆ ಅಲ್ಲಿಂದ ಕಾಡಿನ ಕಡೆಗೆ ಮುಂದುವರೆದಿತ್ತು. ತಂಡವು ಕಾಡಿನ ಒಳಭಾಗದಲ್ಲಿ ಅಲ್ಲಲ್ಲಿ ಪರಿಶೀಲನೆ ನಡೆಸಿತು. ಈ ಹೊತ್ತಿಗೆ ಆನೆ ಅಲ್ಲಿಂದ ಬೇರೆ ಜಾಗಕ್ಕೆ ತನ್ನ ಠಿಕಾಣಿಯನ್ನು ಬದಲಾಯಿಸಿತ್ತು.

Related posts

ಬಳಂಜ:ಕಾರಣಿಕದ ಬೊಳ್ಳಜ್ಜ ಧ್ವನಿ ಸುರುಳಿ ಬಿಡುಗಡೆ

Suddi Udaya

ದ.ಕ.ಜಿ.ಪಂ.ಹಿ. ಪ್ರಾ. ಕೊಡಿಯಾಲಬೈಲು ಶಾಲೆಯಲ್ಲಿ ಸಾಮಾಜಿಕ ಪರಿಶೋಧನಾ ಶಾಲಾ ಪೋಷಕರ ಸಭೆ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ-200 ರಲ್ಲಿ ಸ್ವೀಪ್ ಸಮಿತಿಯಿಂದ ತಾಲೂಕಿನ 241 ಬಿಎಲ್ ಒ ಗಳಿಗೆ ತರಬೇತಿ

Suddi Udaya

ಧರ್ಮಸ್ಥಳದಲ್ಲಿ ಗೋ ರಥ: ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಂದ ಗೋ ರಥ ಯಾತ್ರೆಗೆ ಶುಭ ಹಾರೈಕೆ

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘ ಉಜಿರೆ ಇದರ 2023-24ನೇ ಸಾಲಿನ ವಾರ್ಷಿಕ ಮಹಾಸಭೆ

Suddi Udaya

ಡಾ. ಯು.ಸಿ. ಪೌಲೋಸ್‌ರವರ ಸೇವೆಗೆ “ಭಾರತದ ಜವಾಬ್ದಾರಿಯುತ ಮತ್ತು ಸಕ್ರಿಯ ನಾಗರಿಕ ಪ್ರಶಸ್ತಿ

Suddi Udaya
error: Content is protected !!