September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚಾರ್ಮಾಡಿ ಘಾಟಿಯಲ್ಲಿ ಮತ್ತೆ ಕಾಡಾನೆ ಪ್ರತ್ಯಕ್ಷ

ಚಾರ್ಮಾಡಿ ಘಾಟಿ ರಸ್ತೆಯಲ್ಲಿ ಇಂದು (ಮೇ 18) ಮಧ್ಯಾಹ್ನದ ಹೊತ್ತು ಕಾಡಾನೆ ಮತ್ತೆ ಕಂಡು ಬಂದಿದೆ.
ಈ ವಾರದಲ್ಲಿ ಇದು ಕಾಡಾನೆ ಕಂಡು ಬಂದಿರುವುದು ನಾಲ್ಕನೇ ಬಾರಿ. ಸೋಮವಾರದಿಂದ ಬುಧವಾರದವರೆಗೆ ಇಲ್ಲಿನ ರಸ್ತೆಯ ಒಂದನೇ ತಿರುವಿನಿಂದ ಒಂಬತ್ತನೇ ತಿರುವಿನ ಅಲ್ಲಲ್ಲಿ ಕಾಡಾನೆ ಹಗಲಲ್ಲಿ ಹಾಗೂ ರಾತ್ರಿ ಹೊತ್ತು ಕಂಡುಬಂದಿತ್ತು. ಬಳಿಕ ಅರಣ್ಯ ಇಲಾಖೆ ಘಾಟಿ ಭಾಗದಲ್ಲಿ ರಾತ್ರಿ ಗಸ್ತು ಕಾರ್ಯಾಚರಣೆ ಆರಂಭಿಸಿದೆ. ಇದರ ನಂತರ ಎರಡು ದಿನ ಕಾಡಾನೆ ಕಂಡು ಬಂದಿರಲಿಲ್ಲ.
ಆದರೆ ಶನಿವಾರ ಮಧ್ಯಾಹ್ನ 8ನೇ ತಿರುವಿನಲ್ಲಿ ಕಾಡಾನೆ ಮತ್ತೆ ಕಂಡುಬಂದಿದೆ. ರಸ್ತೆ ಬದಿ ಆಹಾರ ತಿನ್ನುತ್ತಿದ್ದ ಕಾಡಾನೆ ಬಳಿಕ ಅರ್ಧ ಗಂಟೆ ಹೊತ್ತು ಅಲ್ಲೇ ವಿರಮಿಸಿತ್ತು. ಆನೆ ರಸ್ತೆ ವ್ಯಾಪ್ತಿಯಲ್ಲಿ ಇದ್ದ ಕಾರಣ ಸುಮಾರು ಒಂದು ತಾಸು ಕಾಲ ವಾಹನ ಸವಾರರು ಕಾದು ನಿಂತರು.


ಅರಣ್ಯ ಇಲಾಖೆ ಡಿ ಆರ್ ಎಫ್ ಒ ನಾಗೇಶ್ ಸಿಬ್ಬಂದಿಗಳಾದ ದಿವಾಕರ ಮತ್ತು ಗೋಪಾಲ ಸ್ಥಳಕ್ಕೆ ಭೇಟಿ ನೀಡಿದಾಗ ಆನೆ ಅಲ್ಲಿಂದ ಕಾಡಿನ ಕಡೆಗೆ ಮುಂದುವರೆದಿತ್ತು. ತಂಡವು ಕಾಡಿನ ಒಳಭಾಗದಲ್ಲಿ ಅಲ್ಲಲ್ಲಿ ಪರಿಶೀಲನೆ ನಡೆಸಿತು. ಈ ಹೊತ್ತಿಗೆ ಆನೆ ಅಲ್ಲಿಂದ ಬೇರೆ ಜಾಗಕ್ಕೆ ತನ್ನ ಠಿಕಾಣಿಯನ್ನು ಬದಲಾಯಿಸಿತ್ತು.

Related posts

ಬೆಳ್ತಂಗಡಿ: ಎಸ್.ಎನ್. ಕಂಪ್ಯೂಟರ್ಸ್ ಮತ್ತು ಸೈಬರ್ ಕೇಂದ್ರ ಸ್ಥಳಾಂತರಗೊಂಡು ಪುನರಾರಂಭ

Suddi Udaya

ಅಂಗಡಿಯಲ್ಲಿದ್ದ ಕಾರ್ಮಿಕನ ಗಮನ ಬೇರೆಡೆ ಸೆಳೆದು ಲಕ್ಷಾಂತರ ನಗದು ದೋಚಿದ ಕಳ್ಳರು: ಮಾಲಾಡಿ ಪುಷ್ಪರಾಜ ಹೆಗ್ಡೆಯವರ ಅಡಕೆ ವ್ಯಾಪಾರ ಅಂಗಡಿಯಿಂದ ರೂ. 2.31 ಲಕ್ಷ ಕಳವು

Suddi Udaya

ಚಾರ್ಮಾಡಿ ಮೃತ್ಯುಂಜಯ ನದಿ ಕಿನಾರೆಯಲ್ಲಿ ದನದ ತ್ಯಾಜ್ಯ ಎಸೆದ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

Suddi Udaya

ಜ.14-18: ಅನಾರು ಶ್ರೀ ದುರ್ಗಾಪರಮೇಶ್ವರೀ ದೇವಿಯ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ಉಜಿರೆ: ಹಳೆಪೇಟೆ ಮುಹಿಯುದ್ದೀನ್ ಜುಮಾ ಮಸ್ಜಿದ್ ಯಲ್ಲಿ ಸಂಭ್ರಮದ ಈದ್ ಮೀಲಾದ್ ಆಚರಣೆ

Suddi Udaya

ಲಾಯಿಲ ಗ್ರಾಮ ಪಂಚಾಯತ್ ನಲ್ಲಿ ಮಕ್ಕಳ ಗ್ರಾಮ ಸಭೆ

Suddi Udaya
error: Content is protected !!