July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚಾರ್ಮಾಡಿ ಘಾಟಿಯಲ್ಲಿ ಮತ್ತೆ ಕಾಡಾನೆ ಪ್ರತ್ಯಕ್ಷ

ಚಾರ್ಮಾಡಿ ಘಾಟಿ ರಸ್ತೆಯಲ್ಲಿ ಇಂದು (ಮೇ 18) ಮಧ್ಯಾಹ್ನದ ಹೊತ್ತು ಕಾಡಾನೆ ಮತ್ತೆ ಕಂಡು ಬಂದಿದೆ.
ಈ ವಾರದಲ್ಲಿ ಇದು ಕಾಡಾನೆ ಕಂಡು ಬಂದಿರುವುದು ನಾಲ್ಕನೇ ಬಾರಿ. ಸೋಮವಾರದಿಂದ ಬುಧವಾರದವರೆಗೆ ಇಲ್ಲಿನ ರಸ್ತೆಯ ಒಂದನೇ ತಿರುವಿನಿಂದ ಒಂಬತ್ತನೇ ತಿರುವಿನ ಅಲ್ಲಲ್ಲಿ ಕಾಡಾನೆ ಹಗಲಲ್ಲಿ ಹಾಗೂ ರಾತ್ರಿ ಹೊತ್ತು ಕಂಡುಬಂದಿತ್ತು. ಬಳಿಕ ಅರಣ್ಯ ಇಲಾಖೆ ಘಾಟಿ ಭಾಗದಲ್ಲಿ ರಾತ್ರಿ ಗಸ್ತು ಕಾರ್ಯಾಚರಣೆ ಆರಂಭಿಸಿದೆ. ಇದರ ನಂತರ ಎರಡು ದಿನ ಕಾಡಾನೆ ಕಂಡು ಬಂದಿರಲಿಲ್ಲ.
ಆದರೆ ಶನಿವಾರ ಮಧ್ಯಾಹ್ನ 8ನೇ ತಿರುವಿನಲ್ಲಿ ಕಾಡಾನೆ ಮತ್ತೆ ಕಂಡುಬಂದಿದೆ. ರಸ್ತೆ ಬದಿ ಆಹಾರ ತಿನ್ನುತ್ತಿದ್ದ ಕಾಡಾನೆ ಬಳಿಕ ಅರ್ಧ ಗಂಟೆ ಹೊತ್ತು ಅಲ್ಲೇ ವಿರಮಿಸಿತ್ತು. ಆನೆ ರಸ್ತೆ ವ್ಯಾಪ್ತಿಯಲ್ಲಿ ಇದ್ದ ಕಾರಣ ಸುಮಾರು ಒಂದು ತಾಸು ಕಾಲ ವಾಹನ ಸವಾರರು ಕಾದು ನಿಂತರು.


ಅರಣ್ಯ ಇಲಾಖೆ ಡಿ ಆರ್ ಎಫ್ ಒ ನಾಗೇಶ್ ಸಿಬ್ಬಂದಿಗಳಾದ ದಿವಾಕರ ಮತ್ತು ಗೋಪಾಲ ಸ್ಥಳಕ್ಕೆ ಭೇಟಿ ನೀಡಿದಾಗ ಆನೆ ಅಲ್ಲಿಂದ ಕಾಡಿನ ಕಡೆಗೆ ಮುಂದುವರೆದಿತ್ತು. ತಂಡವು ಕಾಡಿನ ಒಳಭಾಗದಲ್ಲಿ ಅಲ್ಲಲ್ಲಿ ಪರಿಶೀಲನೆ ನಡೆಸಿತು. ಈ ಹೊತ್ತಿಗೆ ಆನೆ ಅಲ್ಲಿಂದ ಬೇರೆ ಜಾಗಕ್ಕೆ ತನ್ನ ಠಿಕಾಣಿಯನ್ನು ಬದಲಾಯಿಸಿತ್ತು.

Related posts

ಹೊಟ್ಟೆ ನೋವಿನಿಂದ ಬಳಲಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

Suddi Udaya

ಚಾರ್ಮಾಡಿ: ಇರ್ಫಾನ್ ಅಸೌಖ್ಯದಿಂದ ನಿಧನ

Suddi Udaya

ಧರ್ಮಸ್ಥಳ ಗ್ರಾಮ ಪಂಚಾಯತ್ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ಧರ್ಮಸ್ಥಳದ ಬಿ. ಪ್ರಕಾಶ ದೇವಾಡಿಗರವರು ಸ್ಯಾಕ್ಸೋಪೋನ್ ಕಾರ್ಯಕ್ರಮ ನೀಡಲು ಮೂರನೇ ಬಾರಿಗೆ ಅಮೇರಿಕಕ್ಕೆ

Suddi Udaya

ಪುದುವೆಟ್ಟು ಶ್ರೀ.ಧ.ಮಂ ಅ.ಹಿ.ಪ್ರಾ. ಶಾಲೆಯಲ್ಲಿ ಯಕ್ಷಗಾನ  ಮತ್ತು ನೃತ್ಯ ತರಗತಿಗಳ ಉದ್ಘಾಟನೆ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ: ಪುದುವೆಟ್ಟು ಶ್ರೀ ಗುರುನಾರಾಯಣ ಸೇವಾ ಸಂಘದಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!