September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ತಾಲೂಕು ವಿಕಲಚೇತನರ ಪುನರ್ವಸತಿ ಕಾರ್ಯಕರ್ತರ ಪ್ರಗತಿ ಪರಿಶೀಲನ ಸಭೆ

ಬೆಳ್ತಂಗಡಿ: ತಾಲೂಕು ವಿಕಲಚೇತನರ ಪುನರ್ವಸತಿ ಕಾರ್ಯಕರ್ತರ ಪ್ರಗತಿ ಪರಿಶೀಲನ ಸಭೆಯು ತಾಲೂಕು ವಿಕಲಚೇತನರ ಮೇಲ್ವಿಚಾರಕರಾದ ಜೋನ್ ಬ್ಯಾಪ್ಟಿಸ್ಟ್ ಡಿಸೋಜ ಇವರ ಅಧ್ಯಕ್ಷತೆಯಲ್ಲಿ ತಾಲೂಕು ಪಂಚಾಯತ್ ನ ಸಮರ್ಥ ಸೌಧ, ಭವನ, ಬೆಳ್ತಂಗಡಿ ಇಲ್ಲಿ ಮೇ 18 ರಂದು ನಡೆಸಲಾಯಿತು.

ಈ ಸಂದರ್ಭದಲ್ಲಿ ಜೋನ್ ಬ್ಯಾಪಿಸ್ಟ್ ಡಿಸೋಜ ಅವರು ಮಾತಾಡಿ ಪ್ರತೀ ತಿಂಗಳ ಮೂರನೇ ಮಂಗಳವಾರ ನಡೆಯುವ ವಿಕಲಚೇತನರ ಹೊಸ ಗುರುತಿಸುವಿಕೆ ಹಾಗೂ ನವೀಕರಣದ ಶಿಬಿರವನ್ನು ಇನ್ನೂ ಪರಿಣಾಮಕಾರಿಯಾಗಿ ನಡೆಸಲು ಪುನರ್ವಸತಿ ಕಾರ್ಯಕರ್ತರು ಪ್ರತಿ ಮಾಸಿಕ ಕ್ಯಾಂಪ್ ಗಳಲ್ಲಿ ಜವಾಬ್ದಾರಿಯುತ ಕರ್ತವ್ಯ ನಿರ್ವಹಿಸುವ ಬಗ್ಗೆ ವಿವರಣೆ ಹಾಗೂ ಹೊಸ ಪ್ರಕಾರವನ್ನು ತಿಳಿಸಿದರು. ಹಾಗೂ ಪ್ರತಿ ತಿಂಗಳಲ್ಲಿ ನಡೆಸುವ ಶಿಬಿರವು ಇನ್ನೂ ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಹಾಗೂ ಎಲ್ಲಾ ರೀತಿಯಲ್ಲಿ ತಾಲ್ಲೂಕಿನ ವಿಕಲಚೇತನರಿಗೆ ಅನುಕೂಲ ಆಗಲು ಮತ್ತು ಇನ್ನೂ ಪರಿಣಾಮಕಾರಿಯಾಗಿ ಯಶಸ್ವಿ ಆಗಲು ತಾಲೂಕಿನ ಗ್ರಾಮೀಣ/ನಗರ ಪುನರ್ವಸತಿ ಕಾರ್ಯಕರ್ತರ 4 ಗುಂಪುಗಳಾಗಿ ವಿಂಗಡಣೆ ಮಾಡಿದ್ದು ಪ್ರತೀ ಗುಂಪಿನಲ್ಲಿ ಒಬ್ಬರನ್ನು ನಾಯಕನಾಗಿ ಮಾಡಿ ಪ್ರತಿ ತಿಂಗಳ ಶಿಬಿರವು ಬಹಳ ಅಚ್ಚುಕಟ್ಟಾಗಿ ನಡೆಸಲು ಬೇಕಾದ ಸಲಹೆ ಸೂಚನೆಗಳನ್ನು ನೀಡಿದರು. ಮತ್ತು ತಾಲ್ಲೂಕಿನ ಎಲ್ಲಾ ಕಾರ್ಯಕರ್ತರ ಮಾಸಿಕ ವರದಿಯನ್ನು ಪಡೆದರು ಹಾಗೂ ರಾಜ್ಯ ವಿಕಲಚೇತನರ ಇಲಾಖೆಯಿಂದ ಬಂದಿರುವ ಮಾಹಿತಿಯನ್ನು ನೀಡಿದರು.

ಈ ಸಂದರ್ಭದಲ್ಲಿ ತಾಲೂಕಿನ ಗ್ರಾಮೀಣ ನಗರ ಪುನರ್ವಸತಿ ಕಾರ್ಯಕರ್ತರು ಭಾಗವಹಿಸಿದ್ದರು.

Related posts

ಕಳೆಂಜ ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಕಿಲ್ಲೂರಿನಲ್ಲಿ ಗ್ರಾಮೀಣ ಆಟಗಳ ಸಂಗಮ

Suddi Udaya

ಶಾಸಕ ಹರೀಶ್ ಪೂಂಜರವರ ಜನ್ಮದಿನದ ಪ್ರಯುಕ್ತ ಸಾಮಾಜಿಕ ಜಾಲತಾಣ ಸಹಸoಚಾಲಕ ಸಂದೀಪ್ ರೈ ಧರ್ಮಸ್ಥಳ ರವರಿಂದ ಕೊಕ್ಕಡದ ಎಂಡೋಸಲ್ಫಾನ್ ಪುನರ್ವಸತಿ ಕೇಂದ್ರದ ವಿಶೇಷ ಮಕ್ಕಳಿಗೆ ವಿಶೇಷ ಭೋಜನ

Suddi Udaya

ಶಾಸಕರಿಂದ ವಿವಾದಾತ್ಮಕ ಹೇಳಿಕೆ ಆರೋಪಿಸಿ ಮಹಿಳಾ ಕಾಂಗ್ರೆಸ್ ನಿಂದ ಠಾಣೆಗೆ ದೂರು

Suddi Udaya

ಮಚ್ಚಿನ: ಕಲ್ಲಗುಡ್ಡೆ ರಸ್ತೆಯಲ್ಲಿ ತುಂಬಿದ ನೀರು

Suddi Udaya

ಸಮರ್ಪಕ ಚರಂಡಿ ವ್ಯವಸ್ಥೆಯಿಲ್ಲದ್ದೇ ರಸ್ತೆಯಲ್ಲೇ ಹರಿದ ನೀರು: ಬಂಗಾಡಿ ಸಿಎ ಬ್ಯಾಂಕ್ ಹಾಗೂ ಜೈನ ಬಸದಿ ವತಿಯಿಂದ ಪೈಪ್ ಅಳವಡಿಕೆ: “ಸುದ್ದಿ ಉದಯ ಜನಧ್ವನಿ Effect”

Suddi Udaya
error: Content is protected !!