March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭಾರತೀಯ ಜೈನ್ ಮಿಲನ್ ಬೆಳ್ತಂಗಡಿ ಶಾಖೆಯ ಮಾಸಿಕ ಸಭೆ

ಉಜಿರೆ: ಭಾರತೀಯ ಜೈನ್ ಮಿಲನ್ ಬೆಳ್ತಂಗಡಿ ಶಾಖೆಯ ಮಾಸಿಕ ಸಭೆಯು ಇತ್ತೀಚೆಗೆ ಉಜಿರೆಯಲ್ಲಿ ಮಿಲನ್ ಅಧ್ಯಕ್ಷರಾದ ವೀರ್ ಡಾ| ನವೀನ್ ಕುಮಾರ್ ಜೈನ್ ಇವರ ಅಧ್ಯಕ್ಷತೆಯಲ್ಲಿ ಜರಗಿತು.

ಜೈನ್ ಮಿಲನ್ ನ ಕಾರ್ಯಕ್ರಮಗಳು ಹಾಗೂ ಮುಂದಿನ ಯೋಜನೆಗಳ ಬಗ್ಗೆ ಸವಿವರವಾಗಿ ಅಧ್ಯಕ್ಷರು ವಿವರಿಸಿ ತಿಳಿಸಿದರು, ವೀರ್ ಭುಜಬಲಿಯವರು ಯಶಸ್ವಿ ಮಾಸಿಕ ಸಭೆ ನಡೆಸುವ ಬಗ್ಗೆ ಸಲಹೆ ನೀಡಿದರು, ಧೀಮಹಿ ಮಹಿಳಾ ಸಮಾಜದ ಅಧ್ಯಕ್ಷೆ ವೀರಾಂಗನ ಶ್ರೀಮತಿ ಡಾಕ್ಟರ್ ರಜತ ಅವರು ಮಾತನಾಡಿ ತಿಂಗಳಿಗೆ ಒಂದು ಸಲ ಪರಸ್ಪರ ವಿಚಾರ ವಿನಿಮಯ ಮಾಡಿಕೊಳ್ಳಲು ಇಂತಹ ಸಭೆಗಳಿಂದ ಅವಕಾಶ ದೊರೆಯುತ್ತದೆ ಮತ್ತು ಇದನ್ನು ಎಲ್ಲಾ ಸದಸ್ಯರು ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ಮಿಲನ್ ನಿರ್ದೇಶಕ ವೀರ್ ಬಿ. ಸೋಮಶೇಖರ ಶೆಟ್ಟಿ ಅವರು ಮಾತನಾಡಿ ಮಿಲನ್ ಸಂಘಟನೆಯ ಮಹತ್ವ ಹಾಗೂ ಅವಕಾಶಗಳ ಬಗ್ಗೆ ಮಾಹಿತಿ ನೀಡಿದರು ಮತ್ತು ಸಂಘಟನೆ ಬಲಗೊಳಿಸುವಲ್ಲಿ ಸದಸ್ಯರ ದಕಾರವನ್ನು ಕೋರಿದರು. ವೇದಿಕೆಯಲ್ಲಿ ವೀರ್ ಮುನಿರಾಜ ಅಜ್ರಿ ಉಪಸ್ಥಿತರಿದ್ದರು.


ಕಾರ್ಯದರ್ಶಿ ವೀರ್ ಸಂಪತ್ ಕುಮಾರ್ ಕಾರ್ಯ ಕ್ರಮ ನಿರ್ವಹಿಸಿದರು, ವೀರ್ ನಿಖಿತ್ ವಂದಿಸಿದರು.

Related posts

ಉಜಿರೆ ಎಸ್.ಡಿ.ಎಂ ಪ.ಪೂ ಕಾಲೇಜಿನಲ್ಲಿ ರಾಷ್ಟ್ರೀಯ ಯುವ ದಿನಾಚರಣೆ

Suddi Udaya

ಪಡಂಗಡಿಯಲ್ಲಿ ಉಚಿತ ಆರೋಗ್ಯ ತಪಾಸಣೆ, ಕಣ್ಣಿನ ತಪಾಸಣೆ ಹಾಗೂ ಉಚಿತ ಮಹಿಳೆಯರ ಕ್ಯಾನ್ಸರ್ ತಪಾಸಣಾ ಶಿಬಿರ

Suddi Udaya

ಅರಸಿನಮಕ್ಕಿ: ಮೂಜಿನಾಡು ನಾರಾಯಣ ಟೈಲರ್ ನಿಧನ

Suddi Udaya

ಗೇರುಕಟ್ಟೆ :ಸಂವಿಧಾನ ಜಾಗೃತಿ ಜಾಥಾ

Suddi Udaya

ಗುರುವಾಯನಕೆರೆ-ಉಜಿರೆ ನ್ಯೂ ಸಿಟಿ ಎಲೆಕ್ಟ್ರಾನಿಕ್ಸ್ ನಲ್ಲಿ ದೀಪಾವಳಿ ಪ್ರಯುಕ್ತ ಶೇ.40ರಷ್ಟು ಡಿಸ್ಕೌಂಟ್ ಸೇಲ್

Suddi Udaya

ಲಾಯಿಲ ಗ್ರಾ.ಪಂ ಹಾಗೂ ನಡ ಗ್ರಾ.ಪಂ. ನಿಂದ “ಸ್ವಚತೆಯೇ ಸೇವೆ 2024” ಅಂದೋಲನದಡಿ ಬೃಹತ್ ಸ್ವಚ್ಚತಾ ಕಾರ್ಯಕ್ರಮ

Suddi Udaya
error: Content is protected !!